ಯುವ ಡಾಟ್ ಕಾಂ

ಶೀಘ್ರದಲ್ಲೇ ಬಿಎಸ್‌ಎನ್‌ಎಲ್ ಸೂಪರ್ ಫಾಸ್ಟ್‌  5ಜಿ  ಸೇವೆ

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್ಎಲ್) ಕಡೆಗೂ ತನ್ನ ಗ್ರಾಹಕರಿಗೆ 5ಜಿ ಸೇವೆ ನೀಡಲು ಮುಂದಾಗಿದೆ. ಬಿಎಸ್‌ಎನ್‌ಎಲ್ ತನ್ನ ಕ್ವಾಂಟಮ್ 5ಜಿ ಸೇವೆಯನ್ನು ಸದ್ದಿಲ್ಲದೆ ಪ್ರಾರಂಭಿಸಿದ್ದು, ದೇಶದ ಆಯ್ದ ನಗರದಲ್ಲಿ ಬಿಎಸ್‌ಎನ್‌ಎಲ್ ತನ್ನ 5ಜಿ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ.

ಇದಕ್ಕೂ ಮುನ್ನ ಬಳಕೆದಾರರ ಸಲಹೆಯ ಮೇರೆಗೆ ಕಂಪೆನಿಯು ತನ್ನ 5ಜಿ ಸೇವೆಗೆ ಕಿ೫ಎ ಅಂದರೆ ಕ್ವಾಂಟಮ್ 5ಜಿ ಎಂದು ಹೆಸರಿಡಲು ನಿರ್ಧರಿಸಿದೆ ಎಂದು ಹೇಳಲಾಗಿದ್ದರೂ ಅದಿನ್ನೂ ವಾಣಿಜ್ಯ ಉದ್ದೇಶದ ಬಳಕೆಗೆ ಆರಂಭಿಸಿಲ್ಲ ಎಂದು ಬಿಎಸ್‌ಎನ್‌ಎಲ್ ಹೇಳಿದೆ.

5ಜಿ ಸೇವೆ ಆರಂಭ: ಬಿಎಸ್‌ಎನ್‌ಎಲ್ ತನ್ನ ಎಕ್ಸ್ ಖಾತೆಯಲ್ಲಿ ಕಂಪೆನಿಯ ಸಿಎಂಡಿ ರಾಬರ್ಟ್ ಜೆ.ರವಿ ಅವರು ಹೈದರಾಬಾದ್‌ನಲ್ಲಿ ಕ್ವಾಂಟಮ್ 5ಜಿ ಊUಅ (ಸ್ಥಿರ ವೈರ್‌ಲೆಸ್ ಆಕ್ಸೆಸ್) ಸೇವೆಯನ್ನು ಆರಂಭಿಸಿರುವುದಾಗಿ ತಿಳಿಸಿದೆ. ಶೀಘ್ರದಲ್ಲೇ ದೇಶದ ಇತರೆ ಆಯ್ದ ನಗರಗಳಲ್ಲಿ ಈ ಸೇವೆಯನ್ನು ಪ್ರಾರಂಭಿಸಲಾಗುವುದು. ಈ ಸೇವೆಯ ಮೂಲಕ ಬಿಎಸ್‌ಎನ್‌ಎಲ್ ಬಳಕೆದಾರರು ಸೂಪರ್-ಸ್ಟ್ 5ಜಿ ಇಂಟರ್‌ನೆಟ್ ಸೇವೆಯನ್ನು ಪಡೆಯುತ್ತಾರೆ. ಇದಕ್ಕೂ ಮುನ್ನ ಕಂಪೆನಿಯು ದೇಶದಲ್ಲಿ ತನ್ನ ಜಾಲವನ್ನು ಸುಧಾರಿಸಲು ಒಂದು ಲಕ್ಷ ಹೊಸ 4ಜಿ, 5ಜಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇದಕ್ಕಾಗಿ ಕೇಂದ್ರ ಸಚಿವ ಸಂಪುಟದ ಅನುಮೋದನೆಗಾಗಿ ಕಾಯುತ್ತಿದೆ. ಕಳೆದ ವರ್ಷ ಬಿಎಸ್‌ಎನ್‌ಎಲ್ ಒಂದು ಲಕ್ಷ 4ಜಿ, 5ಜಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲು ನಿರ್ಧರಿಸಿತ್ತು. ಈ ಪೈಕಿ  7೦ ಸಾವಿರಕ್ಕೂ ಹೆಚ್ಚು ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದ್ದು, ಅವೆಲ್ಲವೂ ಕಾರ್ಯನಿರ್ವಹಿಸುತ್ತಿವೆ ಎಂದು ಬಿಎಸ್‌ಎನ್‌ಎಲ್ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

18 mins ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

1 hour ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

2 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

2 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

2 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

3 hours ago