ಯುವ ಡಾಟ್ ಕಾಂ

ಭಾರತದ ಬಾನಲ್ಲೂ ಮಸ್ಕನ ಅಂತರ್ಜಾಲ

ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ನೀಡುತ್ತಿರುವ ಎಲಾನ್‌ಮಸ್ಕ್ ಒಡೆತನದ ಸ್ಟಾರ್ ಲಿಂಕ್‌ಗೆ ಭಾರತೀಯ ದೂರಸಂಪರ್ಕ ಇಲಾಖೆಯು ಭಾರತದಲ್ಲಿ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ಆರಂಭಿಸಲು ಪರವಾನಗಿ ನೀಡಿದೆ. ಜತೆಗೆ ಟ್ರಯಲ್ ಸ್ಪೆಕ್ಟ್ರಂ ಅನ್ನೂ ನೀಡಲಾಗುತ್ತದೆ. ಈ ಟ್ರಯಲ್‌ನಲ್ಲಿ ಸ್ಟಾರ್‌ಲಿಂಕ್ ಎಲ್ಲಾ ನಿಯಮಗಳಿಗೆ ಬದ್ಧವಾಗಿದ್ದರೆ ಮಾತ್ರ ವಾಣಿಜ್ಯ ಕಾರ್ಯಾಚರಣೆಗೆ ಅನುಮತಿ ದೊರೆಯಲಿದೆ.

ಈ ಮೂಲಕ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ಒದಗಿಸಲು ಜಿಎಂಪಿಸಿಎಸ್ ಪರವಾನಗಿ ಪಡೆದ ಮೂರನೇ ಕಂಪೆನಿ ಇದಾಗಿದೆ. ಯೂಟೆಲ್ ಸ್ಯಾಟ್‌ನ ಒನ್ ವೆಬ್ ಮತ್ತು ರಿಲಯನ್ಸ್ ಜಿಯೋಗೆ ಈ ಪರವಾನಗಿಯನ್ನು ನೀಡಲಾಗಿದೆ. ಎಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್‌ಗೆ ಈ ಪರವಾನಗಿ ದೊರೆತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಭಾರತದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆ ಇದೆ. ದೂರ ಸಂವಹನ ಇಲಾಖೆಯು ಗ್ಲೋಬಲ್ ಮೊಬೈಲ್ ಪರ್ಸನಲ್ ಕಮ್ಯೂನಿಕೇಶನ್ (ಜಿಎಂಪಿಸಿಎಸ್) ಪರವಾನಗಿಯನ್ನು ಸ್ಟಾರ್‌ಲಿಂಕ್‌ಗೆ ನೀಡಿದೆ. ಅಲ್ಲದೇ ಟ್ರಯಲ್ ಸ್ಪೆಕ್ಟ್ರಂ ಅನ್ನೂ ಕೂಡ ನೀಡಲಿದೆ ಎಂದು ಸುದ್ದಿಯಾಗಿದೆ.

ಟ್ರಯಲ್ ಸ್ಪೆಕ್ಟ್ರಂಗೆ ಸ್ಟಾರ್‌ಲಿಂಕ್ ಅರ್ಜಿ ಸಲ್ಲಿಸಬೇಕು. ಅದಾಗಿ ಮೂರ‍್ನಾಲ್ಕು ವಾರಗಳಲ್ಲಿ ಸ್ಪೆಕ್ಟ್ರಂ ನೀಡಲಾಗುತ್ತದೆ. ಆ ನಂತರ ಸರ್ಕಾರದ ಭದ್ರತಾ ಷರತ್ತುಗಳನ್ನು ಒಳಗೊಂಡಂತೆ ಎಲ್ಲಾ ನಿಯಮ, ನಿಬಂಧನೆಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಕೇಂದ್ರ ಸರ್ಕಾರ ಅನುಮತಿ ನೀಡಲಿದೆ. ಆ ನಂತರವಷ್ಟೇ ಸ್ಟಾರ್‌ಲಿಂಕ್ ಸಂಸ್ಥೆ ತನ್ನ ಸ್ಯಾಟಲೈಟ್ ಇಂಟರ್‌ನೆಟ್ ಸೇವೆಯನ್ನು ಕಮರ್ಷಿಯಲ್ ಆಗಿ ಆರಂಭಿಸಲು ಸಾಧ್ಯವಾಗಲಿದೆ.

ನೆರೆಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲೂ ಈಗಾಗಲೇ ಸ್ಟಾರ್ ಲಿಂಕ್ ತನ್ನ ಸೇವೆ ಆರಂಭಿಸಿದೆ. ಭಾರತದಲ್ಲೂ ಈ ಸೇವೆ ಮುಂದಿನ ಒಂದೆರಡು ತಿಂಗಳುಗಳಲ್ಲಿ ಆರಂಭವಾಗಬಹುದು. ಸ್ಟಾರ್‌ಲಿಂಕ್ ಸಂಸ್ಥೆ ಭಾರತದಲ್ಲಿ ಬಹಳ ಕಡಿಮೆ ಬೆಲೆಗೆ ಇಂಟರ್‌ನೆಟ್ ಸೇವೆಯ ಆಫರ್ ನೀಡಬಹುದು ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago