ಬ್ಯಾಂಕ್‌ ಖಾತೆಗೆ ಬಯೋಮೆಟ್ರಿಕ್‌ ಲಾಕ್

ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಖಾತೆ ಹಣವನ್ನೆಲ್ಲ ಕ್ಷಣ ಮಾತ್ರದಲ್ಲಿ ದೋಚುವ ಡಿಜಿಟಲ್ ಹ್ಯಾಕರ್‌ಗಳು ಈಗ ಹೆಚ್ಚಾಗುತ್ತಿದ್ದಾರೆ.

ನಾವು ಆಧಾರ್ ಕಾರ್ಡ್ ಮಾಡಿಸುವಾಗ ಕಣ್ಣುಗಳ ಐರಿಸ್ ಗಳನ್ನು ಸೆರೆಹಿಡಿಯಲಾಗುತ್ತದೆ. ಹಾಗೂ ಕೈ ಬೆರಳುಗಳ ಗುರುತನ್ನೂ ಪಡಲಾಗುತ್ತದೆ. ಫೋಟೋ, ವೈಯಕ್ತಿಕ ವಿವರಗಳ ಜತೆಗೆ ಈ ಎಲ್ಲ ದೈಹಿಕ ಗುರುತುಗಳು ನಮ್ಮ ನಂಬರ್‌ನೊಂದಿಗೆ ಲಿಂಕ್ ಆಗಿರಲಿವೆ. ಇದರೊಂದಿಗೆ ಬ್ಯಾಂಕ್ ಖಾತೆ ಹೊಂದಿರುವವರೂ ತಮ್ಮ ಬ್ಯಾಂಕ್ ವ್ಯವಹಾರದ ಸಂಪೂರ್ಣ ಮಾಹಿತಿಯನ್ನು ಈ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸಿರುತ್ತೇವೆ. ಆದರೆ ಇತ್ತೀಚೆಗೆ ಈ ಡಿಜಿಟಿಲ್‌ ಅಭಿವೃದ್ಧಿಯನ್ನು ಬಳಸಿ ಕೊಂಡು ಅಕ್ರಮಗಳನ್ನು ಎಸಗುವ ಕಳ್ಳರೂ, ಕೆಟ್ಟವರೂ ಈ ಟೆಕ್ ಅಭಿವೃದ್ಧಿಯ ಲಾಭ ಪಡೆದು ಡಿಜಿಟಲ್ ಡಾಟಾ ಕದಿಯುವ ಹಾಗೂ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ದೋಚುವ ಕಳ್ಳರು ಹೆಚ್ಚಾಗಿದ್ದಾರೆ. ಜಸ್ಟ್ ಆಧಾರ್ ನಂಬರ್ ಬಳಸಿಯೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಲೂಟಿ ಮಾಡಲು ಮುಂದಾಗುತ್ತಿದ್ದಾರೆ. ಆಧಾರ್ ಸಂಖ್ಯೆ ಇದ್ದರೆ ಸಾಕು, ಯಾವುದೇ ಒಟಿಪಿ ಪಡೆಯದೇ ಹ್ಯಾಕರ್‌ಗಳು ಹಣ ಕದಿಯಬಲ್ಲರು.

ಹೀಗೆ ಹಾಕರ್‌ಗಳು ಹಣ ಕದಿಯಬಾರದು, ಆಧಾರ್ ಬಳಕೆದಾರರ ಬ್ಯಾಂಕ್ ಖಾತೆಗೆ ಕನ್ನ ಹಾಕಬಾರದು, ಯಾವುದೇ ಡಾಟಾ ಕದಿಯಬಾರದು ಎಂದರೆ ‘ಬಯೋಮೆಟ್ರಿಕ್ ಲಾಕ್’ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಯಾರೂ ನಿಮ್ಮ ಆಧಾರ್ ಅನ್ನು ಅನಧಿಕೃತವಾಗಿ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ.

ನಿಮ್ಮ ವೈಯಕ್ತಿಕ ಡಾಟಾ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಕಾಪಾಡುವ ಸಲುವಾಗಿ ನಿಮ್ಮ ಆಧಾರ್ ‘ಬಯೋಮೆಟ್ರಿಕ್ ಲಾಕ್’ ಮಾಡಬೇಕಾಗುತ್ತದೆ.

ಬಯೋಮೆಟ್ರಿಕ್ ಲಾಕ್ ಆದರೆ ಏನೆಲ್ಲಾ ಆಗುತ್ತದೆ?
ಆಧಾರ್ ಹೊಂದಿರುವವರು ಮುಂದೆ ಯಾವುದೇ ಬಯೋಮೆಟ್ರಿಕ್ ಪ್ರಮಾಣೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ನೀವು ಪಡಿತರ, ರೇಷನ್ ತೆಗೆದುಕೊಳ್ಳಬೇಕಾದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಈಗ ಬಯೋಮೆಟ್ರಿಕ್ ನೀಡಿ ರೇಷನ್ ಪಡೆಯುತ್ತಿದ್ದೀರಿ. ಒಂದು ವೇಳೆ ಬಯೋಮೆಟ್ರಿಕ್‌ ಲಾಕ್ ಆದರೆ ಈ ರೇಷನ್ ಪಡೆಯುವ ಸಂದರ್ಭದಲ್ಲಿ ನಿಮ್ಮ ಪ್ರಮಾಣೀಕರಣ ಆಗದೇ ಇರಬಹುದು. ಮತ್ತೆ ನೀವು ಈ ಆಧಾರ್ ಬಯೋಮೆಟ್ರಿಕ್‌ ಅನ್ನು ‘ಅನ್ ಲಾಕ್’ ಮಾಡಲೇಬೇಕಾಗುತ್ತದೆ. ನಿಮ್ಮ ಬಯೋಮೆಟ್ರಿಕ್ ಇಲ್ಲದೇ ಯಾವುದೇ ಆಧಾರ್ ದೃಢೀಕರಣ ಆಗದಿರಬಹುದು. ಬಯೋಮೆಟ್ರಿಕ್ ಲಾಕ್ ಆದರೆ ಹ್ಯಾಕರ್‌ಗಳು ನಿಮ್ಮ ಯಾವುದೇ ಮಾಹಿತಿಗಳು ಇದ್ದರೂ ಏನನ್ನೂ ಕದೀಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಬ್ಯಾಂಕ್ ಖಾತೆ ಮತ್ತು ಹಣ ಹಾಗೂ ವೈಯಕ್ತಿಯ ಡಾಟಾಗಳ ಸುರಕ್ಷತೆಗಾಗಿ ಆಧಾರ್‌ ಬಯೋಮೆಟ್ರಿಕ್ ಲಾಕ್ ಮಾಡುವುದು ಅನಿವಾರ್ಯ.

andolana

Recent Posts

ಇಂಡಿಗೋ ಏರ್‌ಲೈನ್ಸ್‌ಗೆ ಕೇಂದ್ರ ಸರ್ಕಾರದಿಂದ ಮೂಗುದಾರ: ಚಳಿಗಾಲ ವೇಳಾಪಟ್ಟಿ ಕಡಿತ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…

7 mins ago

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

44 mins ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

53 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ

ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…

56 mins ago

ಓದುಗರ ಪತ್ರ:  ರಷ್ಯಾ-ಭಾರತ ಇನ್ನೂ ಹತ್ತಿರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…

1 hour ago

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…

2 hours ago