ಬ್ಯಾಂಕ್‌ ಖಾತೆಗೆ ಬಯೋಮೆಟ್ರಿಕ್‌ ಲಾಕ್

ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಖಾತೆ ಹಣವನ್ನೆಲ್ಲ ಕ್ಷಣ ಮಾತ್ರದಲ್ಲಿ ದೋಚುವ ಡಿಜಿಟಲ್ ಹ್ಯಾಕರ್‌ಗಳು ಈಗ ಹೆಚ್ಚಾಗುತ್ತಿದ್ದಾರೆ.

ನಾವು ಆಧಾರ್ ಕಾರ್ಡ್ ಮಾಡಿಸುವಾಗ ಕಣ್ಣುಗಳ ಐರಿಸ್ ಗಳನ್ನು ಸೆರೆಹಿಡಿಯಲಾಗುತ್ತದೆ. ಹಾಗೂ ಕೈ ಬೆರಳುಗಳ ಗುರುತನ್ನೂ ಪಡಲಾಗುತ್ತದೆ. ಫೋಟೋ, ವೈಯಕ್ತಿಕ ವಿವರಗಳ ಜತೆಗೆ ಈ ಎಲ್ಲ ದೈಹಿಕ ಗುರುತುಗಳು ನಮ್ಮ ನಂಬರ್‌ನೊಂದಿಗೆ ಲಿಂಕ್ ಆಗಿರಲಿವೆ. ಇದರೊಂದಿಗೆ ಬ್ಯಾಂಕ್ ಖಾತೆ ಹೊಂದಿರುವವರೂ ತಮ್ಮ ಬ್ಯಾಂಕ್ ವ್ಯವಹಾರದ ಸಂಪೂರ್ಣ ಮಾಹಿತಿಯನ್ನು ಈ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸಿರುತ್ತೇವೆ. ಆದರೆ ಇತ್ತೀಚೆಗೆ ಈ ಡಿಜಿಟಿಲ್‌ ಅಭಿವೃದ್ಧಿಯನ್ನು ಬಳಸಿ ಕೊಂಡು ಅಕ್ರಮಗಳನ್ನು ಎಸಗುವ ಕಳ್ಳರೂ, ಕೆಟ್ಟವರೂ ಈ ಟೆಕ್ ಅಭಿವೃದ್ಧಿಯ ಲಾಭ ಪಡೆದು ಡಿಜಿಟಲ್ ಡಾಟಾ ಕದಿಯುವ ಹಾಗೂ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ದೋಚುವ ಕಳ್ಳರು ಹೆಚ್ಚಾಗಿದ್ದಾರೆ. ಜಸ್ಟ್ ಆಧಾರ್ ನಂಬರ್ ಬಳಸಿಯೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಲೂಟಿ ಮಾಡಲು ಮುಂದಾಗುತ್ತಿದ್ದಾರೆ. ಆಧಾರ್ ಸಂಖ್ಯೆ ಇದ್ದರೆ ಸಾಕು, ಯಾವುದೇ ಒಟಿಪಿ ಪಡೆಯದೇ ಹ್ಯಾಕರ್‌ಗಳು ಹಣ ಕದಿಯಬಲ್ಲರು.

ಹೀಗೆ ಹಾಕರ್‌ಗಳು ಹಣ ಕದಿಯಬಾರದು, ಆಧಾರ್ ಬಳಕೆದಾರರ ಬ್ಯಾಂಕ್ ಖಾತೆಗೆ ಕನ್ನ ಹಾಕಬಾರದು, ಯಾವುದೇ ಡಾಟಾ ಕದಿಯಬಾರದು ಎಂದರೆ ‘ಬಯೋಮೆಟ್ರಿಕ್ ಲಾಕ್’ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಯಾರೂ ನಿಮ್ಮ ಆಧಾರ್ ಅನ್ನು ಅನಧಿಕೃತವಾಗಿ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ.

ನಿಮ್ಮ ವೈಯಕ್ತಿಕ ಡಾಟಾ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಕಾಪಾಡುವ ಸಲುವಾಗಿ ನಿಮ್ಮ ಆಧಾರ್ ‘ಬಯೋಮೆಟ್ರಿಕ್ ಲಾಕ್’ ಮಾಡಬೇಕಾಗುತ್ತದೆ.

ಬಯೋಮೆಟ್ರಿಕ್ ಲಾಕ್ ಆದರೆ ಏನೆಲ್ಲಾ ಆಗುತ್ತದೆ?
ಆಧಾರ್ ಹೊಂದಿರುವವರು ಮುಂದೆ ಯಾವುದೇ ಬಯೋಮೆಟ್ರಿಕ್ ಪ್ರಮಾಣೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ನೀವು ಪಡಿತರ, ರೇಷನ್ ತೆಗೆದುಕೊಳ್ಳಬೇಕಾದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಈಗ ಬಯೋಮೆಟ್ರಿಕ್ ನೀಡಿ ರೇಷನ್ ಪಡೆಯುತ್ತಿದ್ದೀರಿ. ಒಂದು ವೇಳೆ ಬಯೋಮೆಟ್ರಿಕ್‌ ಲಾಕ್ ಆದರೆ ಈ ರೇಷನ್ ಪಡೆಯುವ ಸಂದರ್ಭದಲ್ಲಿ ನಿಮ್ಮ ಪ್ರಮಾಣೀಕರಣ ಆಗದೇ ಇರಬಹುದು. ಮತ್ತೆ ನೀವು ಈ ಆಧಾರ್ ಬಯೋಮೆಟ್ರಿಕ್‌ ಅನ್ನು ‘ಅನ್ ಲಾಕ್’ ಮಾಡಲೇಬೇಕಾಗುತ್ತದೆ. ನಿಮ್ಮ ಬಯೋಮೆಟ್ರಿಕ್ ಇಲ್ಲದೇ ಯಾವುದೇ ಆಧಾರ್ ದೃಢೀಕರಣ ಆಗದಿರಬಹುದು. ಬಯೋಮೆಟ್ರಿಕ್ ಲಾಕ್ ಆದರೆ ಹ್ಯಾಕರ್‌ಗಳು ನಿಮ್ಮ ಯಾವುದೇ ಮಾಹಿತಿಗಳು ಇದ್ದರೂ ಏನನ್ನೂ ಕದೀಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಬ್ಯಾಂಕ್ ಖಾತೆ ಮತ್ತು ಹಣ ಹಾಗೂ ವೈಯಕ್ತಿಯ ಡಾಟಾಗಳ ಸುರಕ್ಷತೆಗಾಗಿ ಆಧಾರ್‌ ಬಯೋಮೆಟ್ರಿಕ್ ಲಾಕ್ ಮಾಡುವುದು ಅನಿವಾರ್ಯ.

andolana

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

6 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

6 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

6 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

6 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

6 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

6 hours ago