ಬ್ಯಾಂಕ್‌ ಖಾತೆಗೆ ಬಯೋಮೆಟ್ರಿಕ್‌ ಲಾಕ್

ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಖಾತೆ ಹಣವನ್ನೆಲ್ಲ ಕ್ಷಣ ಮಾತ್ರದಲ್ಲಿ ದೋಚುವ ಡಿಜಿಟಲ್ ಹ್ಯಾಕರ್‌ಗಳು ಈಗ ಹೆಚ್ಚಾಗುತ್ತಿದ್ದಾರೆ.

ನಾವು ಆಧಾರ್ ಕಾರ್ಡ್ ಮಾಡಿಸುವಾಗ ಕಣ್ಣುಗಳ ಐರಿಸ್ ಗಳನ್ನು ಸೆರೆಹಿಡಿಯಲಾಗುತ್ತದೆ. ಹಾಗೂ ಕೈ ಬೆರಳುಗಳ ಗುರುತನ್ನೂ ಪಡಲಾಗುತ್ತದೆ. ಫೋಟೋ, ವೈಯಕ್ತಿಕ ವಿವರಗಳ ಜತೆಗೆ ಈ ಎಲ್ಲ ದೈಹಿಕ ಗುರುತುಗಳು ನಮ್ಮ ನಂಬರ್‌ನೊಂದಿಗೆ ಲಿಂಕ್ ಆಗಿರಲಿವೆ. ಇದರೊಂದಿಗೆ ಬ್ಯಾಂಕ್ ಖಾತೆ ಹೊಂದಿರುವವರೂ ತಮ್ಮ ಬ್ಯಾಂಕ್ ವ್ಯವಹಾರದ ಸಂಪೂರ್ಣ ಮಾಹಿತಿಯನ್ನು ಈ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸಿರುತ್ತೇವೆ. ಆದರೆ ಇತ್ತೀಚೆಗೆ ಈ ಡಿಜಿಟಿಲ್‌ ಅಭಿವೃದ್ಧಿಯನ್ನು ಬಳಸಿ ಕೊಂಡು ಅಕ್ರಮಗಳನ್ನು ಎಸಗುವ ಕಳ್ಳರೂ, ಕೆಟ್ಟವರೂ ಈ ಟೆಕ್ ಅಭಿವೃದ್ಧಿಯ ಲಾಭ ಪಡೆದು ಡಿಜಿಟಲ್ ಡಾಟಾ ಕದಿಯುವ ಹಾಗೂ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ದೋಚುವ ಕಳ್ಳರು ಹೆಚ್ಚಾಗಿದ್ದಾರೆ. ಜಸ್ಟ್ ಆಧಾರ್ ನಂಬರ್ ಬಳಸಿಯೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಲೂಟಿ ಮಾಡಲು ಮುಂದಾಗುತ್ತಿದ್ದಾರೆ. ಆಧಾರ್ ಸಂಖ್ಯೆ ಇದ್ದರೆ ಸಾಕು, ಯಾವುದೇ ಒಟಿಪಿ ಪಡೆಯದೇ ಹ್ಯಾಕರ್‌ಗಳು ಹಣ ಕದಿಯಬಲ್ಲರು.

ಹೀಗೆ ಹಾಕರ್‌ಗಳು ಹಣ ಕದಿಯಬಾರದು, ಆಧಾರ್ ಬಳಕೆದಾರರ ಬ್ಯಾಂಕ್ ಖಾತೆಗೆ ಕನ್ನ ಹಾಕಬಾರದು, ಯಾವುದೇ ಡಾಟಾ ಕದಿಯಬಾರದು ಎಂದರೆ ‘ಬಯೋಮೆಟ್ರಿಕ್ ಲಾಕ್’ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಯಾರೂ ನಿಮ್ಮ ಆಧಾರ್ ಅನ್ನು ಅನಧಿಕೃತವಾಗಿ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ.

ನಿಮ್ಮ ವೈಯಕ್ತಿಕ ಡಾಟಾ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಕಾಪಾಡುವ ಸಲುವಾಗಿ ನಿಮ್ಮ ಆಧಾರ್ ‘ಬಯೋಮೆಟ್ರಿಕ್ ಲಾಕ್’ ಮಾಡಬೇಕಾಗುತ್ತದೆ.

ಬಯೋಮೆಟ್ರಿಕ್ ಲಾಕ್ ಆದರೆ ಏನೆಲ್ಲಾ ಆಗುತ್ತದೆ?
ಆಧಾರ್ ಹೊಂದಿರುವವರು ಮುಂದೆ ಯಾವುದೇ ಬಯೋಮೆಟ್ರಿಕ್ ಪ್ರಮಾಣೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ನೀವು ಪಡಿತರ, ರೇಷನ್ ತೆಗೆದುಕೊಳ್ಳಬೇಕಾದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಈಗ ಬಯೋಮೆಟ್ರಿಕ್ ನೀಡಿ ರೇಷನ್ ಪಡೆಯುತ್ತಿದ್ದೀರಿ. ಒಂದು ವೇಳೆ ಬಯೋಮೆಟ್ರಿಕ್‌ ಲಾಕ್ ಆದರೆ ಈ ರೇಷನ್ ಪಡೆಯುವ ಸಂದರ್ಭದಲ್ಲಿ ನಿಮ್ಮ ಪ್ರಮಾಣೀಕರಣ ಆಗದೇ ಇರಬಹುದು. ಮತ್ತೆ ನೀವು ಈ ಆಧಾರ್ ಬಯೋಮೆಟ್ರಿಕ್‌ ಅನ್ನು ‘ಅನ್ ಲಾಕ್’ ಮಾಡಲೇಬೇಕಾಗುತ್ತದೆ. ನಿಮ್ಮ ಬಯೋಮೆಟ್ರಿಕ್ ಇಲ್ಲದೇ ಯಾವುದೇ ಆಧಾರ್ ದೃಢೀಕರಣ ಆಗದಿರಬಹುದು. ಬಯೋಮೆಟ್ರಿಕ್ ಲಾಕ್ ಆದರೆ ಹ್ಯಾಕರ್‌ಗಳು ನಿಮ್ಮ ಯಾವುದೇ ಮಾಹಿತಿಗಳು ಇದ್ದರೂ ಏನನ್ನೂ ಕದೀಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಬ್ಯಾಂಕ್ ಖಾತೆ ಮತ್ತು ಹಣ ಹಾಗೂ ವೈಯಕ್ತಿಯ ಡಾಟಾಗಳ ಸುರಕ್ಷತೆಗಾಗಿ ಆಧಾರ್‌ ಬಯೋಮೆಟ್ರಿಕ್ ಲಾಕ್ ಮಾಡುವುದು ಅನಿವಾರ್ಯ.

andolana

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

10 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

11 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

11 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

12 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

12 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

14 hours ago