ಟೆಕ್‌ ಸಮಾಚಾರ

ತನ್ನ ವಿಶಿಷ್ಟವಾದ ಸ್ಮಾರ್ಟ್ ಫೋನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ಸ್ಮಾರ್ಟ್ ಫೋನ್ ಕಂಪೆನಿ ಒಪ್ಪೊ, ಭಾರತೀಯ ವಿವಿಧ ಹವಾಮಾನ ವೈವಿಧ್ಯಕ್ಕೆ ಹೊಂದಿಕೊಳ್ಳುವಂತೆ ವಿನೂತನ ವೈಶಿಷ್ಟ ಗಳೊಂದಿಗೆ ರೂಪಿಸಿರುವ ಒಪ್ಪೊ ಎಫ್ 29 ಸರಣಿಯ ಫೋನ್‌ಗಳನ್ನು ಬಿಡುಗಡೆ ಮಾಡಿದೆ.

ಈ ಸರಣಿಯ ಒಪ್ಪೊ ಎಫ್29 ಮತ್ತು ಎಫ್29 ಪ್ರೋ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ತೆಳುವಾದ ಆಕರ್ಷಕ ವಿನ್ಯಾಸ ಹಾಗೂ ಅತ್ಯಾಧುನಿಕ ಸಂಪರ್ಕತೆ ಮತ್ತು ದೀರ್ಘ ಬ್ಯಾಟರಿ ಬಾಳಿಕ ಹೊಂದಿರುವ ಫೋನ್ ಇದಾಗಿದೆ.

ಈ ಫೋನ್‌ಅನ್ನು ಭಾರತೀಯ ವಿವಿಧ ಹವಾಮಾನಗಳಾದ ಮಳೆ, ಚಳಿ, ದೂಳು, ತಾಪಮಾನಕ್ಕೆ ಹೊಂದಿಕೊಳ್ಳುವಂತೆ ರೂಪಿಸಲಾಗಿದ್ದು, ದೂಳು, ಮಳೆ,
ನೀರಿನೊಳಗೆ ಮುಳುಗುವ ಸಂದರ್ಭಗಳಲ್ಲಿ ಫೋನ್‌ಗೆ ರಕ್ಷಣೆ ಇರುತ್ತದೆ. ಸ್ಟಾಂಜ್ ಬಯೋನಿಕ್ ಕುಶನಿಂಗ್ ಮತ್ತು ಫೈಬರ್ ಗ್ಲಾಸ್ ಕವರ್ ಹಾಗೂ ಕ್ಯಾಮೆರಾ ಲೆನ್ಸ್ ರಕ್ಷಣಾತ್ಮಕ ರಿಂಗ್ ಇದರಲ್ಲಿದೆ.

ಒಪ್ಪೊ ಎಫ್20 ಪ್ರೋನಲ್ಲಿ 6000 ಎಂಎಎಚ್ ಬ್ಯಾಟರಿ ಸಾಮರ್ಥ್ಯದೊಂದಿಗೆ 80 ಡಬ್ಲ್ಯೂ ಸೂಪರ್‌ವೊಕ್ ವೇಗದ ಚಾರ್ಜಿಂಗ್ ವ್ಯವಸ್ಥೆಯಿದ್ದರೆ, ಒಪ್ಪೊ ಎಫ್29 ಸಾಧನದಲ್ಲಿ 6500 ಎಂಎಎಚ್ ಬ್ಯಾಟರಿ ಸಾಮರ್ಥ್ಯವಿದೆ. ಈ ಎರಡರಲ್ಲೂ ಕರೆಯ ಧ್ವನಿ ಸ್ಪಷ್ಟವಾಗಿ ಕೇಳಿಸುವಂತೆ ಮಾಡಲು ಅಲ್ಟ್ರಾ ವಾಲ್ಯೂಮ್ ಮೋಡ್ ಇದೆ.

  • ಒಪ್ಪೊ ಎಫ್ 29 ಸರಣಿಯ ಫೋನ್‌ಗಳು 50ಎಂಪಿ ಪ್ರಧಾನ ಕ್ಯಾಮೆರಾ ಹಾಗೂ 2 ಎಂಪಿ ಡೆಪ್ತ್ ಕ್ಯಾಮೆರಾ ಹಾಗೂ 16ಎಂಪಿ ಸೆಲ್ಛಿ ಕ್ಯಾಮೆರಾದ ಜತೆಗೆ ಎಐ ಆಧಾರಿತ ಕ್ಯಾಮೆರಾ ಫೀಚರ್‌ಗಳನ್ನು ಹೊಂದಿದೆ.
  • ಒಪ್ಪೊ ಎಫ್29 ಪ್ರೊ ಏಪ್ರಿಲ್ 1ರಿಂದ ಲಭ್ಯವಾಗಲಿದ್ದು, 8ಜಿಬಿ+128ಜಿಬಿ ಫೋನ್‌ಗೆ 27,999 ರೂ. 8ಜಿಬಿ+256ಜಿಬಿ ಫೋನ್‌ಗೆ 29,999 ರೂ. ಹಾಗೂ 12ಜಿಬಿ+256 ಜಿಬಿ ಫೋನ್‌ಗೆ 31,999 ರೂ.ಗಳಿವೆ.
  • ಒಪ್ಪೊ ಎಫ್‌29 ಮಾರ್ಚ್‌ 27 ರಿಂದ ಲಭ್ಯವಿದ್ದು, 8 ಜಿಬಿ+128ಜಿಬಿ ಫೋನ್‌ಗೆ 23,999 ರೂ., 8ಜಿಬಿ+256ಜಿಬಿ ಫೋನ್‌ಗೆ 25,999 ರೂ.ಗಳಿಗೆ ಲಭ್ಯವಿದೆ.

 

ಆಂದೋಲನ ಡೆಸ್ಕ್

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

25 mins ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

49 mins ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

1 hour ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

2 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

5 hours ago