ಯುವ ಡಾಟ್ ಕಾಂ

ಇಲ್ಲೊಬ್ಬ ಪರೋಪಕಾರಿ ತರುಣ ಪೊಲೀಸ್‌

 

ಪೊಲೀಸ್‌ ಎಂದರೆ ಸಾರ್ವಜನಿಕರಲ್ಲಿ ಏನೋ ಒಂದು ಭಯ. ಅವರ ಸಹವಾಸ ನಮಗೇಕೆ ಎನ್ನುವವರೇ ಹೆಚ್ಚು. ಪೊಲೀಸ್‌ ಎಂದರೆ ಕೈಯಲ್ಲಿ ಲಾಠಿ ಹಿಡಿದುಕೊಂಡು ತಪ್ಪಿತಸ್ಥರನ್ನು ಎಚ್ಚರಿಸುವ ಕೆಲಸ ಮಾಡುವವರು ಎಂಬ ಮನೋಭಾವನೆ ಇದೆ. ಆದರೆ ಪೊಲೀಸ್ ಎಂದರೆ ಭಯವಲ್ಲ ಅವರು ಭರವಸೆ ಎಂಬುದನ್ನು ತಮ ಸಮಾಜಮುಖಿ ಕಾರ್ಯಗಳಿಂದ ತೋರಿಸಿಕೊಟ್ಟಿದ್ದಾರೆ ಯುವ ಪೊಲೀಸ್ ಸಿಬ್ಬಂದಿ ಎಸ್.ಎಸ್.ಗೋವಿಂದರಾಜು.

ಗೋವಿಂದರಾಜು ಸರಗೂರು ತಾಲ್ಲೂಕಿನ ಸಾಗರ ಗ್ರಾಮದ ನಾರಾಯಣಚಾರ್ ಮತ್ತು ನಾಗಮಣಿ ದಂಪತಿಗಳ ಪುತ್ರ, ಮೈಸೂರು ಜಿಲ್ಲಾ ವ್ಯಾಪ್ತಿಯ 112 ಪೊಲೀಸ್‌ ಸಹಾಯವಾಣಿ ವಾಹನದ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಕರ್ತವ್ಯದ ಜೊತೆ ಜೊತೆಗೆ ಸಮಾಜಮುಖಿ ಕೆಲಸ ಕಾರ್ಯಗಳಿಂದ ಮತ್ತು ಮೂಲ ಸೌಕರ್ಯದಿಂದ ವಂಚಿತರಾದ ಅದಿವಾಸಿ ಸಮುದಾಯದವರ ಬಗ್ಗೆ ಕಾಳಜಿ ವಹಿಸುತ್ತಾ ಜನಸ್ನೇಹಿಯಾಗಿಯೂ ಕರ್ತವ್ಯ ನಿರ್ವಹಿಸಬಹುದು ಎಂಬುದನ್ನು ತೋರಿಸಿಕೊಡುವ ಮೂಲಕ ಯುವ ಪೊಲೀಸ್ ಸಿಬ್ಬಂದಿಗಳಿಗೆ ಮಾದರಿಯಾಗಿದ್ದಾರೆ.

ಇತ್ತೀಚೆಗಷ್ಟೇ ತಾಲ್ಲೂಕಿನ ಎನ್.ಬೇಗೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟು ಗುಂಡಿಗಳು ನಿರ್ಮಾಣವಾಗಿದ್ದವು. ಈ ವೇಳೆ ಗೋವಿಂದರಾಜು ಅವರು ಆ ಭಾಗದ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ತಿ ಪಡಿಸುವ ಮೂಲಕ ಸಾರ್ವಜನಿಕ ವಲಯದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೋವಿಂದರಾಜು 112 ಪೊಲೀಸ್ ಸಹಾಯವಾಣಿ ವಾಹನದ ಸಿಬ್ಬಂದಿಯಾಗಿದ್ದು ಅವರು ಕರ್ತವ್ಯ ನಿರ್ವಹಿಸುವಾಗ ಯಾವುದೇ ಅಪಘಾತಗಳು ಸಂಭವಿಸಿದಾಗ ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಾಳು ಗಳನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಸಾಕಷ್ಟು ಜೀವಗಳನ್ನು ಉಳಿಸಿದ್ದಾರೆ. ತಮ್ಮ ಈ ಸೇವಾ ಮನೋಭಾವನೆಯಿಂದಲೇ ಇಂದು ಗೋವಿಂದರಾಜು ತಾಲ್ಲೂಕಿನ ಮನೆ ಮಾತಾಗಿದ್ದಾರೆ. ಇವರು ಪೊಲೀಸ್‌ ಇಲಾಖೆಗೆ ಸೇರಿದಾಗಿನಿಂದಲೂ ಕರ್ತವ್ಯದಲ್ಲಿ ಬದ್ಧತೆ ಮತ್ತು ಸಾಮಾಜಿಕ ಸೇವಾಕಾರ್ಯಗಳಿಂದಲೇ ತಾಲ್ಲೂಕಿನ ಜನರ ವಿಶ್ವಾಸ ಗಳಿಸಿದ್ದು, ಸಾಕಷ್ಟು ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ತನಿಖೆಯಲ್ಲಿ ಕೌಶಲವನ್ನು ತೋರಿಸುವ ಮೂಲಕ ಇತರ ಯುವ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದ್ದಾರೆ.

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago