ಯುವ ಡಾಟ್ ಕಾಂ

ಮಾಲ್‌ವೇರ್‌ನಿಂದ ಯಾಮಾರಿಸಿಕೊಳ್ಳದಿರಿ

ನಾವು ಗೂಗಲ್, ಇಂಟರ್‌ನೆಟ್‌ನ್ನು ಸುರಕ್ಷಿತ ಎಂದೇ ಭಾವಿಸಿದ್ದೇವೆ. ಇವುಗಳಲ್ಲಿ ಬ್ರೌಸ್ ಮಾಡುವ ವೆಬ್‌ಸೈಟ್, ಬಳಸುವ ಅಪ್ಲಿಕೇಶನ್ ಎಲ್ಲವೂ ಸುರಕ್ಷಿತ ಎಂದುಕೊಂಡಿದ್ದೇವೆ. ಅದು ನಮ್ಮ ದೊಡ್ಡ ತಪ್ಪು. ಈಗ ಆನ್‌ಲೈನ್ ಕ್ರಿಮಿನಲ್‌ಗಳು, ಹ್ಯಾಕರ್‌ಗಳು ಸಮಾಜದಲ್ಲಿ ಹೆಚ್ಚಾಗುತ್ತಾ ಹೋಗುತ್ತಿದ್ದಾರೆ.

ಆನ್‌ಲೈನ್‌ ಮೋಸ ಮಾಡಲು, ಮಾಹಿತಿ ಕದಿಯಲು, ಬ್ಯಾಂಕ್ ಅಕೌಂಟ್‌ಗೆ ಕನ್ನ ಹಾಕಲು ಇರುವ ದಾರಿಗಳಲ್ಲಿ ಮೊದಲ ಸಾಲಿನಲ್ಲಿ ಇರುವುದೇ ಈ ‘ಮಾಲ್‌ವೇರ್’ ಹರಡುವುದು. ಈ ಮಾಲ್‌ವೇರ್‌ನಿಂದ ನಮ್ಮ ಸ್ಮಾರ್ಟ್ ಫೋನ್, ಕಂಪ್ಯೂಟರ್ ಮಾತ್ರ ವಲ್ಲದೇ ಅವುಗಳ ಬಗ್ಗೆ ತಿಳಿದುಕೊಳ್ಳುವುದೂಅತ್ಯವಶ್ಯ.
‘ಮಾಲ್‌ವೇರ್’ ಎಂಬುದು ಒಂದು ರೀತಿಯ ಸಾಫ್ಟ್‌ವೇರ್. ಇದನ್ನು ಕಂಪ್ಯೂಟರ್, ಲ್ಯಾಪ್‌ಟಾಪ್, ಸ್ಮಾರ್ಟ್‌ ಫೋನ್, ಟ್ಯಾಬ್, ಹೀಗೆ ಹಲವು ರೀತಿಯ ಸಾಫ್ಟ್ ವೇರ್ ಆಧಾರಿತ ಡಿವೈಸ್ ಗಳಿಗೆ ಸಮಸ್ಯೆಯೊಡ್ಡಲು ಹ್ಯಾಕರ್‌ಗಳು
ಡೆವಲಪ್ ಮಾಡಿರುತ್ತಾರೆ. ಮಾಲ್‌ವೇರ್‌ಗಳು ನಿಮ್ಮ ಯಾವುದೇ ಈ ಎಲೆಕ್ಟ್ರಾನಿಕ್ಸ್‌ ಡಿವೈಸ್‌ನಲ್ಲಿನ ಮಾಹಿತಿಗಳನ್ನು ಕದಿಯಬಹುದು. ನಿಮ್ಮ ಕಂಪ್ಯೂಟರ್ ಅನ್ನು ಸ್ಲೋ ಮಾಡಬಹುದು. ಅಲ್ಲದೇ ನಿಮಗೆ ಗೊತ್ತಿಲ್ಲದಂತೆ ಫೇಕ್ ಇ-ಮೇಲ್ ಅನ್ನು ನಿಮ್ಮ ಇ-ಮೇಲ್‌ ಗೆ ಕಳುಹಿಸಿ ಸಮಸ್ಯೆ ತಂದೊಡ್ಡಬಲ್ಲವು.

ಇದೊಂದು ಹಾನಿಕಾರಕ ಕಂಪ್ಯೂಟರ್ ಪ್ರೋಗ್ರಾಮ್. ಇದು ಸಿಸ್ಟಮ್ ನಲ್ಲಿನ ಡಾಟಾ ಕಾಪಿ ಮಾಡಿಕೊಳ್ಳಬಲ್ಲದು ಜತೆಗೆ ಕಂಪ್ಯೂಟರ್‌ಗೂ ಹಾನಿ ಮಾಡಬಲ್ಲದು. ಮಾಲ್‌ವೇರ್‌ಗಳು ವಿವಿಧ ಮಾದರಿಯಲ್ಲಿ ನಿಮ್ಮ ಸ್ಟಾರ್ಟ್‌ಫೋನ್, ಕಂಪ್ಯೂಟರ್‌ಗೆ ಬರಬಲ್ಲವು. ಅವುಗಳಲ್ಲಿನ ಕೆಲವು ಸಾಮಾನ್ಯ ವಿಧಾನಗಳೆಂದರೆ…

• 1. ಉಚಿತ ಸಾಫ್ಟ್‌ವೇರ್‌ಗಳ ಮೂಲಕ
ಬರಬಹುದು.
• 2. ಸಾಫ್ಟ್‌ವೇರ್‌ಗಳ ಗುಂಪುಗಳೊಂದಿಗೆ ಮಾಲ್
ವೇರ್ ಬರಬಹುದು.
3. ಮಾಲ್‌ವೇರ್‌ನಿಂದ ಹಾನಿಗೊಳಗಾದ ವೆಬ್
ಸೈಟ್‌ಗೆ ಭೇಟಿ ನೀಡುವುದರಿಂದಲೂ ಬರಬಹುದು. 4. ಫೇಕ್ ಎರರ್ ಮೆಸೇಜ್ ಅಥವಾ ಪಾಪಪ್ ವಿಂಡೋ ಮೇಲೆ ಕ್ಲಿಕ್ ಮಾಡುವ ಮೂಲಕ
ಮಾಲ್‌ವೇರ್ ಡೌನ್‌ಲೋಡ್ ಆಗಬಹುದು.
• 5. ಮಾಲ್‌ವೇರ್ ಇರುವ ಇ-ಮೇಲ್ ಅಟ್ಯಾಚ್‌ಮೆಂಟ್ ಓಪನ್ ಮಾಡುವುದರಿಂದ ಮಾಲ್‌ವೇ‌ರ್ ಹರಡುತ್ತದೆ.
• ಮಾಲ್‌ವೇರ್‌ಗಳನ್ನು ತಡೆಗಟ್ಟಲು ನಿಮ್ಮ ಕಂಪ್ಯೂಟರ್, ಸ್ಟಾರ್ಟ್‌ಫೋನ್ ಅನ್ನು ಹಾಗೂ ಅವುಗಳಲ್ಲಿನ ಸಾಫ್ಟ್‌ವೇರ್‌ಗಳನ್ನು ಆಗಾಗ್ಗೆ ಅಪ್ ಡೇಟ್ ಮಾಡುತ್ತಿರಬೇಕು.
• ಯಾವುದೇ ಲಿಂಕ್‌ನ್ನು ಕ್ಲಿಕ್ ಮಾಡುವ ಮೊದಲು, ಸಾಫ್ಟ್‌ವೇರ್, ಅಪ್ಲಿಕೇಶನ್ ಡೌನ್‌ಲೋಡ್ ಮಾಡುವ ಮೊದಲು ಪರಿಶೀಲಿಸಿ, ಯೋಚಿಸಿ ನಂತರ ಡೌನ್‌ಲೋಡ್ ಮಾಡಿಕೊಳ್ಳುವುದು ಉತ್ತಮ. ಅಲ್ಲದೆ ಇಮೇಲ್‌ ಹಾಗೂ ಇಮೇಜ್ ಅಟ್ಯಾಚ್‌ಮೆಂಟ್‌ಗಳನ್ನು ಓಪನ್ ಮಾಡುವ ಮೊದಲು ಎಚ್ಚರವಾಗಿರಬೇಕು.

andolana

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

5 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

8 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

8 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

8 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

8 hours ago