ಯುವ ಡಾಟ್ ಕಾಂ

ಬಿಎಸ್ಎನ್ಎಲ್‌ನಿಂದ ಸ್ವಾತಂತ್ರ್ಯೋತವದ ಕೊಡುಗೆ

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್‌ಎಲ್) ೭೮ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಕೇವಲ ಒಂದು ರೂಪಾಯಿಗೆ ನಿತ್ಯ ೨ಜಿಬಿ ಡೇಟಾ, ಅನಿಯಮಿತ ಕರೆ ಯೋಜನೆಯನ್ನು ಪ್ರಕಟಿಸಿದೆ.

ಬಿಎಸ್‌ಎನ್‌ಎಲ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹೊಸ ಆಜಾದಿ ಕಾ ಯೋಜನೆಯನ್ನು ಘೋಷಿಸಿದೆ. ಇದರ ಪ್ರಕಾರ ಬಿಎಸ್‌ಎನ್‌ಎಲ್‌ನ ಈ ಒಂದು ರೂ. ಪ್ಲ್ಯಾನ್ ಬಳಕೆದಾರರಿಗೆ ಅನಿಯಮಿತ ಕರೆಗಳ ಜೊತೆಗೆ ನಿತ್ಯ ೧೦೦ ಎಸ್‌ಎಂಎಸ್ ಉಚಿತ ನೀಡುತ್ತಿದೆ. ಇದರ ಜೊತೆಗೆ ೨ ಜಿಬಿ ದೈನಂದಿನ ಡೇಟಾವನ್ನೂ ಈ ಪ್ಯಾಕ್‌ನಲ್ಲಿ ನೀಡುತ್ತಿದೆ.

ಬಿಎಸ್‌ಎನ್‌ಎಲ್ ಕಂಪೆನಿಯ ಈ ಯೋಜನೆಯ ಮಾನ್ಯತೆ ಒಂದು ತಿಂಗಳು ಮಾತ್ರ! ಈ ಪ್ಲ್ಯಾನ್ ಜೊತೆಗೆ ಹಲವು ಪ್ರಯೋಜನಗಳೊಂದಿಗೆ ಸಿಮ್ ಕಾರ್ಡ್ ಅನ್ನೂ ಉಚಿತವಾಗಿ ನೀಡಲಾಗುತ್ತಿದೆ. ಬಿಎಸ್‌ಎನ್‌ಎಲ್ ಸೇವೆಯನ್ನು ಬಳಸಲುಬಯಸಿದರೆ ಕೇವಲ ಒಂದು ರೂಪಾಯಿ ಪಾವತಿಸುವ ಮೂಲಕ ಹೊಸ ಸಿಮ್ ಖರೀದಿಸಿ, ಇದರಿಂದ ಅನಿಯಮಿತ ಕರೆ, ಉಚಿತ ಎಸ್‌ಎಂಎಸ್ ಮತ್ತು ನಿತ್ಯ ೨ಜಿಬಿ ಡೇಟಾವನ್ನೂ ಪಡೆಯಬಹುದು. ಬಿಎಸ್‌ಎನ್‌ಎಲ್‌ನ ಈ ಫ್ರೀಡಂ ಆಫರ್ ಆ.೧ರಿಂದ ಪ್ರಾರಂಭವಾಗಿದ್ದು ಆ.೩೧ರವರೆಗೆ ಇರುತ್ತದೆ.  ಈ ಅವಧಿಯಲ್ಲಿ ಜನರು ತಮ್ಮ ಹತ್ತಿರದ ಬಿಎಸ್‌ಎನ್‌ಎಲ್ ಕಚೇರಿ ಅಥವಾ ಚಿಲ್ಲರೆ ವ್ಯಾಪಾರಿಗಳ ಮೂಲಕ ಸಿಮ್ ಪಡೆದು ಈ ಆಫರ್‌ನ ಸೇವೆಯನ್ನು ಬಳಸಿಕೊಳ್ಳಬಹುದು.

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

40 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

1 hour ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

2 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

3 hours ago