ಯುವ ಡಾಟ್ ಕಾಂ

ಭಾರತದ ಬಾನಲ್ಲೂ ಮಸ್ಕನ ಅಂತರ್ಜಾಲ

ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ನೀಡುತ್ತಿರುವ ಎಲಾನ್‌ಮಸ್ಕ್ ಒಡೆತನದ ಸ್ಟಾರ್ ಲಿಂಕ್‌ಗೆ ಭಾರತೀಯ ದೂರಸಂಪರ್ಕ ಇಲಾಖೆಯು ಭಾರತದಲ್ಲಿ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ಆರಂಭಿಸಲು ಪರವಾನಗಿ ನೀಡಿದೆ. ಜತೆಗೆ ಟ್ರಯಲ್ ಸ್ಪೆಕ್ಟ್ರಂ ಅನ್ನೂ ನೀಡಲಾಗುತ್ತದೆ. ಈ ಟ್ರಯಲ್‌ನಲ್ಲಿ ಸ್ಟಾರ್‌ಲಿಂಕ್ ಎಲ್ಲಾ ನಿಯಮಗಳಿಗೆ ಬದ್ಧವಾಗಿದ್ದರೆ ಮಾತ್ರ ವಾಣಿಜ್ಯ ಕಾರ್ಯಾಚರಣೆಗೆ ಅನುಮತಿ ದೊರೆಯಲಿದೆ.

ಈ ಮೂಲಕ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ಒದಗಿಸಲು ಜಿಎಂಪಿಸಿಎಸ್ ಪರವಾನಗಿ ಪಡೆದ ಮೂರನೇ ಕಂಪೆನಿ ಇದಾಗಿದೆ. ಯೂಟೆಲ್ ಸ್ಯಾಟ್‌ನ ಒನ್ ವೆಬ್ ಮತ್ತು ರಿಲಯನ್ಸ್ ಜಿಯೋಗೆ ಈ ಪರವಾನಗಿಯನ್ನು ನೀಡಲಾಗಿದೆ. ಎಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್‌ಗೆ ಈ ಪರವಾನಗಿ ದೊರೆತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಭಾರತದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆ ಇದೆ. ದೂರ ಸಂವಹನ ಇಲಾಖೆಯು ಗ್ಲೋಬಲ್ ಮೊಬೈಲ್ ಪರ್ಸನಲ್ ಕಮ್ಯೂನಿಕೇಶನ್ (ಜಿಎಂಪಿಸಿಎಸ್) ಪರವಾನಗಿಯನ್ನು ಸ್ಟಾರ್‌ಲಿಂಕ್‌ಗೆ ನೀಡಿದೆ. ಅಲ್ಲದೇ ಟ್ರಯಲ್ ಸ್ಪೆಕ್ಟ್ರಂ ಅನ್ನೂ ಕೂಡ ನೀಡಲಿದೆ ಎಂದು ಸುದ್ದಿಯಾಗಿದೆ.

ಟ್ರಯಲ್ ಸ್ಪೆಕ್ಟ್ರಂಗೆ ಸ್ಟಾರ್‌ಲಿಂಕ್ ಅರ್ಜಿ ಸಲ್ಲಿಸಬೇಕು. ಅದಾಗಿ ಮೂರ‍್ನಾಲ್ಕು ವಾರಗಳಲ್ಲಿ ಸ್ಪೆಕ್ಟ್ರಂ ನೀಡಲಾಗುತ್ತದೆ. ಆ ನಂತರ ಸರ್ಕಾರದ ಭದ್ರತಾ ಷರತ್ತುಗಳನ್ನು ಒಳಗೊಂಡಂತೆ ಎಲ್ಲಾ ನಿಯಮ, ನಿಬಂಧನೆಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಕೇಂದ್ರ ಸರ್ಕಾರ ಅನುಮತಿ ನೀಡಲಿದೆ. ಆ ನಂತರವಷ್ಟೇ ಸ್ಟಾರ್‌ಲಿಂಕ್ ಸಂಸ್ಥೆ ತನ್ನ ಸ್ಯಾಟಲೈಟ್ ಇಂಟರ್‌ನೆಟ್ ಸೇವೆಯನ್ನು ಕಮರ್ಷಿಯಲ್ ಆಗಿ ಆರಂಭಿಸಲು ಸಾಧ್ಯವಾಗಲಿದೆ.

ನೆರೆಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲೂ ಈಗಾಗಲೇ ಸ್ಟಾರ್ ಲಿಂಕ್ ತನ್ನ ಸೇವೆ ಆರಂಭಿಸಿದೆ. ಭಾರತದಲ್ಲೂ ಈ ಸೇವೆ ಮುಂದಿನ ಒಂದೆರಡು ತಿಂಗಳುಗಳಲ್ಲಿ ಆರಂಭವಾಗಬಹುದು. ಸ್ಟಾರ್‌ಲಿಂಕ್ ಸಂಸ್ಥೆ ಭಾರತದಲ್ಲಿ ಬಹಳ ಕಡಿಮೆ ಬೆಲೆಗೆ ಇಂಟರ್‌ನೆಟ್ ಸೇವೆಯ ಆಫರ್ ನೀಡಬಹುದು ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

10 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

11 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

11 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

16 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

17 hours ago