ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್ಎನ್ಎಲ್) ೭೮ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಕೇವಲ ಒಂದು ರೂಪಾಯಿಗೆ ನಿತ್ಯ ೨ಜಿಬಿ ಡೇಟಾ, ಅನಿಯಮಿತ ಕರೆ ಯೋಜನೆಯನ್ನು ಪ್ರಕಟಿಸಿದೆ.
ಬಿಎಸ್ಎನ್ಎಲ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹೊಸ ಆಜಾದಿ ಕಾ ಯೋಜನೆಯನ್ನು ಘೋಷಿಸಿದೆ. ಇದರ ಪ್ರಕಾರ ಬಿಎಸ್ಎನ್ಎಲ್ನ ಈ ಒಂದು ರೂ. ಪ್ಲ್ಯಾನ್ ಬಳಕೆದಾರರಿಗೆ ಅನಿಯಮಿತ ಕರೆಗಳ ಜೊತೆಗೆ ನಿತ್ಯ ೧೦೦ ಎಸ್ಎಂಎಸ್ ಉಚಿತ ನೀಡುತ್ತಿದೆ. ಇದರ ಜೊತೆಗೆ ೨ ಜಿಬಿ ದೈನಂದಿನ ಡೇಟಾವನ್ನೂ ಈ ಪ್ಯಾಕ್ನಲ್ಲಿ ನೀಡುತ್ತಿದೆ.
ಬಿಎಸ್ಎನ್ಎಲ್ ಕಂಪೆನಿಯ ಈ ಯೋಜನೆಯ ಮಾನ್ಯತೆ ಒಂದು ತಿಂಗಳು ಮಾತ್ರ! ಈ ಪ್ಲ್ಯಾನ್ ಜೊತೆಗೆ ಹಲವು ಪ್ರಯೋಜನಗಳೊಂದಿಗೆ ಸಿಮ್ ಕಾರ್ಡ್ ಅನ್ನೂ ಉಚಿತವಾಗಿ ನೀಡಲಾಗುತ್ತಿದೆ. ಬಿಎಸ್ಎನ್ಎಲ್ ಸೇವೆಯನ್ನು ಬಳಸಲುಬಯಸಿದರೆ ಕೇವಲ ಒಂದು ರೂಪಾಯಿ ಪಾವತಿಸುವ ಮೂಲಕ ಹೊಸ ಸಿಮ್ ಖರೀದಿಸಿ, ಇದರಿಂದ ಅನಿಯಮಿತ ಕರೆ, ಉಚಿತ ಎಸ್ಎಂಎಸ್ ಮತ್ತು ನಿತ್ಯ ೨ಜಿಬಿ ಡೇಟಾವನ್ನೂ ಪಡೆಯಬಹುದು. ಬಿಎಸ್ಎನ್ಎಲ್ನ ಈ ಫ್ರೀಡಂ ಆಫರ್ ಆ.೧ರಿಂದ ಪ್ರಾರಂಭವಾಗಿದ್ದು ಆ.೩೧ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಜನರು ತಮ್ಮ ಹತ್ತಿರದ ಬಿಎಸ್ಎನ್ಎಲ್ ಕಚೇರಿ ಅಥವಾ ಚಿಲ್ಲರೆ ವ್ಯಾಪಾರಿಗಳ ಮೂಲಕ ಸಿಮ್ ಪಡೆದು ಈ ಆಫರ್ನ ಸೇವೆಯನ್ನು ಬಳಸಿಕೊಳ್ಳಬಹುದು.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…