ಯುವ ಡಾಟ್ ಕಾಂ

ಮೈಸೂರಿನ ಬಾಡಿ ಬಿಲ್ಡರ್‌ ಅರ್ಚನಾ ಸಿಂಗ್‌

-ಅನಿಲ್ ಅಂತರಸಂತೆ

ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಪುರುಷರಷ್ಟೇ ಸಮಾನವಾಗಿ ಸಾಧನೆಯ ಹಾದಿಯಲ್ಲಿದ್ದು, ಮಹಿಳೆಯರಿಂದ ಇದು
ಸಾಧ್ಯವಾಗದು ಎಂಬುದನ್ನೂ ಸಾಧಿಸಿ ತೋರಿಸುತ್ತಿದ್ದಾರೆ. ಅಂತಹದೊಂದು ಸಾಧನೆಯ ಬೆನ್ನತ್ತಿ, ದೇಹದಾರ್ಢ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಾ ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದಾರೆ ಮೈಸೂರಿನ ಅರ್ಚನಾ ಸಿಂಗ್.

ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿ ಅನಂತ್ ಸಿಂಗ್ ಹಾಗೂ ನಳಿನಾ ಬಾಯಿ ದಂಪತಿಯ ಮೊದಲ ಪುತ್ರಿ ಅರ್ಚನಾ ಸಿಂಗ್ ದೇಹದಾರ್ಢ್ಯ (ಬಾಡಿ ಬಿಲ್ಡಿಂಗ್) ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ವೇದಿಕೆ ಮೇಲೆ ಬಾಡಿ ಶೋ ನೀಡಿದ ಮೊದಲ ಮೈಸೂರಿನ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2025ರ ಫೆಬ್ರವರಿ, 28ರಂದು ಬೆಂಗಳೂರಿನಲ್ಲಿ ನಡೆದ ‘ಮಿಸ್ಟರ್ ಭಾರತ್’ ಸ್ಪರ್ಧೆಯಲ್ಲಿ ಭಾಗವಹಿಸಿ ‘ಮಿಸ್ಟರ್ ಭಾರತ್’ ಟೈಟಲ್ ಗೆಲ್ಲುವ ಮೂಲಕ ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ಸಾಧನೆಯ ಹಾದಿ ಹಿಡಿದಿದ್ದಾರೆ.

ಅರ್ಚನಾ ಕಳೆದ 8 ವರ್ಷಗಳಿಂದ ಫಿಟ್‌ನೆಸ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದು, ತಾವೂ ಬಾಡಿ ಬಿಲ್ಡಿಂಗ್ ಮಾಡಬೇಕು ಎಂಬ ಹಂಬಲದೊಂದಿಗೆ ಈ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದಾರೆ. ಆರಂಭದಲ್ಲಿ ಮಹಿಳೆಯರಿಂದ ಇದೆಲ್ಲಾ ಅಸಾಧ್ಯ ಎಂದವರೇ ಹೆಚ್ಚು. ಕುಟುಂಬದವರಿಗೆ ನಾನು ಅಂದುಕೊಂಡ ಕೆಲಸ ಸಾಧಿಸುತ್ತೇನೆ ಎಂಬ ನಂಬಿಕೆ ಇತ್ತು. ಅವರೆಲ್ಲರ ಬೆಂಬಲ, ಸ್ನೇಹಿತರ ಪ್ರೋತ್ಸಾಹದಿಂದ ನಾನು ಬಾಡಿ ಬಿಲ್ಡಿಂಗ್  ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಯಿತು ಎನ್ನುತ್ತಾರೆ ಅರ್ಚನಾ.

ಅರ್ಚನಾರವರ ಈ ಸಾಧನೆಗೆ ಬೆನ್ನಲುಬಾಗಿ ನಿಂತವರು ಅವರ ತರಬೇತುದಾರ ಅಭಿಲಾಷ್ ಮೋಹಿತ್. ಮುಂಜಾನೆ 5.30 ಕ್ಕೆ ಜಿಮ್‌ಗೆ  ತೆರಳುವ ಅರ್ಚನಾ ತಮ್ಮ ದಿನದ ಬಹುಪಾಲು ಸಮಯವನ್ನು ಅಲ್ಲಿಯೇ ಕಳೆಯುತ್ತಾರೆ. ಸದಾ ವರ್ಕ್‌ಔಟ್  ಮಾಡುತ್ತಿರುವ ಅರ್ಚನಾರಿಗೆ ಬೇಕಾದ ಪೌಷ್ಟಿಕ ಆಹಾರವನ್ನು ಕುಟುಂಬಸ್ಥರೇ ಪೂರೈಕೆ ಮಾಡುತ್ತಾ ಬೆಂಬಲಿಸುತ್ತಿದ್ದು, ತಮ್ಮ ಅಕ್ಕಳ ಸಾಧನೆಗೆ ಅಳಿಲು ಸೇವೆಯಂತೆ ವಿವಿಧ ಪೋಷಕಾಂಶಯುಕ್ತ ಆಹಾರವನ್ನು ತಯಾರಿಸಿಕೊಡುತ್ತಿದ್ದಾರೆ ತಂಗಿ ಆಕಾಂಕ್ಷ. ಇವರ ಪ್ರೋತ್ಸಾಹದಿಂದ ಅರ್ಚನಾ ಈಗ ‘ಮಿಸ್ಟರ್ ಭಾರತ್’ ಆಗಿ ಹೊರಹೊಮ್ಮಿದ್ದು, ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವ ಹಂಬಲ ಹೊಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜಿಮ್ ಎಂದರೆ ಹೆದರುವವರೇ ಹೆಚ್ಚಾಗಿದ್ದಾರೆ. ಆರೋಗ್ಯ ಸಮಸ್ಯೆಗಳು ಹೆಚ್ಚಾಗಬಹುದು ಅಡ್ಡಪರಿಣಾಮಗಳು ಉಂಟಾಗಬಹುದು ಎಂದು ಕೊಳ್ಳುವವರೇ ಹೆಚ್ಚು. ಈಗಾಗಿಯೇ ಬಹುತೇಕ ಯುವಕರು ಜಿಮ್‌ಗಳಿಗೆ ಬರುವುದಿಲ್ಲ. ಅದರಲ್ಲಿಯೂ ಮಹಿಳೆಯರಂತೂ ಜಿಮ್‌ನಿಂದ ಅಡ್ಡಪರಿಣಾಮಗಳು ಹೆಚ್ಚು ಎಂಬ ತಪ್ಪು ಕಲ್ಪನೆಯಿಂದ ಜಿಮ್‌ಗಳಿಗೆ ಬರುವುದೇ ಇಲ್ಲ. ಜಿಮ್‌ನಿಂದ ಯಾವುದೇ ಅಡ್ಡಪರಿಣಾಮಗಳಾಗುವುದಿಲ್ಲ.
ನಾವು ಜಿಮ್ ಮಾಡಿದಷ್ಟೂ ಆರೋಗ್ಯಕರವಾಗಿರುತ್ತೇವೆ. ಇತ್ತೀಚಿನ ಆಹಾರದ ಗುಣಮಟ್ಟ ಕಡಿಮೆಯಿದ್ದು, ಬಹುಬೇಗ ಕಾಯಿಲೆಗಳಿಗೆ ತುತ್ತಾಗುವವರಿದ್ದಾರೆ. ಆದ್ದರಿಂದ ಎಲ್ಲರೂ ಕನಿಷ್ಠವೆಂದರೂ ದಿನದಲ್ಲಿ 1 ಗಂಟೆಯಾದರೂ ಜಿಮ್ ಮಾಡಬೇಕು. ಇದು ನಮ್ಮ ಜೀವನದ ಒಂದು ಅವಿಭಾಜ್ಯ ಅಂಗವಿದ್ದಂತೆ. ಇದರಿಂದ ನಮ್ಮ ಆರೋಗ್ಯ ರಕ್ಷಣೆ ಸಾಧ್ಯ ಎನ್ನುತ್ತಾರೆ ಅರ್ಚನಾ.

ಆರಂಭದಲ್ಲಿ ತುಂಬ ದುರ್ಬಲರಾಗಿದ್ದ ಅರ್ಚನಾ ನಂತರದ ದಿನಗಳಲ್ಲಿ ತಮ್ಮಷ್ಟಕ್ಕೇ ತಾವೇ ಪ್ರೇರಣೆಗೊಂಡು ಬಾಡಿ ಬಿಲ್ಡಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದರು. ಸದ್ಯ ಮೈಸೂರಿನಲ್ಲಿ ಏಕೈಕ ಮಹಿಳಾ ಸರ್ಟಿಫೈಡ್ ಫಿಟ್‌ನೆಸ್  ಟ್ರೈನರ್ ಆಗಿರುವ ಇವರು, ಯುವ ಜನತೆ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು. ತಾವೂ ಫಿಟ್ ಆಗಿ ಇರಬೇಕು ಎಂದರೆ, ದಿನದಲ್ಲಿ ಒಂದು ಗಂಟೆಯಾದರೂ ಜಿಮ್  ಮಾಡಬೇಕು ಎಂದು ಸಲಹೆ ನೀಡುತ್ತಾರೆ.

ಮಹಿಳೆಯರಿಗೆ ಇದೊಂದು ಹೊಸ ಕ್ಷೇತ್ರ. ನಮ್ಮ ಆತ್ಮರಕ್ಷಣೆಗಾದರೂ ನಾವು ಫಿಟ್ ಆಗಿ ಇರಬೇಕು. ಅದಕ್ಕಾಗಿ ಜಿಮ್ ಮಾಡಬೇಕು. ಆರಂಭದಲ್ಲಿ ಕೆಲವರು ಮಹಿಳೆಯರಿಂದ ಬಾಡಿ ಬಿಲ್ಡಿಂಗ್ ಸಾಧ್ಯವೇ? ಏನಾದರೂ ಅಡ್ಡಪರಿಣಾಮಗಳು ಉಂಟಾಗಬಹುದು ಎಂದರು. ಅದನ್ನೆಲ್ಲ ಚಾಲೆಂಜ್ ಆಗಿ
ಸ್ವೀಕರಿಸಿ ಬಾಡಿ ಬಿಲ್ಡಿಂಗ್ ಆರಂಭಿಸಿದೆ. ಕುಟುಂಬದವರ ಬೆಂಬಲದಿಂದಾಗಿ ಸಾಧನೆಯ ಹಾದಿಯಲ್ಲಿದ್ದೇನೆ.

-ಅರ್ಚನಾ ಸಿಂಗ್, ಮಹಿಳಾ ಬಾಡಿ ಬಿಲ್ಡರ್, ಮೈಸೂರು.

 

 

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

3 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

5 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

5 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

5 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

5 hours ago