ಯುವ ಡಾಟ್ ಕಾಂ

ಭಾರತೀಯ ಭೂ ಸೇನೆ: ಅಗ್ನಿವೀರರಿಗೆ ಆಹ್ವಾನ

ಕೆಲಸ ಬೇಕೇ ಕೆಲಸ

. ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು.

. ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ.

. ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.

. ಸೇವೆ ಅವಧಿ: 4 ವರ್ಷ

. ಅಗ್ನಿವೀರ್ ಕೆಟಗರಿವಾರು ವಿದ್ಯಾರ್ಹತೆಗಳ ವಿವರ:

ಅಗ್ನಿವೀರ್ (ಜನರಲ್ ಡ್ಯೂಟಿ): ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸು ಮಾಡಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.

ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ/ ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.

ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್: ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿಶೇ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.50 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 10 ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಟ್ರೇಡ್ಸ್‌ಮನ್‌: 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.

ಅಗ್ನಿವೀರ್ ಜನರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು:

ಎಸ್ಎಸ್ಎಲ್‌ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ
ನೀಡಲಾಗುವುದು.

.ಇತರೆ ಅರ್ಹತೆಗಳು: ಎನ್‌ಸಿಸಿ ಕೋಟಾ, ಕ್ರೀಡಾ ಕೋಟಾಗಳಡಿ ಕೂಡ ಹುದ್ದೆಗಳು ಇರುತ್ತವೆ.

ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.

.ಭೂ ಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
. 1ನೇ ವರ್ಷ: ರೂ. 30,000 ಜತೆಗೆ ಇತರೆ ಭತ್ಯೆಗಳು
. 2ವರ್ಷ: ರೂ. 33,000 ಜತೆಗೆ ಇತರೆ ಭತ್ಯೆಗಳು
.  3ನೇ ವರ್ಷ: ರೂ. 36,500 ಜತೆಗೆ ಇತರೆ ಭತ್ಯೆಗಳು
. 4ನೇ ವರ್ಷ: ರೂ. 40,000 ಜತೆಗೆ ಇತರೆ ಭತ್ಯೆಗಳು

. ಅರ್ಜಿ ಸಲ್ಲಿಸುವವರು https://joinindianarmy.nic.in ಗೆ ಭೇಟಿ ನೀಡಬಹುದು.
.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 12-03-2025
.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2025

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago