ಯುವ ಡಾಟ್ ಕಾಂ

ಭಾರತೀಯ ಭೂ ಸೇನೆ: ಅಗ್ನಿವೀರರಿಗೆ ಆಹ್ವಾನ

ಕೆಲಸ ಬೇಕೇ ಕೆಲಸ

. ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು.

. ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ.

. ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.

. ಸೇವೆ ಅವಧಿ: 4 ವರ್ಷ

. ಅಗ್ನಿವೀರ್ ಕೆಟಗರಿವಾರು ವಿದ್ಯಾರ್ಹತೆಗಳ ವಿವರ:

ಅಗ್ನಿವೀರ್ (ಜನರಲ್ ಡ್ಯೂಟಿ): ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸು ಮಾಡಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.

ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ/ ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.

ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್: ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿಶೇ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.50 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 10 ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಜನರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು:

ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ
ನೀಡಲಾಗುವುದು.

.ಇತರೆ ಅರ್ಹತೆಗಳು: ಎನ್‌ಸಿಸಿ ಕೋಟಾ, ಕ್ರೀಡಾ ಕೋಟಾಗಳಡಿ ಕೂಡ ಹುದ್ದೆಗಳು ಇರುತ್ತವೆ.

ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.

.ಭೂ ಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
. 1ನೇ ವರ್ಷ: ರೂ. 30,000 ಜತೆಗೆ ಇತರೆ ಭತ್ಯೆಗಳು
. 2ವರ್ಷ: ರೂ. 33,000 ಜತೆಗೆ ಇತರೆ ಭತ್ಯೆಗಳು
.  3ನೇ ವರ್ಷ: ರೂ. 36,500 ಜತೆಗೆ ಇತರೆ ಭತ್ಯೆಗಳು
. 4ನೇ ವರ್ಷ: ರೂ. 40,000 ಜತೆಗೆ ಇತರೆ ಭತ್ಯೆಗಳು

. ಅರ್ಜಿ ಸಲ್ಲಿಸುವವರು https://joinindianarmy.nic.in ಗೆ ಭೇಟಿ ನೀಡಬಹುದು.
.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 12-03-2025
.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2025

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

18 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

18 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

18 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

18 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

18 hours ago