ಯುವ ಡಾಟ್ ಕಾಂ

ಗೇಟ್ ಪರೀಕ್ಷೆ ಒಂದು; ಅವಕಾಶಗಳು ಹಲವು

ಗೇಟ್ (GATE) ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಎಂ.ಟೆಕ್ ಪ್ರವೇಶ, PSU ಉದ್ಯೋಗಗಳು, ಸಂಶೋಧನಾ ಫೆಲೋಶಿಪ್‌ಗಳು ಮತ್ತು ಖಾಸಗಿ ಕಂಪೆನಿಗಳಲ್ಲಿ ಹಲವು ವೃತ್ತಿ ಆಯ್ಕೆಗಳಿವೆ. ಉನ್ನತ ಶಿಕ್ಷಣ, ಸರ್ಕಾರಿ ಉದ್ಯೋಗ ಅಥವಾ ಖಾಸಗಿ ವಲಯದಲ್ಲಿ ಯಶಸ್ವಿ ವೃತ್ತಿ ಜೀವನಕ್ಕೆ ಇದೊಂದು ಪ್ರಮುಖ ಹೆಜ್ಜೆಯಾಗಿದೆ.

ಫೆಲೋಶಿಪ್‌ಗಳು ಮತ್ತು ಉತ್ತಮ ಸಂಬಳದೊಂದಿಗೆ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಗೇಟ್ ಪರೀಕ್ಷೆ ಸಹಕಾರಿಯಾಗಲಿದೆ. ಗೇಟ್ ಪರೀಕ್ಷೆ ಉತ್ತೀರ್ಣರಾಗುತ್ತಿದ್ದಂತೆ ಹಲವು ವೃತ್ತಿ ಆಯ್ಕೆಗಳು ತೆರೆದು ಕೊಳ್ಳಲಿವೆ. ಗೇಟ್ ಪರೀಕ್ಷೆಯ ಅಂಕಗಳಿಂದ Ü IIT, NIT,IISc ಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾವಕಾಶ ದೊರೆ ಯಲಿದೆ. ಪ್ರವೇಶಾತಿಯ ಜೊತೆಗೆ ತಿಂಗಳಿಗೆ ೧೨,೪೦೦ ರೂ.ಗಳವರೆಗೆ ಫೆಲೋಶಿಪ್ ಕೂಡ ದೊರೆಯಲಿದೆ.

ವಿದ್ಯಾರ್ಥಿಗಳಿಗೆ ಈ ಕೋರ್ಸ್ ನಿರ್ದಿಷ್ಟ ತಾಂತ್ರಿಕ ಜ್ಞಾನ, ಉತ್ತಮ ರಚನೆ ಮತ್ತು ಮುಂದಿನ ಅಧ್ಯಯನ ಅಥವಾ ವೃತ್ತಿ ಜೀವನದಲ್ಲಿನ ಬೆಳವಣಿಗೆಗೆ ಕಾರಣವಾಗಲಿದೆ. ಅಲ್ಲದೇ ONGC, NTPC, BHEL, IOCL ಮುಂತಾದ ಹಲವು PSU ಉದ್ಯೋಗ ಗಿಟ್ಟಿಸಿಕೊಳ್ಳಬಹುದು. ಈ ಉದ್ಯೋಗಳು ಉತ್ತಮ ಸಂಬಳ, ಸರ್ಕಾರಿ ಸವಲತ್ತುಗಳು ಮತ್ತು ಪಿಂಚಣಿ ಸೌಲಭ್ಯಗಳನ್ನೂ ನೀಡುತ್ತವೆ.

ಸಂಶೋಧನೆ ಮಾಡಲು ಬಯಸಿದರೆ ಪಿಎಚ್.ಡಿ. ಮಾಡಲೂ ಉತ್ತಮ ಆಯ್ಕೆಗಳಿವೆ. ಕೆಲವು ಸಂಸ್ಥೆಗಳು ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಪಿಎಚ್.ಡಿ.ಗೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಹೀಗಾಗಿ ಗೇಟ್ ಪರೀಕ್ಷೆ ಕೇವಲ ಎಂ.ಟೆಕ್. ಪ್ರವೇಶಕ್ಕೆ ಮಾತ್ರ ಸೀಮಿತವಾಗದೆ, ಸಂಶೋಧನೆ, ಬೋಧನೆ, ಸರ್ಕಾರಿ ಉದ್ಯೋಗ ಅಥವಾ ಖಾಸಗಿ ವಲಯವನ್ನೂ ಆಯ್ಕೆ ಮಾಡಿಕೊಳ್ಳಲು ಬಹು ಅವಕಾಶಗಳನ್ನು ತೆರೆದಿಡಲಿದೆ. ಆದ್ದರಿಂದ ಗೇಟ್ ಪರೀಕ್ಷೆಯ ಬಹುಮುಖಿ ಅವಕಾಶವಾಗಿ ಕಂಡು ಮುಂದಿನ ಹಂತವನ್ನು ಜಾಣ್ಮೆಯಿಂದ ಆರಿಸಿಕೊಳ್ಳಿ.

ಆಂದೋಲನ ಡೆಸ್ಕ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

5 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

7 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

9 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

10 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

13 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

13 hours ago