ಬ್ಯಾಂಕ್‌ ಖಾತೆಗೆ ಬಯೋಮೆಟ್ರಿಕ್‌ ಲಾಕ್

ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಖಾತೆ ಹಣವನ್ನೆಲ್ಲ ಕ್ಷಣ ಮಾತ್ರದಲ್ಲಿ ದೋಚುವ ಡಿಜಿಟಲ್ ಹ್ಯಾಕರ್‌ಗಳು ಈಗ ಹೆಚ್ಚಾಗುತ್ತಿದ್ದಾರೆ.

ನಾವು ಆಧಾರ್ ಕಾರ್ಡ್ ಮಾಡಿಸುವಾಗ ಕಣ್ಣುಗಳ ಐರಿಸ್ ಗಳನ್ನು ಸೆರೆಹಿಡಿಯಲಾಗುತ್ತದೆ. ಹಾಗೂ ಕೈ ಬೆರಳುಗಳ ಗುರುತನ್ನೂ ಪಡಲಾಗುತ್ತದೆ. ಫೋಟೋ, ವೈಯಕ್ತಿಕ ವಿವರಗಳ ಜತೆಗೆ ಈ ಎಲ್ಲ ದೈಹಿಕ ಗುರುತುಗಳು ನಮ್ಮ ನಂಬರ್‌ನೊಂದಿಗೆ ಲಿಂಕ್ ಆಗಿರಲಿವೆ. ಇದರೊಂದಿಗೆ ಬ್ಯಾಂಕ್ ಖಾತೆ ಹೊಂದಿರುವವರೂ ತಮ್ಮ ಬ್ಯಾಂಕ್ ವ್ಯವಹಾರದ ಸಂಪೂರ್ಣ ಮಾಹಿತಿಯನ್ನು ಈ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸಿರುತ್ತೇವೆ. ಆದರೆ ಇತ್ತೀಚೆಗೆ ಈ ಡಿಜಿಟಿಲ್‌ ಅಭಿವೃದ್ಧಿಯನ್ನು ಬಳಸಿ ಕೊಂಡು ಅಕ್ರಮಗಳನ್ನು ಎಸಗುವ ಕಳ್ಳರೂ, ಕೆಟ್ಟವರೂ ಈ ಟೆಕ್ ಅಭಿವೃದ್ಧಿಯ ಲಾಭ ಪಡೆದು ಡಿಜಿಟಲ್ ಡಾಟಾ ಕದಿಯುವ ಹಾಗೂ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ದೋಚುವ ಕಳ್ಳರು ಹೆಚ್ಚಾಗಿದ್ದಾರೆ. ಜಸ್ಟ್ ಆಧಾರ್ ನಂಬರ್ ಬಳಸಿಯೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಲೂಟಿ ಮಾಡಲು ಮುಂದಾಗುತ್ತಿದ್ದಾರೆ. ಆಧಾರ್ ಸಂಖ್ಯೆ ಇದ್ದರೆ ಸಾಕು, ಯಾವುದೇ ಒಟಿಪಿ ಪಡೆಯದೇ ಹ್ಯಾಕರ್‌ಗಳು ಹಣ ಕದಿಯಬಲ್ಲರು.

ಹೀಗೆ ಹಾಕರ್‌ಗಳು ಹಣ ಕದಿಯಬಾರದು, ಆಧಾರ್ ಬಳಕೆದಾರರ ಬ್ಯಾಂಕ್ ಖಾತೆಗೆ ಕನ್ನ ಹಾಕಬಾರದು, ಯಾವುದೇ ಡಾಟಾ ಕದಿಯಬಾರದು ಎಂದರೆ ‘ಬಯೋಮೆಟ್ರಿಕ್ ಲಾಕ್’ ಮಾಡುವುದು ಒಳ್ಳೆಯದು. ಹೀಗೆ ಮಾಡುವುದರಿಂದ ಯಾರೂ ನಿಮ್ಮ ಆಧಾರ್ ಅನ್ನು ಅನಧಿಕೃತವಾಗಿ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ.

ನಿಮ್ಮ ವೈಯಕ್ತಿಕ ಡಾಟಾ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಕಾಪಾಡುವ ಸಲುವಾಗಿ ನಿಮ್ಮ ಆಧಾರ್ ‘ಬಯೋಮೆಟ್ರಿಕ್ ಲಾಕ್’ ಮಾಡಬೇಕಾಗುತ್ತದೆ.

ಬಯೋಮೆಟ್ರಿಕ್ ಲಾಕ್ ಆದರೆ ಏನೆಲ್ಲಾ ಆಗುತ್ತದೆ?
ಆಧಾರ್ ಹೊಂದಿರುವವರು ಮುಂದೆ ಯಾವುದೇ ಬಯೋಮೆಟ್ರಿಕ್ ಪ್ರಮಾಣೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ನೀವು ಪಡಿತರ, ರೇಷನ್ ತೆಗೆದುಕೊಳ್ಳಬೇಕಾದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಈಗ ಬಯೋಮೆಟ್ರಿಕ್ ನೀಡಿ ರೇಷನ್ ಪಡೆಯುತ್ತಿದ್ದೀರಿ. ಒಂದು ವೇಳೆ ಬಯೋಮೆಟ್ರಿಕ್‌ ಲಾಕ್ ಆದರೆ ಈ ರೇಷನ್ ಪಡೆಯುವ ಸಂದರ್ಭದಲ್ಲಿ ನಿಮ್ಮ ಪ್ರಮಾಣೀಕರಣ ಆಗದೇ ಇರಬಹುದು. ಮತ್ತೆ ನೀವು ಈ ಆಧಾರ್ ಬಯೋಮೆಟ್ರಿಕ್‌ ಅನ್ನು ‘ಅನ್ ಲಾಕ್’ ಮಾಡಲೇಬೇಕಾಗುತ್ತದೆ. ನಿಮ್ಮ ಬಯೋಮೆಟ್ರಿಕ್ ಇಲ್ಲದೇ ಯಾವುದೇ ಆಧಾರ್ ದೃಢೀಕರಣ ಆಗದಿರಬಹುದು. ಬಯೋಮೆಟ್ರಿಕ್ ಲಾಕ್ ಆದರೆ ಹ್ಯಾಕರ್‌ಗಳು ನಿಮ್ಮ ಯಾವುದೇ ಮಾಹಿತಿಗಳು ಇದ್ದರೂ ಏನನ್ನೂ ಕದೀಯಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಬ್ಯಾಂಕ್ ಖಾತೆ ಮತ್ತು ಹಣ ಹಾಗೂ ವೈಯಕ್ತಿಯ ಡಾಟಾಗಳ ಸುರಕ್ಷತೆಗಾಗಿ ಆಧಾರ್‌ ಬಯೋಮೆಟ್ರಿಕ್ ಲಾಕ್ ಮಾಡುವುದು ಅನಿವಾರ್ಯ.

andolana

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

1 hour ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

1 hour ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

1 hour ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

1 hour ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

12 hours ago