ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್ಎನ್ಎಲ್) ೭೮ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಕೇವಲ ಒಂದು ರೂಪಾಯಿಗೆ ನಿತ್ಯ ೨ಜಿಬಿ ಡೇಟಾ, ಅನಿಯಮಿತ ಕರೆ ಯೋಜನೆಯನ್ನು ಪ್ರಕಟಿಸಿದೆ.
ಬಿಎಸ್ಎನ್ಎಲ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹೊಸ ಆಜಾದಿ ಕಾ ಯೋಜನೆಯನ್ನು ಘೋಷಿಸಿದೆ. ಇದರ ಪ್ರಕಾರ ಬಿಎಸ್ಎನ್ಎಲ್ನ ಈ ಒಂದು ರೂ. ಪ್ಲ್ಯಾನ್ ಬಳಕೆದಾರರಿಗೆ ಅನಿಯಮಿತ ಕರೆಗಳ ಜೊತೆಗೆ ನಿತ್ಯ ೧೦೦ ಎಸ್ಎಂಎಸ್ ಉಚಿತ ನೀಡುತ್ತಿದೆ. ಇದರ ಜೊತೆಗೆ ೨ ಜಿಬಿ ದೈನಂದಿನ ಡೇಟಾವನ್ನೂ ಈ ಪ್ಯಾಕ್ನಲ್ಲಿ ನೀಡುತ್ತಿದೆ.
ಬಿಎಸ್ಎನ್ಎಲ್ ಕಂಪೆನಿಯ ಈ ಯೋಜನೆಯ ಮಾನ್ಯತೆ ಒಂದು ತಿಂಗಳು ಮಾತ್ರ! ಈ ಪ್ಲ್ಯಾನ್ ಜೊತೆಗೆ ಹಲವು ಪ್ರಯೋಜನಗಳೊಂದಿಗೆ ಸಿಮ್ ಕಾರ್ಡ್ ಅನ್ನೂ ಉಚಿತವಾಗಿ ನೀಡಲಾಗುತ್ತಿದೆ. ಬಿಎಸ್ಎನ್ಎಲ್ ಸೇವೆಯನ್ನು ಬಳಸಲುಬಯಸಿದರೆ ಕೇವಲ ಒಂದು ರೂಪಾಯಿ ಪಾವತಿಸುವ ಮೂಲಕ ಹೊಸ ಸಿಮ್ ಖರೀದಿಸಿ, ಇದರಿಂದ ಅನಿಯಮಿತ ಕರೆ, ಉಚಿತ ಎಸ್ಎಂಎಸ್ ಮತ್ತು ನಿತ್ಯ ೨ಜಿಬಿ ಡೇಟಾವನ್ನೂ ಪಡೆಯಬಹುದು. ಬಿಎಸ್ಎನ್ಎಲ್ನ ಈ ಫ್ರೀಡಂ ಆಫರ್ ಆ.೧ರಿಂದ ಪ್ರಾರಂಭವಾಗಿದ್ದು ಆ.೩೧ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಜನರು ತಮ್ಮ ಹತ್ತಿರದ ಬಿಎಸ್ಎನ್ಎಲ್ ಕಚೇರಿ ಅಥವಾ ಚಿಲ್ಲರೆ ವ್ಯಾಪಾರಿಗಳ ಮೂಲಕ ಸಿಮ್ ಪಡೆದು ಈ ಆಫರ್ನ ಸೇವೆಯನ್ನು ಬಳಸಿಕೊಳ್ಳಬಹುದು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…