ಯುವ ಡಾಟ್ ಕಾಂ

ಇಲ್ಲೊಬ್ಬ ಪರೋಪಕಾರಿ ತರುಣ ಪೊಲೀಸ್‌

 

ಪೊಲೀಸ್‌ ಎಂದರೆ ಸಾರ್ವಜನಿಕರಲ್ಲಿ ಏನೋ ಒಂದು ಭಯ. ಅವರ ಸಹವಾಸ ನಮಗೇಕೆ ಎನ್ನುವವರೇ ಹೆಚ್ಚು. ಪೊಲೀಸ್‌ ಎಂದರೆ ಕೈಯಲ್ಲಿ ಲಾಠಿ ಹಿಡಿದುಕೊಂಡು ತಪ್ಪಿತಸ್ಥರನ್ನು ಎಚ್ಚರಿಸುವ ಕೆಲಸ ಮಾಡುವವರು ಎಂಬ ಮನೋಭಾವನೆ ಇದೆ. ಆದರೆ ಪೊಲೀಸ್ ಎಂದರೆ ಭಯವಲ್ಲ ಅವರು ಭರವಸೆ ಎಂಬುದನ್ನು ತಮ ಸಮಾಜಮುಖಿ ಕಾರ್ಯಗಳಿಂದ ತೋರಿಸಿಕೊಟ್ಟಿದ್ದಾರೆ ಯುವ ಪೊಲೀಸ್ ಸಿಬ್ಬಂದಿ ಎಸ್.ಎಸ್.ಗೋವಿಂದರಾಜು.

ಗೋವಿಂದರಾಜು ಸರಗೂರು ತಾಲ್ಲೂಕಿನ ಸಾಗರ ಗ್ರಾಮದ ನಾರಾಯಣಚಾರ್ ಮತ್ತು ನಾಗಮಣಿ ದಂಪತಿಗಳ ಪುತ್ರ, ಮೈಸೂರು ಜಿಲ್ಲಾ ವ್ಯಾಪ್ತಿಯ 112 ಪೊಲೀಸ್‌ ಸಹಾಯವಾಣಿ ವಾಹನದ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಕರ್ತವ್ಯದ ಜೊತೆ ಜೊತೆಗೆ ಸಮಾಜಮುಖಿ ಕೆಲಸ ಕಾರ್ಯಗಳಿಂದ ಮತ್ತು ಮೂಲ ಸೌಕರ್ಯದಿಂದ ವಂಚಿತರಾದ ಅದಿವಾಸಿ ಸಮುದಾಯದವರ ಬಗ್ಗೆ ಕಾಳಜಿ ವಹಿಸುತ್ತಾ ಜನಸ್ನೇಹಿಯಾಗಿಯೂ ಕರ್ತವ್ಯ ನಿರ್ವಹಿಸಬಹುದು ಎಂಬುದನ್ನು ತೋರಿಸಿಕೊಡುವ ಮೂಲಕ ಯುವ ಪೊಲೀಸ್ ಸಿಬ್ಬಂದಿಗಳಿಗೆ ಮಾದರಿಯಾಗಿದ್ದಾರೆ.

ಇತ್ತೀಚೆಗಷ್ಟೇ ತಾಲ್ಲೂಕಿನ ಎನ್.ಬೇಗೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟು ಗುಂಡಿಗಳು ನಿರ್ಮಾಣವಾಗಿದ್ದವು. ಈ ವೇಳೆ ಗೋವಿಂದರಾಜು ಅವರು ಆ ಭಾಗದ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ತಿ ಪಡಿಸುವ ಮೂಲಕ ಸಾರ್ವಜನಿಕ ವಲಯದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೋವಿಂದರಾಜು 112 ಪೊಲೀಸ್ ಸಹಾಯವಾಣಿ ವಾಹನದ ಸಿಬ್ಬಂದಿಯಾಗಿದ್ದು ಅವರು ಕರ್ತವ್ಯ ನಿರ್ವಹಿಸುವಾಗ ಯಾವುದೇ ಅಪಘಾತಗಳು ಸಂಭವಿಸಿದಾಗ ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಾಳು ಗಳನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಸಾಕಷ್ಟು ಜೀವಗಳನ್ನು ಉಳಿಸಿದ್ದಾರೆ. ತಮ್ಮ ಈ ಸೇವಾ ಮನೋಭಾವನೆಯಿಂದಲೇ ಇಂದು ಗೋವಿಂದರಾಜು ತಾಲ್ಲೂಕಿನ ಮನೆ ಮಾತಾಗಿದ್ದಾರೆ. ಇವರು ಪೊಲೀಸ್‌ ಇಲಾಖೆಗೆ ಸೇರಿದಾಗಿನಿಂದಲೂ ಕರ್ತವ್ಯದಲ್ಲಿ ಬದ್ಧತೆ ಮತ್ತು ಸಾಮಾಜಿಕ ಸೇವಾಕಾರ್ಯಗಳಿಂದಲೇ ತಾಲ್ಲೂಕಿನ ಜನರ ವಿಶ್ವಾಸ ಗಳಿಸಿದ್ದು, ಸಾಕಷ್ಟು ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ತನಿಖೆಯಲ್ಲಿ ಕೌಶಲವನ್ನು ತೋರಿಸುವ ಮೂಲಕ ಇತರ ಯುವ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದ್ದಾರೆ.

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago