ಯುವ ಡಾಟ್ ಕಾಂ

ಭಾರತೀಯ ಭೂ ಸೇನೆ: ಅಗ್ನಿವೀರರಿಗೆ ಆಹ್ವಾನ

ಕೆಲಸ ಬೇಕೇ ಕೆಲಸ

. ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು.

. ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ.

. ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.

. ಸೇವೆ ಅವಧಿ: 4 ವರ್ಷ

. ಅಗ್ನಿವೀರ್ ಕೆಟಗರಿವಾರು ವಿದ್ಯಾರ್ಹತೆಗಳ ವಿವರ:

ಅಗ್ನಿವೀರ್ (ಜನರಲ್ ಡ್ಯೂಟಿ): ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸು ಮಾಡಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.

ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ/ ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.

ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್: ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿಶೇ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.50 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 10 ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಜನರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು:

ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ
ನೀಡಲಾಗುವುದು.

.ಇತರೆ ಅರ್ಹತೆಗಳು: ಎನ್‌ಸಿಸಿ ಕೋಟಾ, ಕ್ರೀಡಾ ಕೋಟಾಗಳಡಿ ಕೂಡ ಹುದ್ದೆಗಳು ಇರುತ್ತವೆ.

ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.

.ಭೂ ಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
. 1ನೇ ವರ್ಷ: ರೂ. 30,000 ಜತೆಗೆ ಇತರೆ ಭತ್ಯೆಗಳು
. 2ವರ್ಷ: ರೂ. 33,000 ಜತೆಗೆ ಇತರೆ ಭತ್ಯೆಗಳು
.  3ನೇ ವರ್ಷ: ರೂ. 36,500 ಜತೆಗೆ ಇತರೆ ಭತ್ಯೆಗಳು
. 4ನೇ ವರ್ಷ: ರೂ. 40,000 ಜತೆಗೆ ಇತರೆ ಭತ್ಯೆಗಳು

. ಅರ್ಜಿ ಸಲ್ಲಿಸುವವರು https://joinindianarmy.nic.in ಗೆ ಭೇಟಿ ನೀಡಬಹುದು.
.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 12-03-2025
.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2025

ಆಂದೋಲನ ಡೆಸ್ಕ್

Recent Posts

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

6 mins ago

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

42 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

3 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

3 hours ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

6 hours ago