ಸೈಬರ್ ಅಪರಾಧ ಪ್ರಕರಣಗಳು ದಿನೇದಿನೆ ಹೆಚ್ಚುತ್ತಲೇ ಇವೆ. ಜನರು ಎಷ್ಟೇ ಜಾಗ್ರತೆವಹಿಸಿದ್ದರೂ ಸೈಬರ್ ಅಪರಾಧಿಗಳು ಜನರನ್ನು ವಂಚಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಲೇ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ಕ್ಯಾಪ್ಚಾ ಕೋಡ್ ಹೆಸರಿನಲ್ಲಿ ದೊಡ್ಡ ವಂಚನೆ ನಡೆಯುತ್ತಿದೆ.

ಗೂಗಲ್‌ನಲ್ಲಿ ಏನನ್ನಾದರೂ ಹುಡುಕುವಾಗ ಕ್ಯಾಪ್ಚಾ ಕೋಡ್‌ಅನ್ನು ಪರಿಶೀಲಿಸಲು ನೀವು ಅನೇಕ ಬಾರಿ ಪ್ರಾಪ್ಟ್‌ಅನ್ನು ನೋಡಿರಬೇಕು. ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ‘ ನಾನು ರೋಬೋಟ್ ಅಲ್ಲ’ ಎಂಬ ಆಯ್ಕೆ ಸಿಗುತ್ತದೆ. ಅದನ್ನು ಟಿಕ್ ಮಾಡಿದ ನಂತರ ನೀವು ಮುಂದುವರಿಯಲು ಸಾಧ್ಯವಾಗುತ್ತದೆ. ವಾಸ್ತವವಾಗಿ ಯಾವುದೇ ರೋಬೋಟ್ ಅದನ್ನು ದುರುಪಯೋಗಪಡಿಸಿಕೊಳ್ಳದಂತೆ ಪರಿಶೀಲಿಸಲು ಸರ್ಚ್ ಇಂಜಿನ್‌ಗಳು ಈ ರೀತಿಯ ಕ್ಯಾಪ್ಚಾ ಕೋಡ್ ಹಾಕುತ್ತವೆ. ನಕಲಿ ವೆಬ್‌ಸೈಟ್ ಗಳು ಮತ್ತು ಕ್ಯಾಪ್ಚಾ ಕೋಡ್‌ಗಳ ಮೂಲಕ ಹೊಸ ರೀತಿಯ ವಂಚನೆ ಮಾಡಲಾಗುತ್ತಿದೆ. ಈ ವಂಚನೆಯಲ್ಲಿ ಲುಮಾ ಸ್ಟೀಲರ್ ಎಂಬ ಮಾಲ್ ವೇರ್‌ಅನ್ನು ಬಳಕೆದಾರರ ಫೋನ್ ಗಳು ಅಥವಾ ಲ್ಯಾಪ್‌ಟಾಪ್‌ಗಳಲ್ಲಿ ಹರಡಲಾಗುತ್ತಿದೆ. ಸೈಬರ್ ಅಪರಾಧಿಗಳು ಯಾವುದೇ ಜನಪ್ರಿಯ ವೆಬ್‌ಸೈಟ್‌ನ ನಕಲಿ ವೆಬ್‌ಸೈಟ್‌ಅನ್ನು ರೂಪಿಸಿ, ಬ್ರೌಸರ್ ಅಧಿಸೂಚನೆಗಳನ್ನು ಆನ್ ಮಾಡಲು ಪರದೆಯ ಮೇಲೆ ಪ್ರಾಂಪ್ಟ್‌ಅನ್ನು ಪ್ರದರ್ಶಿಸುತ್ತಾರೆ.

ಸೈಬರ್ ಅಪರಾಧಿಗಳು ಈಗ ಅಂತಹ ಕ್ಯಾಪ್ಚಾ ಕೋಡ್‌ಗಳ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಮೂಲ ಕೋಡ್ಗಳ ಬದಲಿಗೆ ನಕಲಿ ಕ್ಯಾಪ್ಚಾ ಕೋಡ್ ಗಳನ್ನು ಸೇರಿಸುವ ಮೂಲಕ ಮಾಲ್ ವೇರ್ ಅಂದರೆ ವೈರಸ್‌ಗಳನ್ನು ಬಳಕೆದಾರರ ಮೊಬೈಲ್ ಫೋನ್‌ಗಳು ಅಥವಾ ಕಂಪ್ಯೂಟರ್‌ಗಳಿಗೆ ಕಳುಹಿಸುತ್ತಿದ್ದಾರೆ. ಈ ವೈರಸ್‌ಗಳು ಬಳಕೆದಾರರ ಸಾಧನವನ್ನು ಪ್ರವೇಶಿಸಿ ಅವರ ಮಾಹಿತಿಯನ್ನು ಕಳ್ಳತನ ಮಾಡುತ್ತವೆ. ಇದು ಸೈಬರ್ ಅಪರಾಧಿಗಳು ವಂಚನೆ ಮಾಡಲು ಕಂಡುಕೊಂಡಿರುವ ಹೊಸ ವಿಧಾನವಾಗಿದೆ. ಬಳಕೆದಾರರು ಈ ಬಗ್ಗೆ ಎಚ್ಚರಿಕೆವಹಿಸಬೇಕು.

ಆಂದೋಲನ ಡೆಸ್ಕ್

Recent Posts

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

2 mins ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

21 mins ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

36 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

47 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

1 hour ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

1 hour ago