ಯುವ ಡಾಟ್ ಕಾಂ

ಮಾಲ್‌ವೇರ್‌ನಿಂದ ಯಾಮಾರಿಸಿಕೊಳ್ಳದಿರಿ

ನಾವು ಗೂಗಲ್, ಇಂಟರ್‌ನೆಟ್‌ನ್ನು ಸುರಕ್ಷಿತ ಎಂದೇ ಭಾವಿಸಿದ್ದೇವೆ. ಇವುಗಳಲ್ಲಿ ಬ್ರೌಸ್ ಮಾಡುವ ವೆಬ್‌ಸೈಟ್, ಬಳಸುವ ಅಪ್ಲಿಕೇಶನ್ ಎಲ್ಲವೂ ಸುರಕ್ಷಿತ ಎಂದುಕೊಂಡಿದ್ದೇವೆ. ಅದು ನಮ್ಮ ದೊಡ್ಡ ತಪ್ಪು. ಈಗ ಆನ್‌ಲೈನ್ ಕ್ರಿಮಿನಲ್‌ಗಳು, ಹ್ಯಾಕರ್‌ಗಳು ಸಮಾಜದಲ್ಲಿ ಹೆಚ್ಚಾಗುತ್ತಾ ಹೋಗುತ್ತಿದ್ದಾರೆ.

ಆನ್‌ಲೈನ್‌ ಮೋಸ ಮಾಡಲು, ಮಾಹಿತಿ ಕದಿಯಲು, ಬ್ಯಾಂಕ್ ಅಕೌಂಟ್‌ಗೆ ಕನ್ನ ಹಾಕಲು ಇರುವ ದಾರಿಗಳಲ್ಲಿ ಮೊದಲ ಸಾಲಿನಲ್ಲಿ ಇರುವುದೇ ಈ ‘ಮಾಲ್‌ವೇರ್’ ಹರಡುವುದು. ಈ ಮಾಲ್‌ವೇರ್‌ನಿಂದ ನಮ್ಮ ಸ್ಮಾರ್ಟ್ ಫೋನ್, ಕಂಪ್ಯೂಟರ್ ಮಾತ್ರ ವಲ್ಲದೇ ಅವುಗಳ ಬಗ್ಗೆ ತಿಳಿದುಕೊಳ್ಳುವುದೂಅತ್ಯವಶ್ಯ.
‘ಮಾಲ್‌ವೇರ್’ ಎಂಬುದು ಒಂದು ರೀತಿಯ ಸಾಫ್ಟ್‌ವೇರ್. ಇದನ್ನು ಕಂಪ್ಯೂಟರ್, ಲ್ಯಾಪ್‌ಟಾಪ್, ಸ್ಮಾರ್ಟ್‌ ಫೋನ್, ಟ್ಯಾಬ್, ಹೀಗೆ ಹಲವು ರೀತಿಯ ಸಾಫ್ಟ್ ವೇರ್ ಆಧಾರಿತ ಡಿವೈಸ್ ಗಳಿಗೆ ಸಮಸ್ಯೆಯೊಡ್ಡಲು ಹ್ಯಾಕರ್‌ಗಳು
ಡೆವಲಪ್ ಮಾಡಿರುತ್ತಾರೆ. ಮಾಲ್‌ವೇರ್‌ಗಳು ನಿಮ್ಮ ಯಾವುದೇ ಈ ಎಲೆಕ್ಟ್ರಾನಿಕ್ಸ್‌ ಡಿವೈಸ್‌ನಲ್ಲಿನ ಮಾಹಿತಿಗಳನ್ನು ಕದಿಯಬಹುದು. ನಿಮ್ಮ ಕಂಪ್ಯೂಟರ್ ಅನ್ನು ಸ್ಲೋ ಮಾಡಬಹುದು. ಅಲ್ಲದೇ ನಿಮಗೆ ಗೊತ್ತಿಲ್ಲದಂತೆ ಫೇಕ್ ಇ-ಮೇಲ್ ಅನ್ನು ನಿಮ್ಮ ಇ-ಮೇಲ್‌ ಗೆ ಕಳುಹಿಸಿ ಸಮಸ್ಯೆ ತಂದೊಡ್ಡಬಲ್ಲವು.

ಇದೊಂದು ಹಾನಿಕಾರಕ ಕಂಪ್ಯೂಟರ್ ಪ್ರೋಗ್ರಾಮ್. ಇದು ಸಿಸ್ಟಮ್ ನಲ್ಲಿನ ಡಾಟಾ ಕಾಪಿ ಮಾಡಿಕೊಳ್ಳಬಲ್ಲದು ಜತೆಗೆ ಕಂಪ್ಯೂಟರ್‌ಗೂ ಹಾನಿ ಮಾಡಬಲ್ಲದು. ಮಾಲ್‌ವೇರ್‌ಗಳು ವಿವಿಧ ಮಾದರಿಯಲ್ಲಿ ನಿಮ್ಮ ಸ್ಟಾರ್ಟ್‌ಫೋನ್, ಕಂಪ್ಯೂಟರ್‌ಗೆ ಬರಬಲ್ಲವು. ಅವುಗಳಲ್ಲಿನ ಕೆಲವು ಸಾಮಾನ್ಯ ವಿಧಾನಗಳೆಂದರೆ…

• 1. ಉಚಿತ ಸಾಫ್ಟ್‌ವೇರ್‌ಗಳ ಮೂಲಕ
ಬರಬಹುದು.
• 2. ಸಾಫ್ಟ್‌ವೇರ್‌ಗಳ ಗುಂಪುಗಳೊಂದಿಗೆ ಮಾಲ್
ವೇರ್ ಬರಬಹುದು.
3. ಮಾಲ್‌ವೇರ್‌ನಿಂದ ಹಾನಿಗೊಳಗಾದ ವೆಬ್
ಸೈಟ್‌ಗೆ ಭೇಟಿ ನೀಡುವುದರಿಂದಲೂ ಬರಬಹುದು. 4. ಫೇಕ್ ಎರರ್ ಮೆಸೇಜ್ ಅಥವಾ ಪಾಪಪ್ ವಿಂಡೋ ಮೇಲೆ ಕ್ಲಿಕ್ ಮಾಡುವ ಮೂಲಕ
ಮಾಲ್‌ವೇರ್ ಡೌನ್‌ಲೋಡ್ ಆಗಬಹುದು.
• 5. ಮಾಲ್‌ವೇರ್ ಇರುವ ಇ-ಮೇಲ್ ಅಟ್ಯಾಚ್‌ಮೆಂಟ್ ಓಪನ್ ಮಾಡುವುದರಿಂದ ಮಾಲ್‌ವೇ‌ರ್ ಹರಡುತ್ತದೆ.
• ಮಾಲ್‌ವೇರ್‌ಗಳನ್ನು ತಡೆಗಟ್ಟಲು ನಿಮ್ಮ ಕಂಪ್ಯೂಟರ್, ಸ್ಟಾರ್ಟ್‌ಫೋನ್ ಅನ್ನು ಹಾಗೂ ಅವುಗಳಲ್ಲಿನ ಸಾಫ್ಟ್‌ವೇರ್‌ಗಳನ್ನು ಆಗಾಗ್ಗೆ ಅಪ್ ಡೇಟ್ ಮಾಡುತ್ತಿರಬೇಕು.
• ಯಾವುದೇ ಲಿಂಕ್‌ನ್ನು ಕ್ಲಿಕ್ ಮಾಡುವ ಮೊದಲು, ಸಾಫ್ಟ್‌ವೇರ್, ಅಪ್ಲಿಕೇಶನ್ ಡೌನ್‌ಲೋಡ್ ಮಾಡುವ ಮೊದಲು ಪರಿಶೀಲಿಸಿ, ಯೋಚಿಸಿ ನಂತರ ಡೌನ್‌ಲೋಡ್ ಮಾಡಿಕೊಳ್ಳುವುದು ಉತ್ತಮ. ಅಲ್ಲದೆ ಇಮೇಲ್‌ ಹಾಗೂ ಇಮೇಜ್ ಅಟ್ಯಾಚ್‌ಮೆಂಟ್‌ಗಳನ್ನು ಓಪನ್ ಮಾಡುವ ಮೊದಲು ಎಚ್ಚರವಾಗಿರಬೇಕು.

andolana

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

6 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

8 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

9 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

9 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

9 hours ago