ಬ್ಯಾಂಕ್‌ ಖಾತೆಗೆ ಬಯೋಮೆಟ್ರಿಕ್‌ ಲಾಕ್

ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಖಾತೆ ಹಣವನ್ನೆಲ್ಲ ಕ್ಷಣ ಮಾತ್ರದಲ್ಲಿ ದೋಚುವ ಡಿಜಿಟಲ್ ಹ್ಯಾಕರ್‌ಗಳು ಈಗ ಹೆಚ್ಚಾಗುತ್ತಿದ್ದಾರೆ.

ನಾವು ಆಧಾರ್ ಕಾರ್ಡ್ ಮಾಡಿಸುವಾಗ ಕಣ್ಣುಗಳ ಐರಿಸ್ ಗಳನ್ನು ಸೆರೆಹಿಡಿಯಲಾಗುತ್ತದೆ. ಹಾಗೂ ಕೈ ಬೆರಳುಗಳ ಗುರುತನ್ನೂ ಪಡಲಾಗುತ್ತದೆ. ಫೋಟೋ, ವೈಯಕ್ತಿಕ ವಿವರಗಳ ಜತೆಗೆ ಈ ಎಲ್ಲ ದೈಹಿಕ ಗುರುತುಗಳು ನಮ್ಮ ನಂಬರ್‌ನೊಂದಿಗೆ ಲಿಂಕ್ ಆಗಿರಲಿವೆ. ಇದರೊಂದಿಗೆ ಬ್ಯಾಂಕ್ ಖಾತೆ ಹೊಂದಿರುವವರೂ ತಮ್ಮ ಬ್ಯಾಂಕ್ ವ್ಯವಹಾರದ ಸಂಪೂರ್ಣ ಮಾಹಿತಿಯನ್ನು ಈ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸಿರುತ್ತೇವೆ. ಆದರೆ ಇತ್ತೀಚೆಗೆ ಈ ಡಿಜಿಟಿಲ್‌ ಅಭಿವೃದ್ಧಿಯನ್ನು ಬಳಸಿ ಕೊಂಡು ಅಕ್ರಮಗಳನ್ನು ಎಸಗುವ ಕಳ್ಳರೂ, ಕೆಟ್ಟವರೂ ಈ ಟೆಕ್ ಅಭಿವೃದ್ಧಿಯ ಲಾಭ ಪಡೆದು ಡಿಜಿಟಲ್ ಡಾಟಾ ಕದಿಯುವ ಹಾಗೂ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ದೋಚುವ ಕಳ್ಳರು ಹೆಚ್ಚಾಗಿದ್ದಾರೆ. ಜಸ್ಟ್ ಆಧಾರ್ ನಂಬರ್ ಬಳಸಿಯೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಲೂಟಿ ಮಾಡಲು ಮುಂದಾಗುತ್ತಿದ್ದಾರೆ. ಆಧಾರ್ ಸಂಖ್ಯೆ ಇದ್ದರೆ ಸಾಕು, ಯಾವುದೇ ಒಟಿಪಿ ಪಡೆಯದೇ ಹ್ಯಾಕರ್‌ಗಳು ಹಣ ಕದಿಯಬಲ್ಲರು.

ಹೀಗೆ ಹಾಕರ್‌ಗಳು ಹಣ ಕದಿಯಬಾರದು, ಆಧಾರ್ ಬಳಕೆದಾರರ ಬ್ಯಾಂಕ್ ಖಾತೆಗೆ ಕನ್ನ ಹಾಕಬಾರದು, ಯಾವುದೇ ಡಾಟಾ ಕದಿಯಬಾರದು ಎಂದರೆ ‘ಬಯೋಮೆಟ್ರಿಕ್ ಲಾಕ್’ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಯಾರೂ ನಿಮ್ಮ ಆಧಾರ್ ಅನ್ನು ಅನಧಿಕೃತವಾಗಿ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ.

ನಿಮ್ಮ ವೈಯಕ್ತಿಕ ಡಾಟಾ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಕಾಪಾಡುವ ಸಲುವಾಗಿ ನಿಮ್ಮ ಆಧಾರ್ ‘ಬಯೋಮೆಟ್ರಿಕ್ ಲಾಕ್’ ಮಾಡಬೇಕಾಗುತ್ತದೆ.

ಬಯೋಮೆಟ್ರಿಕ್ ಲಾಕ್ ಆದರೆ ಏನೆಲ್ಲಾ ಆಗುತ್ತದೆ?
ಆಧಾರ್ ಹೊಂದಿರುವವರು ಮುಂದೆ ಯಾವುದೇ ಬಯೋಮೆಟ್ರಿಕ್ ಪ್ರಮಾಣೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ನೀವು ಪಡಿತರ, ರೇಷನ್ ತೆಗೆದುಕೊಳ್ಳಬೇಕಾದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಈಗ ಬಯೋಮೆಟ್ರಿಕ್ ನೀಡಿ ರೇಷನ್ ಪಡೆಯುತ್ತಿದ್ದೀರಿ. ಒಂದು ವೇಳೆ ಬಯೋಮೆಟ್ರಿಕ್‌ ಲಾಕ್ ಆದರೆ ಈ ರೇಷನ್ ಪಡೆಯುವ ಸಂದರ್ಭದಲ್ಲಿ ನಿಮ್ಮ ಪ್ರಮಾಣೀಕರಣ ಆಗದೇ ಇರಬಹುದು. ಮತ್ತೆ ನೀವು ಈ ಆಧಾರ್ ಬಯೋಮೆಟ್ರಿಕ್‌ ಅನ್ನು ‘ಅನ್ ಲಾಕ್’ ಮಾಡಲೇಬೇಕಾಗುತ್ತದೆ. ನಿಮ್ಮ ಬಯೋಮೆಟ್ರಿಕ್ ಇಲ್ಲದೇ ಯಾವುದೇ ಆಧಾರ್ ದೃಢೀಕರಣ ಆಗದಿರಬಹುದು. ಬಯೋಮೆಟ್ರಿಕ್ ಲಾಕ್ ಆದರೆ ಹ್ಯಾಕರ್‌ಗಳು ನಿಮ್ಮ ಯಾವುದೇ ಮಾಹಿತಿಗಳು ಇದ್ದರೂ ಏನನ್ನೂ ಕದೀಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಬ್ಯಾಂಕ್ ಖಾತೆ ಮತ್ತು ಹಣ ಹಾಗೂ ವೈಯಕ್ತಿಯ ಡಾಟಾಗಳ ಸುರಕ್ಷತೆಗಾಗಿ ಆಧಾರ್‌ ಬಯೋಮೆಟ್ರಿಕ್ ಲಾಕ್ ಮಾಡುವುದು ಅನಿವಾರ್ಯ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago