ಬ್ಯಾಂಕ್‌ ಖಾತೆಗೆ ಬಯೋಮೆಟ್ರಿಕ್‌ ಲಾಕ್

ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಖಾತೆ ಹಣವನ್ನೆಲ್ಲ ಕ್ಷಣ ಮಾತ್ರದಲ್ಲಿ ದೋಚುವ ಡಿಜಿಟಲ್ ಹ್ಯಾಕರ್‌ಗಳು ಈಗ ಹೆಚ್ಚಾಗುತ್ತಿದ್ದಾರೆ.

ನಾವು ಆಧಾರ್ ಕಾರ್ಡ್ ಮಾಡಿಸುವಾಗ ಕಣ್ಣುಗಳ ಐರಿಸ್ ಗಳನ್ನು ಸೆರೆಹಿಡಿಯಲಾಗುತ್ತದೆ. ಹಾಗೂ ಕೈ ಬೆರಳುಗಳ ಗುರುತನ್ನೂ ಪಡಲಾಗುತ್ತದೆ. ಫೋಟೋ, ವೈಯಕ್ತಿಕ ವಿವರಗಳ ಜತೆಗೆ ಈ ಎಲ್ಲ ದೈಹಿಕ ಗುರುತುಗಳು ನಮ್ಮ ನಂಬರ್‌ನೊಂದಿಗೆ ಲಿಂಕ್ ಆಗಿರಲಿವೆ. ಇದರೊಂದಿಗೆ ಬ್ಯಾಂಕ್ ಖಾತೆ ಹೊಂದಿರುವವರೂ ತಮ್ಮ ಬ್ಯಾಂಕ್ ವ್ಯವಹಾರದ ಸಂಪೂರ್ಣ ಮಾಹಿತಿಯನ್ನು ಈ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸಿರುತ್ತೇವೆ. ಆದರೆ ಇತ್ತೀಚೆಗೆ ಈ ಡಿಜಿಟಿಲ್‌ ಅಭಿವೃದ್ಧಿಯನ್ನು ಬಳಸಿ ಕೊಂಡು ಅಕ್ರಮಗಳನ್ನು ಎಸಗುವ ಕಳ್ಳರೂ, ಕೆಟ್ಟವರೂ ಈ ಟೆಕ್ ಅಭಿವೃದ್ಧಿಯ ಲಾಭ ಪಡೆದು ಡಿಜಿಟಲ್ ಡಾಟಾ ಕದಿಯುವ ಹಾಗೂ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ದೋಚುವ ಕಳ್ಳರು ಹೆಚ್ಚಾಗಿದ್ದಾರೆ. ಜಸ್ಟ್ ಆಧಾರ್ ನಂಬರ್ ಬಳಸಿಯೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಲೂಟಿ ಮಾಡಲು ಮುಂದಾಗುತ್ತಿದ್ದಾರೆ. ಆಧಾರ್ ಸಂಖ್ಯೆ ಇದ್ದರೆ ಸಾಕು, ಯಾವುದೇ ಒಟಿಪಿ ಪಡೆಯದೇ ಹ್ಯಾಕರ್‌ಗಳು ಹಣ ಕದಿಯಬಲ್ಲರು.

ಹೀಗೆ ಹಾಕರ್‌ಗಳು ಹಣ ಕದಿಯಬಾರದು, ಆಧಾರ್ ಬಳಕೆದಾರರ ಬ್ಯಾಂಕ್ ಖಾತೆಗೆ ಕನ್ನ ಹಾಕಬಾರದು, ಯಾವುದೇ ಡಾಟಾ ಕದಿಯಬಾರದು ಎಂದರೆ ‘ಬಯೋಮೆಟ್ರಿಕ್ ಲಾಕ್’ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಯಾರೂ ನಿಮ್ಮ ಆಧಾರ್ ಅನ್ನು ಅನಧಿಕೃತವಾಗಿ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ.

ನಿಮ್ಮ ವೈಯಕ್ತಿಕ ಡಾಟಾ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಕಾಪಾಡುವ ಸಲುವಾಗಿ ನಿಮ್ಮ ಆಧಾರ್ ‘ಬಯೋಮೆಟ್ರಿಕ್ ಲಾಕ್’ ಮಾಡಬೇಕಾಗುತ್ತದೆ.

ಬಯೋಮೆಟ್ರಿಕ್ ಲಾಕ್ ಆದರೆ ಏನೆಲ್ಲಾ ಆಗುತ್ತದೆ?
ಆಧಾರ್ ಹೊಂದಿರುವವರು ಮುಂದೆ ಯಾವುದೇ ಬಯೋಮೆಟ್ರಿಕ್ ಪ್ರಮಾಣೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ನೀವು ಪಡಿತರ, ರೇಷನ್ ತೆಗೆದುಕೊಳ್ಳಬೇಕಾದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಈಗ ಬಯೋಮೆಟ್ರಿಕ್ ನೀಡಿ ರೇಷನ್ ಪಡೆಯುತ್ತಿದ್ದೀರಿ. ಒಂದು ವೇಳೆ ಬಯೋಮೆಟ್ರಿಕ್‌ ಲಾಕ್ ಆದರೆ ಈ ರೇಷನ್ ಪಡೆಯುವ ಸಂದರ್ಭದಲ್ಲಿ ನಿಮ್ಮ ಪ್ರಮಾಣೀಕರಣ ಆಗದೇ ಇರಬಹುದು. ಮತ್ತೆ ನೀವು ಈ ಆಧಾರ್ ಬಯೋಮೆಟ್ರಿಕ್‌ ಅನ್ನು ‘ಅನ್ ಲಾಕ್’ ಮಾಡಲೇಬೇಕಾಗುತ್ತದೆ. ನಿಮ್ಮ ಬಯೋಮೆಟ್ರಿಕ್ ಇಲ್ಲದೇ ಯಾವುದೇ ಆಧಾರ್ ದೃಢೀಕರಣ ಆಗದಿರಬಹುದು. ಬಯೋಮೆಟ್ರಿಕ್ ಲಾಕ್ ಆದರೆ ಹ್ಯಾಕರ್‌ಗಳು ನಿಮ್ಮ ಯಾವುದೇ ಮಾಹಿತಿಗಳು ಇದ್ದರೂ ಏನನ್ನೂ ಕದೀಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಬ್ಯಾಂಕ್ ಖಾತೆ ಮತ್ತು ಹಣ ಹಾಗೂ ವೈಯಕ್ತಿಯ ಡಾಟಾಗಳ ಸುರಕ್ಷತೆಗಾಗಿ ಆಧಾರ್‌ ಬಯೋಮೆಟ್ರಿಕ್ ಲಾಕ್ ಮಾಡುವುದು ಅನಿವಾರ್ಯ.

andolana

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

2 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

22 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

44 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

60 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago