ಬ್ಯಾಂಕ್‌ ಖಾತೆಗೆ ಬಯೋಮೆಟ್ರಿಕ್‌ ಲಾಕ್

ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಖಾತೆ ಹಣವನ್ನೆಲ್ಲ ಕ್ಷಣ ಮಾತ್ರದಲ್ಲಿ ದೋಚುವ ಡಿಜಿಟಲ್ ಹ್ಯಾಕರ್‌ಗಳು ಈಗ ಹೆಚ್ಚಾಗುತ್ತಿದ್ದಾರೆ.

ನಾವು ಆಧಾರ್ ಕಾರ್ಡ್ ಮಾಡಿಸುವಾಗ ಕಣ್ಣುಗಳ ಐರಿಸ್ ಗಳನ್ನು ಸೆರೆಹಿಡಿಯಲಾಗುತ್ತದೆ. ಹಾಗೂ ಕೈ ಬೆರಳುಗಳ ಗುರುತನ್ನೂ ಪಡಲಾಗುತ್ತದೆ. ಫೋಟೋ, ವೈಯಕ್ತಿಕ ವಿವರಗಳ ಜತೆಗೆ ಈ ಎಲ್ಲ ದೈಹಿಕ ಗುರುತುಗಳು ನಮ್ಮ ನಂಬರ್‌ನೊಂದಿಗೆ ಲಿಂಕ್ ಆಗಿರಲಿವೆ. ಇದರೊಂದಿಗೆ ಬ್ಯಾಂಕ್ ಖಾತೆ ಹೊಂದಿರುವವರೂ ತಮ್ಮ ಬ್ಯಾಂಕ್ ವ್ಯವಹಾರದ ಸಂಪೂರ್ಣ ಮಾಹಿತಿಯನ್ನು ಈ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸಿರುತ್ತೇವೆ. ಆದರೆ ಇತ್ತೀಚೆಗೆ ಈ ಡಿಜಿಟಿಲ್‌ ಅಭಿವೃದ್ಧಿಯನ್ನು ಬಳಸಿ ಕೊಂಡು ಅಕ್ರಮಗಳನ್ನು ಎಸಗುವ ಕಳ್ಳರೂ, ಕೆಟ್ಟವರೂ ಈ ಟೆಕ್ ಅಭಿವೃದ್ಧಿಯ ಲಾಭ ಪಡೆದು ಡಿಜಿಟಲ್ ಡಾಟಾ ಕದಿಯುವ ಹಾಗೂ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ದೋಚುವ ಕಳ್ಳರು ಹೆಚ್ಚಾಗಿದ್ದಾರೆ. ಜಸ್ಟ್ ಆಧಾರ್ ನಂಬರ್ ಬಳಸಿಯೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಲೂಟಿ ಮಾಡಲು ಮುಂದಾಗುತ್ತಿದ್ದಾರೆ. ಆಧಾರ್ ಸಂಖ್ಯೆ ಇದ್ದರೆ ಸಾಕು, ಯಾವುದೇ ಒಟಿಪಿ ಪಡೆಯದೇ ಹ್ಯಾಕರ್‌ಗಳು ಹಣ ಕದಿಯಬಲ್ಲರು.

ಹೀಗೆ ಹಾಕರ್‌ಗಳು ಹಣ ಕದಿಯಬಾರದು, ಆಧಾರ್ ಬಳಕೆದಾರರ ಬ್ಯಾಂಕ್ ಖಾತೆಗೆ ಕನ್ನ ಹಾಕಬಾರದು, ಯಾವುದೇ ಡಾಟಾ ಕದಿಯಬಾರದು ಎಂದರೆ ‘ಬಯೋಮೆಟ್ರಿಕ್ ಲಾಕ್’ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಯಾರೂ ನಿಮ್ಮ ಆಧಾರ್ ಅನ್ನು ಅನಧಿಕೃತವಾಗಿ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ.

ನಿಮ್ಮ ವೈಯಕ್ತಿಕ ಡಾಟಾ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಕಾಪಾಡುವ ಸಲುವಾಗಿ ನಿಮ್ಮ ಆಧಾರ್ ‘ಬಯೋಮೆಟ್ರಿಕ್ ಲಾಕ್’ ಮಾಡಬೇಕಾಗುತ್ತದೆ.

ಬಯೋಮೆಟ್ರಿಕ್ ಲಾಕ್ ಆದರೆ ಏನೆಲ್ಲಾ ಆಗುತ್ತದೆ?
ಆಧಾರ್ ಹೊಂದಿರುವವರು ಮುಂದೆ ಯಾವುದೇ ಬಯೋಮೆಟ್ರಿಕ್ ಪ್ರಮಾಣೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ನೀವು ಪಡಿತರ, ರೇಷನ್ ತೆಗೆದುಕೊಳ್ಳಬೇಕಾದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಈಗ ಬಯೋಮೆಟ್ರಿಕ್ ನೀಡಿ ರೇಷನ್ ಪಡೆಯುತ್ತಿದ್ದೀರಿ. ಒಂದು ವೇಳೆ ಬಯೋಮೆಟ್ರಿಕ್‌ ಲಾಕ್ ಆದರೆ ಈ ರೇಷನ್ ಪಡೆಯುವ ಸಂದರ್ಭದಲ್ಲಿ ನಿಮ್ಮ ಪ್ರಮಾಣೀಕರಣ ಆಗದೇ ಇರಬಹುದು. ಮತ್ತೆ ನೀವು ಈ ಆಧಾರ್ ಬಯೋಮೆಟ್ರಿಕ್‌ ಅನ್ನು ‘ಅನ್ ಲಾಕ್’ ಮಾಡಲೇಬೇಕಾಗುತ್ತದೆ. ನಿಮ್ಮ ಬಯೋಮೆಟ್ರಿಕ್ ಇಲ್ಲದೇ ಯಾವುದೇ ಆಧಾರ್ ದೃಢೀಕರಣ ಆಗದಿರಬಹುದು. ಬಯೋಮೆಟ್ರಿಕ್ ಲಾಕ್ ಆದರೆ ಹ್ಯಾಕರ್‌ಗಳು ನಿಮ್ಮ ಯಾವುದೇ ಮಾಹಿತಿಗಳು ಇದ್ದರೂ ಏನನ್ನೂ ಕದೀಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಬ್ಯಾಂಕ್ ಖಾತೆ ಮತ್ತು ಹಣ ಹಾಗೂ ವೈಯಕ್ತಿಯ ಡಾಟಾಗಳ ಸುರಕ್ಷತೆಗಾಗಿ ಆಧಾರ್‌ ಬಯೋಮೆಟ್ರಿಕ್ ಲಾಕ್ ಮಾಡುವುದು ಅನಿವಾರ್ಯ.

andolana

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

7 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

13 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago