ಯುವ ಡಾಟ್ ಕಾಂ

ಇಲ್ಲೊಬ್ಬ ಪರೋಪಕಾರಿ ತರುಣ ಪೊಲೀಸ್‌

 

ಪೊಲೀಸ್‌ ಎಂದರೆ ಸಾರ್ವಜನಿಕರಲ್ಲಿ ಏನೋ ಒಂದು ಭಯ. ಅವರ ಸಹವಾಸ ನಮಗೇಕೆ ಎನ್ನುವವರೇ ಹೆಚ್ಚು. ಪೊಲೀಸ್‌ ಎಂದರೆ ಕೈಯಲ್ಲಿ ಲಾಠಿ ಹಿಡಿದುಕೊಂಡು ತಪ್ಪಿತಸ್ಥರನ್ನು ಎಚ್ಚರಿಸುವ ಕೆಲಸ ಮಾಡುವವರು ಎಂಬ ಮನೋಭಾವನೆ ಇದೆ. ಆದರೆ ಪೊಲೀಸ್ ಎಂದರೆ ಭಯವಲ್ಲ ಅವರು ಭರವಸೆ ಎಂಬುದನ್ನು ತಮ ಸಮಾಜಮುಖಿ ಕಾರ್ಯಗಳಿಂದ ತೋರಿಸಿಕೊಟ್ಟಿದ್ದಾರೆ ಯುವ ಪೊಲೀಸ್ ಸಿಬ್ಬಂದಿ ಎಸ್.ಎಸ್.ಗೋವಿಂದರಾಜು.

ಗೋವಿಂದರಾಜು ಸರಗೂರು ತಾಲ್ಲೂಕಿನ ಸಾಗರ ಗ್ರಾಮದ ನಾರಾಯಣಚಾರ್ ಮತ್ತು ನಾಗಮಣಿ ದಂಪತಿಗಳ ಪುತ್ರ, ಮೈಸೂರು ಜಿಲ್ಲಾ ವ್ಯಾಪ್ತಿಯ 112 ಪೊಲೀಸ್‌ ಸಹಾಯವಾಣಿ ವಾಹನದ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಕರ್ತವ್ಯದ ಜೊತೆ ಜೊತೆಗೆ ಸಮಾಜಮುಖಿ ಕೆಲಸ ಕಾರ್ಯಗಳಿಂದ ಮತ್ತು ಮೂಲ ಸೌಕರ್ಯದಿಂದ ವಂಚಿತರಾದ ಅದಿವಾಸಿ ಸಮುದಾಯದವರ ಬಗ್ಗೆ ಕಾಳಜಿ ವಹಿಸುತ್ತಾ ಜನಸ್ನೇಹಿಯಾಗಿಯೂ ಕರ್ತವ್ಯ ನಿರ್ವಹಿಸಬಹುದು ಎಂಬುದನ್ನು ತೋರಿಸಿಕೊಡುವ ಮೂಲಕ ಯುವ ಪೊಲೀಸ್ ಸಿಬ್ಬಂದಿಗಳಿಗೆ ಮಾದರಿಯಾಗಿದ್ದಾರೆ.

ಇತ್ತೀಚೆಗಷ್ಟೇ ತಾಲ್ಲೂಕಿನ ಎನ್.ಬೇಗೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟು ಗುಂಡಿಗಳು ನಿರ್ಮಾಣವಾಗಿದ್ದವು. ಈ ವೇಳೆ ಗೋವಿಂದರಾಜು ಅವರು ಆ ಭಾಗದ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ತಿ ಪಡಿಸುವ ಮೂಲಕ ಸಾರ್ವಜನಿಕ ವಲಯದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೋವಿಂದರಾಜು 112 ಪೊಲೀಸ್ ಸಹಾಯವಾಣಿ ವಾಹನದ ಸಿಬ್ಬಂದಿಯಾಗಿದ್ದು ಅವರು ಕರ್ತವ್ಯ ನಿರ್ವಹಿಸುವಾಗ ಯಾವುದೇ ಅಪಘಾತಗಳು ಸಂಭವಿಸಿದಾಗ ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಾಳು ಗಳನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಸಾಕಷ್ಟು ಜೀವಗಳನ್ನು ಉಳಿಸಿದ್ದಾರೆ. ತಮ್ಮ ಈ ಸೇವಾ ಮನೋಭಾವನೆಯಿಂದಲೇ ಇಂದು ಗೋವಿಂದರಾಜು ತಾಲ್ಲೂಕಿನ ಮನೆ ಮಾತಾಗಿದ್ದಾರೆ. ಇವರು ಪೊಲೀಸ್‌ ಇಲಾಖೆಗೆ ಸೇರಿದಾಗಿನಿಂದಲೂ ಕರ್ತವ್ಯದಲ್ಲಿ ಬದ್ಧತೆ ಮತ್ತು ಸಾಮಾಜಿಕ ಸೇವಾಕಾರ್ಯಗಳಿಂದಲೇ ತಾಲ್ಲೂಕಿನ ಜನರ ವಿಶ್ವಾಸ ಗಳಿಸಿದ್ದು, ಸಾಕಷ್ಟು ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ತನಿಖೆಯಲ್ಲಿ ಕೌಶಲವನ್ನು ತೋರಿಸುವ ಮೂಲಕ ಇತರ ಯುವ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದ್ದಾರೆ.

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

7 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

7 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

8 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

9 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

9 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

9 hours ago