ಕೆಲಸ ಬೇಕೇ ಕೆಲಸ
. ಹುದ್ದೆಗಳ ಸಂಖ್ಯೆ: 4 ವಿಭಾಗಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುವುದು.
. ವಿದ್ಯಾರ್ಹತೆ: 8ನೇ ತರಗತಿ, 10ನೇ ತರಗತಿ ಮತ್ತು12ನೇ ತರಗತಿ.
. ವಯಸ್ಸಿನ ಅರ್ಹತೆಗಳು: ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.
. ಸೇವೆ ಅವಧಿ: 4 ವರ್ಷ
. ಅಗ್ನಿವೀರ್ ಕೆಟಗರಿವಾರು ವಿದ್ಯಾರ್ಹತೆಗಳ ವಿವರ:
ಅಗ್ನಿವೀರ್ (ಜನರಲ್ ಡ್ಯೂಟಿ): ಎಸ್ಎಸ್ಎಲ್ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸು ಮಾಡಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.
ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ/ ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.
ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್: ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿಶೇ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.50 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್: 10 ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್: 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಜನರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು:
ಎಸ್ಎಸ್ಎಲ್ಸಿ ಶಿಕ್ಷಣವನ್ನು ಕನಿಷ್ಠ ಶೇ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ
ನೀಡಲಾಗುವುದು.
.ಇತರೆ ಅರ್ಹತೆಗಳು: ಎನ್ಸಿಸಿ ಕೋಟಾ, ಕ್ರೀಡಾ ಕೋಟಾಗಳಡಿ ಕೂಡ ಹುದ್ದೆಗಳು ಇರುತ್ತವೆ.
ಆಯ್ಕೆ ವಿಧಾನಗಳು: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.
.ಭೂ ಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
. 1ನೇ ವರ್ಷ: ರೂ. 30,000 ಜತೆಗೆ ಇತರೆ ಭತ್ಯೆಗಳು
. 2ವರ್ಷ: ರೂ. 33,000 ಜತೆಗೆ ಇತರೆ ಭತ್ಯೆಗಳು
. 3ನೇ ವರ್ಷ: ರೂ. 36,500 ಜತೆಗೆ ಇತರೆ ಭತ್ಯೆಗಳು
. 4ನೇ ವರ್ಷ: ರೂ. 40,000 ಜತೆಗೆ ಇತರೆ ಭತ್ಯೆಗಳು
. ಅರ್ಜಿ ಸಲ್ಲಿಸುವವರು https://joinindianarmy.nic.in ಗೆ ಭೇಟಿ ನೀಡಬಹುದು.
.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 12-03-2025
.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2025
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…