ಯುವ ಡಾಟ್ ಕಾಂ

ಗೇಟ್ ಪರೀಕ್ಷೆ ಒಂದು; ಅವಕಾಶಗಳು ಹಲವು

ಗೇಟ್ (GATE) ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಎಂ.ಟೆಕ್ ಪ್ರವೇಶ, PSU ಉದ್ಯೋಗಗಳು, ಸಂಶೋಧನಾ ಫೆಲೋಶಿಪ್‌ಗಳು ಮತ್ತು ಖಾಸಗಿ ಕಂಪೆನಿಗಳಲ್ಲಿ ಹಲವು ವೃತ್ತಿ ಆಯ್ಕೆಗಳಿವೆ. ಉನ್ನತ ಶಿಕ್ಷಣ, ಸರ್ಕಾರಿ ಉದ್ಯೋಗ ಅಥವಾ ಖಾಸಗಿ ವಲಯದಲ್ಲಿ ಯಶಸ್ವಿ ವೃತ್ತಿ ಜೀವನಕ್ಕೆ ಇದೊಂದು ಪ್ರಮುಖ ಹೆಜ್ಜೆಯಾಗಿದೆ.

ಫೆಲೋಶಿಪ್‌ಗಳು ಮತ್ತು ಉತ್ತಮ ಸಂಬಳದೊಂದಿಗೆ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಗೇಟ್ ಪರೀಕ್ಷೆ ಸಹಕಾರಿಯಾಗಲಿದೆ. ಗೇಟ್ ಪರೀಕ್ಷೆ ಉತ್ತೀರ್ಣರಾಗುತ್ತಿದ್ದಂತೆ ಹಲವು ವೃತ್ತಿ ಆಯ್ಕೆಗಳು ತೆರೆದು ಕೊಳ್ಳಲಿವೆ. ಗೇಟ್ ಪರೀಕ್ಷೆಯ ಅಂಕಗಳಿಂದ Ü IIT, NIT,IISc ಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾವಕಾಶ ದೊರೆ ಯಲಿದೆ. ಪ್ರವೇಶಾತಿಯ ಜೊತೆಗೆ ತಿಂಗಳಿಗೆ ೧೨,೪೦೦ ರೂ.ಗಳವರೆಗೆ ಫೆಲೋಶಿಪ್ ಕೂಡ ದೊರೆಯಲಿದೆ.

ವಿದ್ಯಾರ್ಥಿಗಳಿಗೆ ಈ ಕೋರ್ಸ್ ನಿರ್ದಿಷ್ಟ ತಾಂತ್ರಿಕ ಜ್ಞಾನ, ಉತ್ತಮ ರಚನೆ ಮತ್ತು ಮುಂದಿನ ಅಧ್ಯಯನ ಅಥವಾ ವೃತ್ತಿ ಜೀವನದಲ್ಲಿನ ಬೆಳವಣಿಗೆಗೆ ಕಾರಣವಾಗಲಿದೆ. ಅಲ್ಲದೇ ONGC, NTPC, BHEL, IOCL ಮುಂತಾದ ಹಲವು PSU ಉದ್ಯೋಗ ಗಿಟ್ಟಿಸಿಕೊಳ್ಳಬಹುದು. ಈ ಉದ್ಯೋಗಳು ಉತ್ತಮ ಸಂಬಳ, ಸರ್ಕಾರಿ ಸವಲತ್ತುಗಳು ಮತ್ತು ಪಿಂಚಣಿ ಸೌಲಭ್ಯಗಳನ್ನೂ ನೀಡುತ್ತವೆ.

ಸಂಶೋಧನೆ ಮಾಡಲು ಬಯಸಿದರೆ ಪಿಎಚ್.ಡಿ. ಮಾಡಲೂ ಉತ್ತಮ ಆಯ್ಕೆಗಳಿವೆ. ಕೆಲವು ಸಂಸ್ಥೆಗಳು ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಪಿಎಚ್.ಡಿ.ಗೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಹೀಗಾಗಿ ಗೇಟ್ ಪರೀಕ್ಷೆ ಕೇವಲ ಎಂ.ಟೆಕ್. ಪ್ರವೇಶಕ್ಕೆ ಮಾತ್ರ ಸೀಮಿತವಾಗದೆ, ಸಂಶೋಧನೆ, ಬೋಧನೆ, ಸರ್ಕಾರಿ ಉದ್ಯೋಗ ಅಥವಾ ಖಾಸಗಿ ವಲಯವನ್ನೂ ಆಯ್ಕೆ ಮಾಡಿಕೊಳ್ಳಲು ಬಹು ಅವಕಾಶಗಳನ್ನು ತೆರೆದಿಡಲಿದೆ. ಆದ್ದರಿಂದ ಗೇಟ್ ಪರೀಕ್ಷೆಯ ಬಹುಮುಖಿ ಅವಕಾಶವಾಗಿ ಕಂಡು ಮುಂದಿನ ಹಂತವನ್ನು ಜಾಣ್ಮೆಯಿಂದ ಆರಿಸಿಕೊಳ್ಳಿ.

ಆಂದೋಲನ ಡೆಸ್ಕ್

Recent Posts

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

3 mins ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

27 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

37 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

59 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

1 hour ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

2 hours ago