ಯುವ ಡಾಟ್ ಕಾಂ

ಹಲವು ಹೊಸತುಗಳ ಸೋನಿ ಹೆಡ್‌ಫೋನ್‌

ಸೋನಿ ಕಂಪೆನಿಯು ಗೇಮಿಂಗ್ ಹಾಗೂ ಸಂಗೀತ ಪ್ರಿಯ ಯುವಜನರಿಗಾಗಿಯೇ ರೂಪಿಸಲಾದ ಅಲ್ಡ್ ವೇರ್ (Sony ULT Wear) ಎಂಬ ಸರಣಿಯ ಹೆಡ್‌ಫೋನ್‌ ಅನ್ನು ಹೆಚ್ಚು ಜನಪ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ.

ಹಗುರವಾದ ಮತ್ತು ಕಿವಿಯ ಮೇಲ್ಬಾಗದಲ್ಲಿ ಸರಿಯಾಗಿ ಕೂರುವಂತೆ ಹೊಂದಿಸಿಕೊಳ್ಳಲು ವ್ಯವಸ್ಥೆಯಿರುವ ಈ ಹೆಡ್‌ಫೋನ್‌ ತಲೆಯ ಮೇಲೆ ಧರಿಸಲು ಅನುಕೂಲಕರವಾಗಿದ್ದು, ಅಳತೆ ಹೊಂದಿಸಿಕೊಳ್ಳಲು ಇದರಲ್ಲಿ ಅವಕಾಶ ನೀಡಲಾಗಿದೆ. ಇದರ ಇಯರ್ ಕಪ್‌ಗಳನ್ನು ಹೇಗೆ ಕೂರಿಸಲಾಗಿದೆ ಎಂದರೆ ಅವುಗಳನ್ನು ಬೇಕಾದ ಕೋನಕ್ಕೆ ತಿರುಗಿಸಿ ಮಡಚ ಬಹುದಾಗಿದ್ದು, ಕಾಂಪ್ಯಾಕ್ ಕೇಸ್ ಒಳಗೆ ಈ ಹೆಡ್‌ಫೋನ್‌ ಕೂರುತ್ತದೆ. ಪ್ರಯಾಣ ಮಾಡುವಾಗ ಬ್ಯಾಗ್ ನೊಳಗೆ ಒಯ್ಯಲು ತೀರಾ ಅನುಕೂಲಕರವಾದ ಕೇಸ್ ಹೊಂದಿದೆ.

ಅಲ್ಪ ವೇರ್ ಹೆಡ್‌ಫೋನ್‌ನಲ್ಲಿ ಆಲಿಸುವ ಧ್ವನಿಯ ಗುಣಮಟ್ಟವು ಅದ್ಭುತವಾಗಿದ್ದು, ಕಿವಿಯ ಮೇಲಿರುವ ಕುಶನ್ ಭರಿತ ಇಯರ್ ಕಪ್‌ಗಳು ಹೊರಗಿನ ಗದ್ದಲ ಒಳಗೆ ಬಾರದಂತೆ ಮತ್ತು ಸಾಧನದ ಮೂಲಕ ಕೇಳಿಸುವ ಧ್ವನಿ ಹೊರಗೆ ಹೋಗದಂತೆ ತಡೆಯುವುದರಿಂದ ಹಾಡುಗಳನ್ನು ಆನಂದದಿಂದ ಆಲಿಸಬಹುದಾಗಿದೆ. ಅಲ್ಲದೆ ಇದರಲ್ಲಿನ ಹೊರಗಿನ ಸದ್ದನ್ನು ಸಂಪೂರ್ಣ ತಡೆಯುವ ನಾಯ್ಸ್ ಕ್ಯಾನ್ಸಲೇಶನ್ ಬಟನ್ ಒತ್ತಿದರೆ ಹೊರಗಿನ ಸದ್ದನ್ನು ತಡೆಯುವ ಮತ್ತು ಆಲಿಸುವ ಸೌಲಭ್ಯ ಪಡೆಯಬಹುದು. ಜತೆಗೆ ಪಕ್ಕದಲ್ಲೇ ಇರುವ ಹೊಳೆಯುವ ULT ಬಟನ್ ಆನ್ ಮಾಡಿದರೆ ಬೇಸ್ ಧ್ವನಿ ಗರಿಷ್ಟಮಟ್ಟದಲ್ಲಿ ಕೇಳಿಸುತ್ತದೆ.

ಈ ಸುಂದರ ಹೆಡ್ ಫೋನ್‌ ಅನ್ನು ಬ್ಲೂಟೂತ್ ಮೂಲಕ ಸ್ಟಾರ್ಟ್‌ಫೋನ್, ಟಿವಿ, ಕಂಪ್ಯೂಟರ್ ಹಾಗೂ ಬೇರಾವುದೇ ಪ್ಲೇಯರ್‌ಗಳನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ 3.5 ಜ್ಯಾಕ್ ಇದೆ ಮತ್ತು ಕೇಬಲ್ ಸಂಪರ್ಕ ಕೂಡ ನೀಡಲಾಗಿದೆ. ಬ್ಲೂಟೂತ್ ಸಂಪರ್ಕ ಸುಲಭವಾಗಿ ಕನೆಕ್ಟ್ ಆಗಲಿದ್ದು, ಇದಕ್ಕಾಗಿ ಪ್ರತ್ಯೇಕ ಆ್ಯಪ್ ಬೇಕಿಲ್ಲ.

ಇನ್ನು ಈ ಹೆಡ್‌ಫೋನ್‌ ಅನ್ನು ಕೇಬಲ್ ಮೂಲಕ ಸಂಪರ್ಕಿಸಿದರೆ ಬ್ಯಾಟರಿಯೇನೂ ಬಳಕೆಯಾಗುವುದಿಲ್ಲ. ಬ್ಲೂಟೂತ್ ಮೂಲಕ ಸಂಪರ್ಕಿಸಿದರೆ ಬ್ಯಾಟರಿ ಬಳಕೆಯಾಗುತ್ತದೆ. ನಾಲ್ಡ್ ಕ್ಯಾನ್ಸಲಿಂಗ್ ಆನ್ ಮಾಡಿಕೊಂಡರೆ ಹೆಚ್ಚುವರಿ ಬ್ಯಾಟರಿ ಖರ್ಚಾಗುತ್ತದೆ. ನಾಯ್ ಕ್ಯಾನ್ಸಲಿಂಗ್ ಆನ್ ಮಾಡಿಕೊಂಡು 30 ಗಂಟೆಗಳ ಕಾಲ ಸತತವಾಗಿ ಹಾಡುಗಳನ್ನು ಕೇಳಬಹುದು. ಇನ್ನು ಇದರ ಬ್ಯಾಟರಿ ಶೂನ್ಯದಿಂದ ಪೂರ್ಣವಾಗಿ ಚಾರ್ಜ್ ಆಗಲು ಸುಮಾರು ಮೂರುವರೆ ಗಂಟೆ ಬೇಕಾಗುತ್ತದೆ.

ಇಂತಹ ಅದ್ಭುತವಾದ ಸೋನಿ ಕಂಪೆನಿಯ ಹೆಡ್‌ಫೋನ್‌ 16,990 ರೂ.ಗಳಿಗೆ ಲಭ್ಯವಿದೆ.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

3 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

5 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

5 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

6 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

6 hours ago