ಯುವ ಡಾಟ್ ಕಾಂ

ಹಲವು ಹೊಸತುಗಳ ಸೋನಿ ಹೆಡ್‌ಫೋನ್‌

ಸೋನಿ ಕಂಪೆನಿಯು ಗೇಮಿಂಗ್ ಹಾಗೂ ಸಂಗೀತ ಪ್ರಿಯ ಯುವಜನರಿಗಾಗಿಯೇ ರೂಪಿಸಲಾದ ಅಲ್ಡ್ ವೇರ್ (Sony ULT Wear) ಎಂಬ ಸರಣಿಯ ಹೆಡ್‌ಫೋನ್‌ ಅನ್ನು ಹೆಚ್ಚು ಜನಪ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ.

ಹಗುರವಾದ ಮತ್ತು ಕಿವಿಯ ಮೇಲ್ಬಾಗದಲ್ಲಿ ಸರಿಯಾಗಿ ಕೂರುವಂತೆ ಹೊಂದಿಸಿಕೊಳ್ಳಲು ವ್ಯವಸ್ಥೆಯಿರುವ ಈ ಹೆಡ್‌ಫೋನ್‌ ತಲೆಯ ಮೇಲೆ ಧರಿಸಲು ಅನುಕೂಲಕರವಾಗಿದ್ದು, ಅಳತೆ ಹೊಂದಿಸಿಕೊಳ್ಳಲು ಇದರಲ್ಲಿ ಅವಕಾಶ ನೀಡಲಾಗಿದೆ. ಇದರ ಇಯರ್ ಕಪ್‌ಗಳನ್ನು ಹೇಗೆ ಕೂರಿಸಲಾಗಿದೆ ಎಂದರೆ ಅವುಗಳನ್ನು ಬೇಕಾದ ಕೋನಕ್ಕೆ ತಿರುಗಿಸಿ ಮಡಚ ಬಹುದಾಗಿದ್ದು, ಕಾಂಪ್ಯಾಕ್ ಕೇಸ್ ಒಳಗೆ ಈ ಹೆಡ್‌ಫೋನ್‌ ಕೂರುತ್ತದೆ. ಪ್ರಯಾಣ ಮಾಡುವಾಗ ಬ್ಯಾಗ್ ನೊಳಗೆ ಒಯ್ಯಲು ತೀರಾ ಅನುಕೂಲಕರವಾದ ಕೇಸ್ ಹೊಂದಿದೆ.

ಅಲ್ಪ ವೇರ್ ಹೆಡ್‌ಫೋನ್‌ನಲ್ಲಿ ಆಲಿಸುವ ಧ್ವನಿಯ ಗುಣಮಟ್ಟವು ಅದ್ಭುತವಾಗಿದ್ದು, ಕಿವಿಯ ಮೇಲಿರುವ ಕುಶನ್ ಭರಿತ ಇಯರ್ ಕಪ್‌ಗಳು ಹೊರಗಿನ ಗದ್ದಲ ಒಳಗೆ ಬಾರದಂತೆ ಮತ್ತು ಸಾಧನದ ಮೂಲಕ ಕೇಳಿಸುವ ಧ್ವನಿ ಹೊರಗೆ ಹೋಗದಂತೆ ತಡೆಯುವುದರಿಂದ ಹಾಡುಗಳನ್ನು ಆನಂದದಿಂದ ಆಲಿಸಬಹುದಾಗಿದೆ. ಅಲ್ಲದೆ ಇದರಲ್ಲಿನ ಹೊರಗಿನ ಸದ್ದನ್ನು ಸಂಪೂರ್ಣ ತಡೆಯುವ ನಾಯ್ಸ್ ಕ್ಯಾನ್ಸಲೇಶನ್ ಬಟನ್ ಒತ್ತಿದರೆ ಹೊರಗಿನ ಸದ್ದನ್ನು ತಡೆಯುವ ಮತ್ತು ಆಲಿಸುವ ಸೌಲಭ್ಯ ಪಡೆಯಬಹುದು. ಜತೆಗೆ ಪಕ್ಕದಲ್ಲೇ ಇರುವ ಹೊಳೆಯುವ ULT ಬಟನ್ ಆನ್ ಮಾಡಿದರೆ ಬೇಸ್ ಧ್ವನಿ ಗರಿಷ್ಟಮಟ್ಟದಲ್ಲಿ ಕೇಳಿಸುತ್ತದೆ.

ಈ ಸುಂದರ ಹೆಡ್ ಫೋನ್‌ ಅನ್ನು ಬ್ಲೂಟೂತ್ ಮೂಲಕ ಸ್ಟಾರ್ಟ್‌ಫೋನ್, ಟಿವಿ, ಕಂಪ್ಯೂಟರ್ ಹಾಗೂ ಬೇರಾವುದೇ ಪ್ಲೇಯರ್‌ಗಳನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ 3.5 ಜ್ಯಾಕ್ ಇದೆ ಮತ್ತು ಕೇಬಲ್ ಸಂಪರ್ಕ ಕೂಡ ನೀಡಲಾಗಿದೆ. ಬ್ಲೂಟೂತ್ ಸಂಪರ್ಕ ಸುಲಭವಾಗಿ ಕನೆಕ್ಟ್ ಆಗಲಿದ್ದು, ಇದಕ್ಕಾಗಿ ಪ್ರತ್ಯೇಕ ಆ್ಯಪ್ ಬೇಕಿಲ್ಲ.

ಇನ್ನು ಈ ಹೆಡ್‌ಫೋನ್‌ ಅನ್ನು ಕೇಬಲ್ ಮೂಲಕ ಸಂಪರ್ಕಿಸಿದರೆ ಬ್ಯಾಟರಿಯೇನೂ ಬಳಕೆಯಾಗುವುದಿಲ್ಲ. ಬ್ಲೂಟೂತ್ ಮೂಲಕ ಸಂಪರ್ಕಿಸಿದರೆ ಬ್ಯಾಟರಿ ಬಳಕೆಯಾಗುತ್ತದೆ. ನಾಲ್ಡ್ ಕ್ಯಾನ್ಸಲಿಂಗ್ ಆನ್ ಮಾಡಿಕೊಂಡರೆ ಹೆಚ್ಚುವರಿ ಬ್ಯಾಟರಿ ಖರ್ಚಾಗುತ್ತದೆ. ನಾಯ್ ಕ್ಯಾನ್ಸಲಿಂಗ್ ಆನ್ ಮಾಡಿಕೊಂಡು 30 ಗಂಟೆಗಳ ಕಾಲ ಸತತವಾಗಿ ಹಾಡುಗಳನ್ನು ಕೇಳಬಹುದು. ಇನ್ನು ಇದರ ಬ್ಯಾಟರಿ ಶೂನ್ಯದಿಂದ ಪೂರ್ಣವಾಗಿ ಚಾರ್ಜ್ ಆಗಲು ಸುಮಾರು ಮೂರುವರೆ ಗಂಟೆ ಬೇಕಾಗುತ್ತದೆ.

ಇಂತಹ ಅದ್ಭುತವಾದ ಸೋನಿ ಕಂಪೆನಿಯ ಹೆಡ್‌ಫೋನ್‌ 16,990 ರೂ.ಗಳಿಗೆ ಲಭ್ಯವಿದೆ.

ಆಂದೋಲನ ಡೆಸ್ಕ್

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

7 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

7 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

8 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

8 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

9 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

9 hours ago