ಟೆಕ್‌ ಸಮಾಚಾರ

ತನ್ನ ವಿಶಿಷ್ಟವಾದ ಸ್ಮಾರ್ಟ್ ಫೋನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ಸ್ಮಾರ್ಟ್ ಫೋನ್ ಕಂಪೆನಿ ಒಪ್ಪೊ, ಭಾರತೀಯ ವಿವಿಧ ಹವಾಮಾನ ವೈವಿಧ್ಯಕ್ಕೆ ಹೊಂದಿಕೊಳ್ಳುವಂತೆ ವಿನೂತನ ವೈಶಿಷ್ಟ ಗಳೊಂದಿಗೆ ರೂಪಿಸಿರುವ ಒಪ್ಪೊ ಎಫ್ 29 ಸರಣಿಯ ಫೋನ್‌ಗಳನ್ನು ಬಿಡುಗಡೆ ಮಾಡಿದೆ.

ಈ ಸರಣಿಯ ಒಪ್ಪೊ ಎಫ್29 ಮತ್ತು ಎಫ್29 ಪ್ರೋ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ತೆಳುವಾದ ಆಕರ್ಷಕ ವಿನ್ಯಾಸ ಹಾಗೂ ಅತ್ಯಾಧುನಿಕ ಸಂಪರ್ಕತೆ ಮತ್ತು ದೀರ್ಘ ಬ್ಯಾಟರಿ ಬಾಳಿಕ ಹೊಂದಿರುವ ಫೋನ್ ಇದಾಗಿದೆ.

ಈ ಫೋನ್‌ಅನ್ನು ಭಾರತೀಯ ವಿವಿಧ ಹವಾಮಾನಗಳಾದ ಮಳೆ, ಚಳಿ, ದೂಳು, ತಾಪಮಾನಕ್ಕೆ ಹೊಂದಿಕೊಳ್ಳುವಂತೆ ರೂಪಿಸಲಾಗಿದ್ದು, ದೂಳು, ಮಳೆ,
ನೀರಿನೊಳಗೆ ಮುಳುಗುವ ಸಂದರ್ಭಗಳಲ್ಲಿ ಫೋನ್‌ಗೆ ರಕ್ಷಣೆ ಇರುತ್ತದೆ. ಸ್ಟಾಂಜ್ ಬಯೋನಿಕ್ ಕುಶನಿಂಗ್ ಮತ್ತು ಫೈಬರ್ ಗ್ಲಾಸ್ ಕವರ್ ಹಾಗೂ ಕ್ಯಾಮೆರಾ ಲೆನ್ಸ್ ರಕ್ಷಣಾತ್ಮಕ ರಿಂಗ್ ಇದರಲ್ಲಿದೆ.

ಒಪ್ಪೊ ಎಫ್20 ಪ್ರೋನಲ್ಲಿ 6000 ಎಂಎಎಚ್ ಬ್ಯಾಟರಿ ಸಾಮರ್ಥ್ಯದೊಂದಿಗೆ 80 ಡಬ್ಲ್ಯೂ ಸೂಪರ್‌ವೊಕ್ ವೇಗದ ಚಾರ್ಜಿಂಗ್ ವ್ಯವಸ್ಥೆಯಿದ್ದರೆ, ಒಪ್ಪೊ ಎಫ್29 ಸಾಧನದಲ್ಲಿ 6500 ಎಂಎಎಚ್ ಬ್ಯಾಟರಿ ಸಾಮರ್ಥ್ಯವಿದೆ. ಈ ಎರಡರಲ್ಲೂ ಕರೆಯ ಧ್ವನಿ ಸ್ಪಷ್ಟವಾಗಿ ಕೇಳಿಸುವಂತೆ ಮಾಡಲು ಅಲ್ಟ್ರಾ ವಾಲ್ಯೂಮ್ ಮೋಡ್ ಇದೆ.

  • ಒಪ್ಪೊ ಎಫ್ 29 ಸರಣಿಯ ಫೋನ್‌ಗಳು 50ಎಂಪಿ ಪ್ರಧಾನ ಕ್ಯಾಮೆರಾ ಹಾಗೂ 2 ಎಂಪಿ ಡೆಪ್ತ್ ಕ್ಯಾಮೆರಾ ಹಾಗೂ 16ಎಂಪಿ ಸೆಲ್ಛಿ ಕ್ಯಾಮೆರಾದ ಜತೆಗೆ ಎಐ ಆಧಾರಿತ ಕ್ಯಾಮೆರಾ ಫೀಚರ್‌ಗಳನ್ನು ಹೊಂದಿದೆ.
  • ಒಪ್ಪೊ ಎಫ್29 ಪ್ರೊ ಏಪ್ರಿಲ್ 1ರಿಂದ ಲಭ್ಯವಾಗಲಿದ್ದು, 8ಜಿಬಿ+128ಜಿಬಿ ಫೋನ್‌ಗೆ 27,999 ರೂ. 8ಜಿಬಿ+256ಜಿಬಿ ಫೋನ್‌ಗೆ 29,999 ರೂ. ಹಾಗೂ 12ಜಿಬಿ+256 ಜಿಬಿ ಫೋನ್‌ಗೆ 31,999 ರೂ.ಗಳಿವೆ.
  • ಒಪ್ಪೊ ಎಫ್‌29 ಮಾರ್ಚ್‌ 27 ರಿಂದ ಲಭ್ಯವಿದ್ದು, 8 ಜಿಬಿ+128ಜಿಬಿ ಫೋನ್‌ಗೆ 23,999 ರೂ., 8ಜಿಬಿ+256ಜಿಬಿ ಫೋನ್‌ಗೆ 25,999 ರೂ.ಗಳಿಗೆ ಲಭ್ಯವಿದೆ.

 

ಆಂದೋಲನ ಡೆಸ್ಕ್

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

25 mins ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

53 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

1 hour ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

1 hour ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

3 hours ago