ಸೈಬರ್ ಅಪರಾಧ ಪ್ರಕರಣಗಳು ದಿನೇದಿನೆ ಹೆಚ್ಚುತ್ತಲೇ ಇವೆ. ಜನರು ಎಷ್ಟೇ ಜಾಗ್ರತೆವಹಿಸಿದ್ದರೂ ಸೈಬರ್ ಅಪರಾಧಿಗಳು ಜನರನ್ನು ವಂಚಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಲೇ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ಕ್ಯಾಪ್ಚಾ ಕೋಡ್ ಹೆಸರಿನಲ್ಲಿ ದೊಡ್ಡ ವಂಚನೆ ನಡೆಯುತ್ತಿದೆ.

ಗೂಗಲ್‌ನಲ್ಲಿ ಏನನ್ನಾದರೂ ಹುಡುಕುವಾಗ ಕ್ಯಾಪ್ಚಾ ಕೋಡ್‌ಅನ್ನು ಪರಿಶೀಲಿಸಲು ನೀವು ಅನೇಕ ಬಾರಿ ಪ್ರಾಪ್ಟ್‌ಅನ್ನು ನೋಡಿರಬೇಕು. ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ‘ ನಾನು ರೋಬೋಟ್ ಅಲ್ಲ’ ಎಂಬ ಆಯ್ಕೆ ಸಿಗುತ್ತದೆ. ಅದನ್ನು ಟಿಕ್ ಮಾಡಿದ ನಂತರ ನೀವು ಮುಂದುವರಿಯಲು ಸಾಧ್ಯವಾಗುತ್ತದೆ. ವಾಸ್ತವವಾಗಿ ಯಾವುದೇ ರೋಬೋಟ್ ಅದನ್ನು ದುರುಪಯೋಗಪಡಿಸಿಕೊಳ್ಳದಂತೆ ಪರಿಶೀಲಿಸಲು ಸರ್ಚ್ ಇಂಜಿನ್‌ಗಳು ಈ ರೀತಿಯ ಕ್ಯಾಪ್ಚಾ ಕೋಡ್ ಹಾಕುತ್ತವೆ. ನಕಲಿ ವೆಬ್‌ಸೈಟ್ ಗಳು ಮತ್ತು ಕ್ಯಾಪ್ಚಾ ಕೋಡ್‌ಗಳ ಮೂಲಕ ಹೊಸ ರೀತಿಯ ವಂಚನೆ ಮಾಡಲಾಗುತ್ತಿದೆ. ಈ ವಂಚನೆಯಲ್ಲಿ ಲುಮಾ ಸ್ಟೀಲರ್ ಎಂಬ ಮಾಲ್ ವೇರ್‌ಅನ್ನು ಬಳಕೆದಾರರ ಫೋನ್ ಗಳು ಅಥವಾ ಲ್ಯಾಪ್‌ಟಾಪ್‌ಗಳಲ್ಲಿ ಹರಡಲಾಗುತ್ತಿದೆ. ಸೈಬರ್ ಅಪರಾಧಿಗಳು ಯಾವುದೇ ಜನಪ್ರಿಯ ವೆಬ್‌ಸೈಟ್‌ನ ನಕಲಿ ವೆಬ್‌ಸೈಟ್‌ಅನ್ನು ರೂಪಿಸಿ, ಬ್ರೌಸರ್ ಅಧಿಸೂಚನೆಗಳನ್ನು ಆನ್ ಮಾಡಲು ಪರದೆಯ ಮೇಲೆ ಪ್ರಾಂಪ್ಟ್‌ಅನ್ನು ಪ್ರದರ್ಶಿಸುತ್ತಾರೆ.

ಸೈಬರ್ ಅಪರಾಧಿಗಳು ಈಗ ಅಂತಹ ಕ್ಯಾಪ್ಚಾ ಕೋಡ್‌ಗಳ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಮೂಲ ಕೋಡ್ಗಳ ಬದಲಿಗೆ ನಕಲಿ ಕ್ಯಾಪ್ಚಾ ಕೋಡ್ ಗಳನ್ನು ಸೇರಿಸುವ ಮೂಲಕ ಮಾಲ್ ವೇರ್ ಅಂದರೆ ವೈರಸ್‌ಗಳನ್ನು ಬಳಕೆದಾರರ ಮೊಬೈಲ್ ಫೋನ್‌ಗಳು ಅಥವಾ ಕಂಪ್ಯೂಟರ್‌ಗಳಿಗೆ ಕಳುಹಿಸುತ್ತಿದ್ದಾರೆ. ಈ ವೈರಸ್‌ಗಳು ಬಳಕೆದಾರರ ಸಾಧನವನ್ನು ಪ್ರವೇಶಿಸಿ ಅವರ ಮಾಹಿತಿಯನ್ನು ಕಳ್ಳತನ ಮಾಡುತ್ತವೆ. ಇದು ಸೈಬರ್ ಅಪರಾಧಿಗಳು ವಂಚನೆ ಮಾಡಲು ಕಂಡುಕೊಂಡಿರುವ ಹೊಸ ವಿಧಾನವಾಗಿದೆ. ಬಳಕೆದಾರರು ಈ ಬಗ್ಗೆ ಎಚ್ಚರಿಕೆವಹಿಸಬೇಕು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

2 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

3 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

3 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

4 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

4 hours ago