ಸೋನಿ ಕಂಪೆನಿಯು ಗೇಮಿಂಗ್ ಹಾಗೂ ಸಂಗೀತ ಪ್ರಿಯ ಯುವಜನರಿಗಾಗಿಯೇ ರೂಪಿಸಲಾದ ಅಲ್ಡ್ ವೇರ್ (Sony ULT Wear) ಎಂಬ ಸರಣಿಯ ಹೆಡ್ಫೋನ್ ಅನ್ನು ಹೆಚ್ಚು ಜನಪ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ.
ಹಗುರವಾದ ಮತ್ತು ಕಿವಿಯ ಮೇಲ್ಬಾಗದಲ್ಲಿ ಸರಿಯಾಗಿ ಕೂರುವಂತೆ ಹೊಂದಿಸಿಕೊಳ್ಳಲು ವ್ಯವಸ್ಥೆಯಿರುವ ಈ ಹೆಡ್ಫೋನ್ ತಲೆಯ ಮೇಲೆ ಧರಿಸಲು ಅನುಕೂಲಕರವಾಗಿದ್ದು, ಅಳತೆ ಹೊಂದಿಸಿಕೊಳ್ಳಲು ಇದರಲ್ಲಿ ಅವಕಾಶ ನೀಡಲಾಗಿದೆ. ಇದರ ಇಯರ್ ಕಪ್ಗಳನ್ನು ಹೇಗೆ ಕೂರಿಸಲಾಗಿದೆ ಎಂದರೆ ಅವುಗಳನ್ನು ಬೇಕಾದ ಕೋನಕ್ಕೆ ತಿರುಗಿಸಿ ಮಡಚ ಬಹುದಾಗಿದ್ದು, ಕಾಂಪ್ಯಾಕ್ ಕೇಸ್ ಒಳಗೆ ಈ ಹೆಡ್ಫೋನ್ ಕೂರುತ್ತದೆ. ಪ್ರಯಾಣ ಮಾಡುವಾಗ ಬ್ಯಾಗ್ ನೊಳಗೆ ಒಯ್ಯಲು ತೀರಾ ಅನುಕೂಲಕರವಾದ ಕೇಸ್ ಹೊಂದಿದೆ.
ಅಲ್ಪ ವೇರ್ ಹೆಡ್ಫೋನ್ನಲ್ಲಿ ಆಲಿಸುವ ಧ್ವನಿಯ ಗುಣಮಟ್ಟವು ಅದ್ಭುತವಾಗಿದ್ದು, ಕಿವಿಯ ಮೇಲಿರುವ ಕುಶನ್ ಭರಿತ ಇಯರ್ ಕಪ್ಗಳು ಹೊರಗಿನ ಗದ್ದಲ ಒಳಗೆ ಬಾರದಂತೆ ಮತ್ತು ಸಾಧನದ ಮೂಲಕ ಕೇಳಿಸುವ ಧ್ವನಿ ಹೊರಗೆ ಹೋಗದಂತೆ ತಡೆಯುವುದರಿಂದ ಹಾಡುಗಳನ್ನು ಆನಂದದಿಂದ ಆಲಿಸಬಹುದಾಗಿದೆ. ಅಲ್ಲದೆ ಇದರಲ್ಲಿನ ಹೊರಗಿನ ಸದ್ದನ್ನು ಸಂಪೂರ್ಣ ತಡೆಯುವ ನಾಯ್ಸ್ ಕ್ಯಾನ್ಸಲೇಶನ್ ಬಟನ್ ಒತ್ತಿದರೆ ಹೊರಗಿನ ಸದ್ದನ್ನು ತಡೆಯುವ ಮತ್ತು ಆಲಿಸುವ ಸೌಲಭ್ಯ ಪಡೆಯಬಹುದು. ಜತೆಗೆ ಪಕ್ಕದಲ್ಲೇ ಇರುವ ಹೊಳೆಯುವ ULT ಬಟನ್ ಆನ್ ಮಾಡಿದರೆ ಬೇಸ್ ಧ್ವನಿ ಗರಿಷ್ಟಮಟ್ಟದಲ್ಲಿ ಕೇಳಿಸುತ್ತದೆ.
ಈ ಸುಂದರ ಹೆಡ್ ಫೋನ್ ಅನ್ನು ಬ್ಲೂಟೂತ್ ಮೂಲಕ ಸ್ಟಾರ್ಟ್ಫೋನ್, ಟಿವಿ, ಕಂಪ್ಯೂಟರ್ ಹಾಗೂ ಬೇರಾವುದೇ ಪ್ಲೇಯರ್ಗಳನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ 3.5 ಜ್ಯಾಕ್ ಇದೆ ಮತ್ತು ಕೇಬಲ್ ಸಂಪರ್ಕ ಕೂಡ ನೀಡಲಾಗಿದೆ. ಬ್ಲೂಟೂತ್ ಸಂಪರ್ಕ ಸುಲಭವಾಗಿ ಕನೆಕ್ಟ್ ಆಗಲಿದ್ದು, ಇದಕ್ಕಾಗಿ ಪ್ರತ್ಯೇಕ ಆ್ಯಪ್ ಬೇಕಿಲ್ಲ.
ಇನ್ನು ಈ ಹೆಡ್ಫೋನ್ ಅನ್ನು ಕೇಬಲ್ ಮೂಲಕ ಸಂಪರ್ಕಿಸಿದರೆ ಬ್ಯಾಟರಿಯೇನೂ ಬಳಕೆಯಾಗುವುದಿಲ್ಲ. ಬ್ಲೂಟೂತ್ ಮೂಲಕ ಸಂಪರ್ಕಿಸಿದರೆ ಬ್ಯಾಟರಿ ಬಳಕೆಯಾಗುತ್ತದೆ. ನಾಲ್ಡ್ ಕ್ಯಾನ್ಸಲಿಂಗ್ ಆನ್ ಮಾಡಿಕೊಂಡರೆ ಹೆಚ್ಚುವರಿ ಬ್ಯಾಟರಿ ಖರ್ಚಾಗುತ್ತದೆ. ನಾಯ್ ಕ್ಯಾನ್ಸಲಿಂಗ್ ಆನ್ ಮಾಡಿಕೊಂಡು 30 ಗಂಟೆಗಳ ಕಾಲ ಸತತವಾಗಿ ಹಾಡುಗಳನ್ನು ಕೇಳಬಹುದು. ಇನ್ನು ಇದರ ಬ್ಯಾಟರಿ ಶೂನ್ಯದಿಂದ ಪೂರ್ಣವಾಗಿ ಚಾರ್ಜ್ ಆಗಲು ಸುಮಾರು ಮೂರುವರೆ ಗಂಟೆ ಬೇಕಾಗುತ್ತದೆ.
ಇಂತಹ ಅದ್ಭುತವಾದ ಸೋನಿ ಕಂಪೆನಿಯ ಹೆಡ್ಫೋನ್ 16,990 ರೂ.ಗಳಿಗೆ ಲಭ್ಯವಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…