ಯುವ ಡಾಟ್ ಕಾಂ

ಶೀಘ್ರದಲ್ಲೇ ಬಿಎಸ್‌ಎನ್‌ಎಲ್ ಸೂಪರ್ ಫಾಸ್ಟ್‌  5ಜಿ  ಸೇವೆ

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್ಎಲ್) ಕಡೆಗೂ ತನ್ನ ಗ್ರಾಹಕರಿಗೆ 5ಜಿ ಸೇವೆ ನೀಡಲು ಮುಂದಾಗಿದೆ. ಬಿಎಸ್‌ಎನ್‌ಎಲ್ ತನ್ನ ಕ್ವಾಂಟಮ್ 5ಜಿ ಸೇವೆಯನ್ನು ಸದ್ದಿಲ್ಲದೆ ಪ್ರಾರಂಭಿಸಿದ್ದು, ದೇಶದ ಆಯ್ದ ನಗರದಲ್ಲಿ ಬಿಎಸ್‌ಎನ್‌ಎಲ್ ತನ್ನ 5ಜಿ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ.

ಇದಕ್ಕೂ ಮುನ್ನ ಬಳಕೆದಾರರ ಸಲಹೆಯ ಮೇರೆಗೆ ಕಂಪೆನಿಯು ತನ್ನ 5ಜಿ ಸೇವೆಗೆ ಕಿ೫ಎ ಅಂದರೆ ಕ್ವಾಂಟಮ್ 5ಜಿ ಎಂದು ಹೆಸರಿಡಲು ನಿರ್ಧರಿಸಿದೆ ಎಂದು ಹೇಳಲಾಗಿದ್ದರೂ ಅದಿನ್ನೂ ವಾಣಿಜ್ಯ ಉದ್ದೇಶದ ಬಳಕೆಗೆ ಆರಂಭಿಸಿಲ್ಲ ಎಂದು ಬಿಎಸ್‌ಎನ್‌ಎಲ್ ಹೇಳಿದೆ.

5ಜಿ ಸೇವೆ ಆರಂಭ: ಬಿಎಸ್‌ಎನ್‌ಎಲ್ ತನ್ನ ಎಕ್ಸ್ ಖಾತೆಯಲ್ಲಿ ಕಂಪೆನಿಯ ಸಿಎಂಡಿ ರಾಬರ್ಟ್ ಜೆ.ರವಿ ಅವರು ಹೈದರಾಬಾದ್‌ನಲ್ಲಿ ಕ್ವಾಂಟಮ್ 5ಜಿ ಊUಅ (ಸ್ಥಿರ ವೈರ್‌ಲೆಸ್ ಆಕ್ಸೆಸ್) ಸೇವೆಯನ್ನು ಆರಂಭಿಸಿರುವುದಾಗಿ ತಿಳಿಸಿದೆ. ಶೀಘ್ರದಲ್ಲೇ ದೇಶದ ಇತರೆ ಆಯ್ದ ನಗರಗಳಲ್ಲಿ ಈ ಸೇವೆಯನ್ನು ಪ್ರಾರಂಭಿಸಲಾಗುವುದು. ಈ ಸೇವೆಯ ಮೂಲಕ ಬಿಎಸ್‌ಎನ್‌ಎಲ್ ಬಳಕೆದಾರರು ಸೂಪರ್-ಸ್ಟ್ 5ಜಿ ಇಂಟರ್‌ನೆಟ್ ಸೇವೆಯನ್ನು ಪಡೆಯುತ್ತಾರೆ. ಇದಕ್ಕೂ ಮುನ್ನ ಕಂಪೆನಿಯು ದೇಶದಲ್ಲಿ ತನ್ನ ಜಾಲವನ್ನು ಸುಧಾರಿಸಲು ಒಂದು ಲಕ್ಷ ಹೊಸ 4ಜಿ, 5ಜಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇದಕ್ಕಾಗಿ ಕೇಂದ್ರ ಸಚಿವ ಸಂಪುಟದ ಅನುಮೋದನೆಗಾಗಿ ಕಾಯುತ್ತಿದೆ. ಕಳೆದ ವರ್ಷ ಬಿಎಸ್‌ಎನ್‌ಎಲ್ ಒಂದು ಲಕ್ಷ 4ಜಿ, 5ಜಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲು ನಿರ್ಧರಿಸಿತ್ತು. ಈ ಪೈಕಿ  7೦ ಸಾವಿರಕ್ಕೂ ಹೆಚ್ಚು ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದ್ದು, ಅವೆಲ್ಲವೂ ಕಾರ್ಯನಿರ್ವಹಿಸುತ್ತಿವೆ ಎಂದು ಬಿಎಸ್‌ಎನ್‌ಎಲ್ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

3 mins ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

1 hour ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್‌ ವಿರುದ್ಧ ಇನ್ನೊಂದು ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…

5 hours ago

ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಪೊಳ್ದ್ ಆಚರಣೆ

ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…

5 hours ago

ಸೆ.21 ರಿಂದ ಮೂರು ದಿನ ವಿಧಾನಮಂಡಲದ ವಿಶೇಷ ಅಧಿವೇಶನ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…

5 hours ago

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

7 hours ago