ಯುವ ಡಾಟ್ ಕಾಂ

ಭಾರತದ ಬಾನಲ್ಲೂ ಮಸ್ಕನ ಅಂತರ್ಜಾಲ

ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ನೀಡುತ್ತಿರುವ ಎಲಾನ್‌ಮಸ್ಕ್ ಒಡೆತನದ ಸ್ಟಾರ್ ಲಿಂಕ್‌ಗೆ ಭಾರತೀಯ ದೂರಸಂಪರ್ಕ ಇಲಾಖೆಯು ಭಾರತದಲ್ಲಿ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ಆರಂಭಿಸಲು ಪರವಾನಗಿ ನೀಡಿದೆ. ಜತೆಗೆ ಟ್ರಯಲ್ ಸ್ಪೆಕ್ಟ್ರಂ ಅನ್ನೂ ನೀಡಲಾಗುತ್ತದೆ. ಈ ಟ್ರಯಲ್‌ನಲ್ಲಿ ಸ್ಟಾರ್‌ಲಿಂಕ್ ಎಲ್ಲಾ ನಿಯಮಗಳಿಗೆ ಬದ್ಧವಾಗಿದ್ದರೆ ಮಾತ್ರ ವಾಣಿಜ್ಯ ಕಾರ್ಯಾಚರಣೆಗೆ ಅನುಮತಿ ದೊರೆಯಲಿದೆ.

ಈ ಮೂಲಕ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ಒದಗಿಸಲು ಜಿಎಂಪಿಸಿಎಸ್ ಪರವಾನಗಿ ಪಡೆದ ಮೂರನೇ ಕಂಪೆನಿ ಇದಾಗಿದೆ. ಯೂಟೆಲ್ ಸ್ಯಾಟ್‌ನ ಒನ್ ವೆಬ್ ಮತ್ತು ರಿಲಯನ್ಸ್ ಜಿಯೋಗೆ ಈ ಪರವಾನಗಿಯನ್ನು ನೀಡಲಾಗಿದೆ. ಎಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್‌ಗೆ ಈ ಪರವಾನಗಿ ದೊರೆತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಭಾರತದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆ ಇದೆ. ದೂರ ಸಂವಹನ ಇಲಾಖೆಯು ಗ್ಲೋಬಲ್ ಮೊಬೈಲ್ ಪರ್ಸನಲ್ ಕಮ್ಯೂನಿಕೇಶನ್ (ಜಿಎಂಪಿಸಿಎಸ್) ಪರವಾನಗಿಯನ್ನು ಸ್ಟಾರ್‌ಲಿಂಕ್‌ಗೆ ನೀಡಿದೆ. ಅಲ್ಲದೇ ಟ್ರಯಲ್ ಸ್ಪೆಕ್ಟ್ರಂ ಅನ್ನೂ ಕೂಡ ನೀಡಲಿದೆ ಎಂದು ಸುದ್ದಿಯಾಗಿದೆ.

ಟ್ರಯಲ್ ಸ್ಪೆಕ್ಟ್ರಂಗೆ ಸ್ಟಾರ್‌ಲಿಂಕ್ ಅರ್ಜಿ ಸಲ್ಲಿಸಬೇಕು. ಅದಾಗಿ ಮೂರ‍್ನಾಲ್ಕು ವಾರಗಳಲ್ಲಿ ಸ್ಪೆಕ್ಟ್ರಂ ನೀಡಲಾಗುತ್ತದೆ. ಆ ನಂತರ ಸರ್ಕಾರದ ಭದ್ರತಾ ಷರತ್ತುಗಳನ್ನು ಒಳಗೊಂಡಂತೆ ಎಲ್ಲಾ ನಿಯಮ, ನಿಬಂಧನೆಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಕೇಂದ್ರ ಸರ್ಕಾರ ಅನುಮತಿ ನೀಡಲಿದೆ. ಆ ನಂತರವಷ್ಟೇ ಸ್ಟಾರ್‌ಲಿಂಕ್ ಸಂಸ್ಥೆ ತನ್ನ ಸ್ಯಾಟಲೈಟ್ ಇಂಟರ್‌ನೆಟ್ ಸೇವೆಯನ್ನು ಕಮರ್ಷಿಯಲ್ ಆಗಿ ಆರಂಭಿಸಲು ಸಾಧ್ಯವಾಗಲಿದೆ.

ನೆರೆಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲೂ ಈಗಾಗಲೇ ಸ್ಟಾರ್ ಲಿಂಕ್ ತನ್ನ ಸೇವೆ ಆರಂಭಿಸಿದೆ. ಭಾರತದಲ್ಲೂ ಈ ಸೇವೆ ಮುಂದಿನ ಒಂದೆರಡು ತಿಂಗಳುಗಳಲ್ಲಿ ಆರಂಭವಾಗಬಹುದು. ಸ್ಟಾರ್‌ಲಿಂಕ್ ಸಂಸ್ಥೆ ಭಾರತದಲ್ಲಿ ಬಹಳ ಕಡಿಮೆ ಬೆಲೆಗೆ ಇಂಟರ್‌ನೆಟ್ ಸೇವೆಯ ಆಫರ್ ನೀಡಬಹುದು ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

17 mins ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

1 hour ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

1 hour ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

1 hour ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

2 hours ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 hours ago