ಸೈಬರ್ ಅಪರಾಧ ಪ್ರಕರಣಗಳು ದಿನೇದಿನೆ ಹೆಚ್ಚುತ್ತಲೇ ಇವೆ. ಜನರು ಎಷ್ಟೇ ಜಾಗ್ರತೆವಹಿಸಿದ್ದರೂ ಸೈಬರ್ ಅಪರಾಧಿಗಳು ಜನರನ್ನು ವಂಚಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಲೇ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ಕ್ಯಾಪ್ಚಾ ಕೋಡ್ ಹೆಸರಿನಲ್ಲಿ ದೊಡ್ಡ ವಂಚನೆ ನಡೆಯುತ್ತಿದೆ.

ಗೂಗಲ್‌ನಲ್ಲಿ ಏನನ್ನಾದರೂ ಹುಡುಕುವಾಗ ಕ್ಯಾಪ್ಚಾ ಕೋಡ್‌ಅನ್ನು ಪರಿಶೀಲಿಸಲು ನೀವು ಅನೇಕ ಬಾರಿ ಪ್ರಾಪ್ಟ್‌ಅನ್ನು ನೋಡಿರಬೇಕು. ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ‘ ನಾನು ರೋಬೋಟ್ ಅಲ್ಲ’ ಎಂಬ ಆಯ್ಕೆ ಸಿಗುತ್ತದೆ. ಅದನ್ನು ಟಿಕ್ ಮಾಡಿದ ನಂತರ ನೀವು ಮುಂದುವರಿಯಲು ಸಾಧ್ಯವಾಗುತ್ತದೆ. ವಾಸ್ತವವಾಗಿ ಯಾವುದೇ ರೋಬೋಟ್ ಅದನ್ನು ದುರುಪಯೋಗಪಡಿಸಿಕೊಳ್ಳದಂತೆ ಪರಿಶೀಲಿಸಲು ಸರ್ಚ್ ಇಂಜಿನ್‌ಗಳು ಈ ರೀತಿಯ ಕ್ಯಾಪ್ಚಾ ಕೋಡ್ ಹಾಕುತ್ತವೆ. ನಕಲಿ ವೆಬ್‌ಸೈಟ್ ಗಳು ಮತ್ತು ಕ್ಯಾಪ್ಚಾ ಕೋಡ್‌ಗಳ ಮೂಲಕ ಹೊಸ ರೀತಿಯ ವಂಚನೆ ಮಾಡಲಾಗುತ್ತಿದೆ. ಈ ವಂಚನೆಯಲ್ಲಿ ಲುಮಾ ಸ್ಟೀಲರ್ ಎಂಬ ಮಾಲ್ ವೇರ್‌ಅನ್ನು ಬಳಕೆದಾರರ ಫೋನ್ ಗಳು ಅಥವಾ ಲ್ಯಾಪ್‌ಟಾಪ್‌ಗಳಲ್ಲಿ ಹರಡಲಾಗುತ್ತಿದೆ. ಸೈಬರ್ ಅಪರಾಧಿಗಳು ಯಾವುದೇ ಜನಪ್ರಿಯ ವೆಬ್‌ಸೈಟ್‌ನ ನಕಲಿ ವೆಬ್‌ಸೈಟ್‌ಅನ್ನು ರೂಪಿಸಿ, ಬ್ರೌಸರ್ ಅಧಿಸೂಚನೆಗಳನ್ನು ಆನ್ ಮಾಡಲು ಪರದೆಯ ಮೇಲೆ ಪ್ರಾಂಪ್ಟ್‌ಅನ್ನು ಪ್ರದರ್ಶಿಸುತ್ತಾರೆ.

ಸೈಬರ್ ಅಪರಾಧಿಗಳು ಈಗ ಅಂತಹ ಕ್ಯಾಪ್ಚಾ ಕೋಡ್‌ಗಳ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಮೂಲ ಕೋಡ್ಗಳ ಬದಲಿಗೆ ನಕಲಿ ಕ್ಯಾಪ್ಚಾ ಕೋಡ್ ಗಳನ್ನು ಸೇರಿಸುವ ಮೂಲಕ ಮಾಲ್ ವೇರ್ ಅಂದರೆ ವೈರಸ್‌ಗಳನ್ನು ಬಳಕೆದಾರರ ಮೊಬೈಲ್ ಫೋನ್‌ಗಳು ಅಥವಾ ಕಂಪ್ಯೂಟರ್‌ಗಳಿಗೆ ಕಳುಹಿಸುತ್ತಿದ್ದಾರೆ. ಈ ವೈರಸ್‌ಗಳು ಬಳಕೆದಾರರ ಸಾಧನವನ್ನು ಪ್ರವೇಶಿಸಿ ಅವರ ಮಾಹಿತಿಯನ್ನು ಕಳ್ಳತನ ಮಾಡುತ್ತವೆ. ಇದು ಸೈಬರ್ ಅಪರಾಧಿಗಳು ವಂಚನೆ ಮಾಡಲು ಕಂಡುಕೊಂಡಿರುವ ಹೊಸ ವಿಧಾನವಾಗಿದೆ. ಬಳಕೆದಾರರು ಈ ಬಗ್ಗೆ ಎಚ್ಚರಿಕೆವಹಿಸಬೇಕು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago