ಬ್ಯಾಂಕ್‌ ಖಾತೆಗೆ ಬಯೋಮೆಟ್ರಿಕ್‌ ಲಾಕ್

ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಖಾತೆ ಹಣವನ್ನೆಲ್ಲ ಕ್ಷಣ ಮಾತ್ರದಲ್ಲಿ ದೋಚುವ ಡಿಜಿಟಲ್ ಹ್ಯಾಕರ್‌ಗಳು ಈಗ ಹೆಚ್ಚಾಗುತ್ತಿದ್ದಾರೆ.

ನಾವು ಆಧಾರ್ ಕಾರ್ಡ್ ಮಾಡಿಸುವಾಗ ಕಣ್ಣುಗಳ ಐರಿಸ್ ಗಳನ್ನು ಸೆರೆಹಿಡಿಯಲಾಗುತ್ತದೆ. ಹಾಗೂ ಕೈ ಬೆರಳುಗಳ ಗುರುತನ್ನೂ ಪಡಲಾಗುತ್ತದೆ. ಫೋಟೋ, ವೈಯಕ್ತಿಕ ವಿವರಗಳ ಜತೆಗೆ ಈ ಎಲ್ಲ ದೈಹಿಕ ಗುರುತುಗಳು ನಮ್ಮ ನಂಬರ್‌ನೊಂದಿಗೆ ಲಿಂಕ್ ಆಗಿರಲಿವೆ. ಇದರೊಂದಿಗೆ ಬ್ಯಾಂಕ್ ಖಾತೆ ಹೊಂದಿರುವವರೂ ತಮ್ಮ ಬ್ಯಾಂಕ್ ವ್ಯವಹಾರದ ಸಂಪೂರ್ಣ ಮಾಹಿತಿಯನ್ನು ಈ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸಿರುತ್ತೇವೆ. ಆದರೆ ಇತ್ತೀಚೆಗೆ ಈ ಡಿಜಿಟಿಲ್‌ ಅಭಿವೃದ್ಧಿಯನ್ನು ಬಳಸಿ ಕೊಂಡು ಅಕ್ರಮಗಳನ್ನು ಎಸಗುವ ಕಳ್ಳರೂ, ಕೆಟ್ಟವರೂ ಈ ಟೆಕ್ ಅಭಿವೃದ್ಧಿಯ ಲಾಭ ಪಡೆದು ಡಿಜಿಟಲ್ ಡಾಟಾ ಕದಿಯುವ ಹಾಗೂ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ದೋಚುವ ಕಳ್ಳರು ಹೆಚ್ಚಾಗಿದ್ದಾರೆ. ಜಸ್ಟ್ ಆಧಾರ್ ನಂಬರ್ ಬಳಸಿಯೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಲೂಟಿ ಮಾಡಲು ಮುಂದಾಗುತ್ತಿದ್ದಾರೆ. ಆಧಾರ್ ಸಂಖ್ಯೆ ಇದ್ದರೆ ಸಾಕು, ಯಾವುದೇ ಒಟಿಪಿ ಪಡೆಯದೇ ಹ್ಯಾಕರ್‌ಗಳು ಹಣ ಕದಿಯಬಲ್ಲರು.

ಹೀಗೆ ಹಾಕರ್‌ಗಳು ಹಣ ಕದಿಯಬಾರದು, ಆಧಾರ್ ಬಳಕೆದಾರರ ಬ್ಯಾಂಕ್ ಖಾತೆಗೆ ಕನ್ನ ಹಾಕಬಾರದು, ಯಾವುದೇ ಡಾಟಾ ಕದಿಯಬಾರದು ಎಂದರೆ ‘ಬಯೋಮೆಟ್ರಿಕ್ ಲಾಕ್’ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಯಾರೂ ನಿಮ್ಮ ಆಧಾರ್ ಅನ್ನು ಅನಧಿಕೃತವಾಗಿ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ.

ನಿಮ್ಮ ವೈಯಕ್ತಿಕ ಡಾಟಾ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಕಾಪಾಡುವ ಸಲುವಾಗಿ ನಿಮ್ಮ ಆಧಾರ್ ‘ಬಯೋಮೆಟ್ರಿಕ್ ಲಾಕ್’ ಮಾಡಬೇಕಾಗುತ್ತದೆ.

ಬಯೋಮೆಟ್ರಿಕ್ ಲಾಕ್ ಆದರೆ ಏನೆಲ್ಲಾ ಆಗುತ್ತದೆ?
ಆಧಾರ್ ಹೊಂದಿರುವವರು ಮುಂದೆ ಯಾವುದೇ ಬಯೋಮೆಟ್ರಿಕ್ ಪ್ರಮಾಣೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ನೀವು ಪಡಿತರ, ರೇಷನ್ ತೆಗೆದುಕೊಳ್ಳಬೇಕಾದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಈಗ ಬಯೋಮೆಟ್ರಿಕ್ ನೀಡಿ ರೇಷನ್ ಪಡೆಯುತ್ತಿದ್ದೀರಿ. ಒಂದು ವೇಳೆ ಬಯೋಮೆಟ್ರಿಕ್‌ ಲಾಕ್ ಆದರೆ ಈ ರೇಷನ್ ಪಡೆಯುವ ಸಂದರ್ಭದಲ್ಲಿ ನಿಮ್ಮ ಪ್ರಮಾಣೀಕರಣ ಆಗದೇ ಇರಬಹುದು. ಮತ್ತೆ ನೀವು ಈ ಆಧಾರ್ ಬಯೋಮೆಟ್ರಿಕ್‌ ಅನ್ನು ‘ಅನ್ ಲಾಕ್’ ಮಾಡಲೇಬೇಕಾಗುತ್ತದೆ. ನಿಮ್ಮ ಬಯೋಮೆಟ್ರಿಕ್ ಇಲ್ಲದೇ ಯಾವುದೇ ಆಧಾರ್ ದೃಢೀಕರಣ ಆಗದಿರಬಹುದು. ಬಯೋಮೆಟ್ರಿಕ್ ಲಾಕ್ ಆದರೆ ಹ್ಯಾಕರ್‌ಗಳು ನಿಮ್ಮ ಯಾವುದೇ ಮಾಹಿತಿಗಳು ಇದ್ದರೂ ಏನನ್ನೂ ಕದೀಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಬ್ಯಾಂಕ್ ಖಾತೆ ಮತ್ತು ಹಣ ಹಾಗೂ ವೈಯಕ್ತಿಯ ಡಾಟಾಗಳ ಸುರಕ್ಷತೆಗಾಗಿ ಆಧಾರ್‌ ಬಯೋಮೆಟ್ರಿಕ್ ಲಾಕ್ ಮಾಡುವುದು ಅನಿವಾರ್ಯ.

andolana

Recent Posts

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

25 mins ago

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

1 hour ago

ಓದುಗರ ಪತ್ರ: ಐಪಿಎಲ್‌ನಲ್ಲಿ ಭಾರತೀಯ ಆಟಗಾರರೇ ಆಡಲಿ

೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’  (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ.  ಐಪಿಎಲ್ ತಂಡಗಳಲ್ಲಿ …

2 hours ago

ಓದುಗರ ಪತ್ರ: ಮೆಟ್ರೋ ಪ್ರಯಾಣ ದರ ಏರಿಕೆ ಸಲ್ಲದು

ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …

2 hours ago

ಓದುಗರ ಪತ್ರ: ರಾಮಕೃಷ್ಣನಗರದ ಮುಖ್ಯ ರಸ್ತೆಗೆ ಡಾಂಬರ್ ಹಾಕಿ

ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ  ಪೈಪ್‌ಗಳನ್ನು  ಅಳವಡಿಸಲು ರಸ್ತೆಯನ್ನು  ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸಂಸತ್ತಿನೊಳಗೆ ಪ್ರಧಾನಿಗೆ ‘ಬೆದರಿಕೆಯ ಗುಮ್ಮ

ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…

2 hours ago