ಸೈಬರ್ ಅಪರಾಧ ಪ್ರಕರಣಗಳು ದಿನೇದಿನೆ ಹೆಚ್ಚುತ್ತಲೇ ಇವೆ. ಜನರು ಎಷ್ಟೇ ಜಾಗ್ರತೆವಹಿಸಿದ್ದರೂ ಸೈಬರ್ ಅಪರಾಧಿಗಳು ಜನರನ್ನು ವಂಚಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಲೇ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ಕ್ಯಾಪ್ಚಾ ಕೋಡ್ ಹೆಸರಿನಲ್ಲಿ ದೊಡ್ಡ ವಂಚನೆ ನಡೆಯುತ್ತಿದೆ.

ಗೂಗಲ್‌ನಲ್ಲಿ ಏನನ್ನಾದರೂ ಹುಡುಕುವಾಗ ಕ್ಯಾಪ್ಚಾ ಕೋಡ್‌ಅನ್ನು ಪರಿಶೀಲಿಸಲು ನೀವು ಅನೇಕ ಬಾರಿ ಪ್ರಾಪ್ಟ್‌ಅನ್ನು ನೋಡಿರಬೇಕು. ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ‘ ನಾನು ರೋಬೋಟ್ ಅಲ್ಲ’ ಎಂಬ ಆಯ್ಕೆ ಸಿಗುತ್ತದೆ. ಅದನ್ನು ಟಿಕ್ ಮಾಡಿದ ನಂತರ ನೀವು ಮುಂದುವರಿಯಲು ಸಾಧ್ಯವಾಗುತ್ತದೆ. ವಾಸ್ತವವಾಗಿ ಯಾವುದೇ ರೋಬೋಟ್ ಅದನ್ನು ದುರುಪಯೋಗಪಡಿಸಿಕೊಳ್ಳದಂತೆ ಪರಿಶೀಲಿಸಲು ಸರ್ಚ್ ಇಂಜಿನ್‌ಗಳು ಈ ರೀತಿಯ ಕ್ಯಾಪ್ಚಾ ಕೋಡ್ ಹಾಕುತ್ತವೆ. ನಕಲಿ ವೆಬ್‌ಸೈಟ್ ಗಳು ಮತ್ತು ಕ್ಯಾಪ್ಚಾ ಕೋಡ್‌ಗಳ ಮೂಲಕ ಹೊಸ ರೀತಿಯ ವಂಚನೆ ಮಾಡಲಾಗುತ್ತಿದೆ. ಈ ವಂಚನೆಯಲ್ಲಿ ಲುಮಾ ಸ್ಟೀಲರ್ ಎಂಬ ಮಾಲ್ ವೇರ್‌ಅನ್ನು ಬಳಕೆದಾರರ ಫೋನ್ ಗಳು ಅಥವಾ ಲ್ಯಾಪ್‌ಟಾಪ್‌ಗಳಲ್ಲಿ ಹರಡಲಾಗುತ್ತಿದೆ. ಸೈಬರ್ ಅಪರಾಧಿಗಳು ಯಾವುದೇ ಜನಪ್ರಿಯ ವೆಬ್‌ಸೈಟ್‌ನ ನಕಲಿ ವೆಬ್‌ಸೈಟ್‌ಅನ್ನು ರೂಪಿಸಿ, ಬ್ರೌಸರ್ ಅಧಿಸೂಚನೆಗಳನ್ನು ಆನ್ ಮಾಡಲು ಪರದೆಯ ಮೇಲೆ ಪ್ರಾಂಪ್ಟ್‌ಅನ್ನು ಪ್ರದರ್ಶಿಸುತ್ತಾರೆ.

ಸೈಬರ್ ಅಪರಾಧಿಗಳು ಈಗ ಅಂತಹ ಕ್ಯಾಪ್ಚಾ ಕೋಡ್‌ಗಳ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಮೂಲ ಕೋಡ್ಗಳ ಬದಲಿಗೆ ನಕಲಿ ಕ್ಯಾಪ್ಚಾ ಕೋಡ್ ಗಳನ್ನು ಸೇರಿಸುವ ಮೂಲಕ ಮಾಲ್ ವೇರ್ ಅಂದರೆ ವೈರಸ್‌ಗಳನ್ನು ಬಳಕೆದಾರರ ಮೊಬೈಲ್ ಫೋನ್‌ಗಳು ಅಥವಾ ಕಂಪ್ಯೂಟರ್‌ಗಳಿಗೆ ಕಳುಹಿಸುತ್ತಿದ್ದಾರೆ. ಈ ವೈರಸ್‌ಗಳು ಬಳಕೆದಾರರ ಸಾಧನವನ್ನು ಪ್ರವೇಶಿಸಿ ಅವರ ಮಾಹಿತಿಯನ್ನು ಕಳ್ಳತನ ಮಾಡುತ್ತವೆ. ಇದು ಸೈಬರ್ ಅಪರಾಧಿಗಳು ವಂಚನೆ ಮಾಡಲು ಕಂಡುಕೊಂಡಿರುವ ಹೊಸ ವಿಧಾನವಾಗಿದೆ. ಬಳಕೆದಾರರು ಈ ಬಗ್ಗೆ ಎಚ್ಚರಿಕೆವಹಿಸಬೇಕು.

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

4 mins ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

8 mins ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

13 mins ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

17 mins ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

22 mins ago