ಯುವ ಡಾಟ್ ಕಾಂ

500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮೇ 23 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹತ್ತನೇ ತರಗತಿ ಪಾಸಾಗಿರುವ ಮತ್ತು ಸ್ಥಳೀಯ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ ೧೮ ರಿಂದ 26 ವರ್ಷಗಳು. ಆನ್ ಲೈನ್ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆಗಳ ಮೂಲಕ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು bank ofbaroda.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕನಿಷ್ಠ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಜೊತೆಗೆ ಅರ್ಜಿದಾರರು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ಭಾಷೆಯನ್ನು ಓದುವುದು, ಬರೆಯುವುದು, ಮಾತನಾಡುವ ಜ್ಞಾನವನ್ನು ಹೊಂದಿರಬೇಕು.

ನೇಮಕಾತಿ ಪ್ರಕ್ರಿಯೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಇದು ವಿವಿಧ ವಿಷಯಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಮತ್ತು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿತ ಕನಿಷ್ಠ ಅಂಕಗಳನ್ನು ಪಡೆಯಬೇಕಾಗುತ್ತದೆ. ಎರಡನೇ ಹಂತದಲ್ಲಿ ಮೊದಲ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಸ್ಥಳೀಯ ಭಾಷೆಯಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳ ಬೇಕಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವರ್ಗಗಳಿಗೆ ಅನುಗುಣವಾಗಿ ಶುಲ್ಕ ಪಾವತಿಸ ಬೇಕಿದೆ. ಸಾಮಾನ್ಯ, ಹಿಂದುಳಿದ ವರ್ಗಗಳು, ಇಡಬ್ಲ್ಯುಎಸ್ ವರ್ಗದ ಜನರು600ರೂ. ಶುಲ್ಕ ಪಾವತಿಸಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆಯರು, ವಿಶೇಷಚೇತನರು, ಮಾಜಿ ಸೈನಿಕರು 100 ರೂ. ಶುಲ್ಕ ಪಾವತಿಸಬೇಕಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago