ಯುವ ಡಾಟ್ ಕಾಂ

ಸಕಾರಾತ್ಮಕತೆ ಎಂಬ ಸಂಕಟ ಪರಿಹಾರ

ಡಾ.ನೀ.ಗೂ.ರಮೇಶ್

ಎಲ್ಲಿ ಹುಟ್ಟಬೇಕೆಂಬುದು ನಮ್ಮ ಕೈಯಲ್ಲಿರುವುದಿಲ್ಲ. ಆದರೆ, ಎಲ್ಲಿಗೆ ಮುಟ್ಟಬೇಕೆಂಬುದನ್ನು ನಾವೇ ನಿರ್ಧಾರ ಮಾಡಿಕೊಳ್ಳಬಹುದು. ಹಾಗಾಗಿ, ನಮ್ಮ ಈಗಿನ ಕೆಟ್ಟ ಸ್ಥಿತಿಯ ಬಗ್ಗೆ ಕೊರಗುವುದಕ್ಕಿಂತ, ಯಾರನ್ನೋ ದೂರುವುದಕ್ಕಿಂತ ಅವುಗಳ ವಿರುದ್ಧ ಯೋಜಿತವಾಗಿ ಹೋರಾಡಲು ಪ್ರಾರಂಭಿಸುವುದು ಸಮಸ್ಯೆಯಿಂದ ಹೊರಬರುವ ಜಾಣತನ. ಇಂತಹ ಸಂದರ್ಭಗಳಲ್ಲಿ ನಮ್ಮ ಬೆನ್ನೆಲುಬಾಗಿ ನಿಲ್ಲುವುದು ಸಕಾರಾತ್ಮಕ ಮನೋಭಾವನೆ ಮಾತ್ರ. ‘ಅದು ನನ್ನಿಂದ ಸಾಧ್ಯವಾಗುತ್ತದೆ’ ಎಂದುಕೊಳ್ಳುವುದೂ ಒಂದು ಅಮೃತ ಘಳಿಗೆ! ಆದರೆ, ಇತ್ತೀಚೆಗೆ ಇಡೀ ಯುವ ಸಮೂಹ ನಕಾರಾತ್ಮಕ ಆಲೋಚನೆಯ ಕಡೆಗೆ ಚಲಿಸುತ್ತಿರುವುದೇ ಹೆಚ್ಚು. ನಕಾರಾತ್ಮಕ ಮನೋಭಾವನೆ ಎಲ್ಲೆಡೆ ಸಾಂಕ್ರಾಮಿಕ ವಾಗಿರುವಾಗ ಅದರಿಂದ ತಪ್ಪಿಸಿಕೊಳ್ಳುವುದು ಅಷ್ಟು ಸುಲಭವಲ್ಲ.

ಯಾವುದನ್ನು ಬೇಡ ಎನ್ನುತ್ತೇವೆಯೋ ಮನಸ್ಸು ಅದರ ಕಡೆಗೆ ಹೆಚ್ಚಾಗಿ ವಾಲುತ್ತದೆ. ಹತ್ತು ನಿಮಿಷ ಮೊಬೈಲ್ ಬಗ್ಗೆ ಯೋಚಿಸದಂತೆ ಕಣ್ಮುಚ್ಚಿ ಕುಳಿತುಕೊಳ್ಳಿ ಎಂದರೆ ಆ ಹತ್ತು ನಿಮಿಷ ಹಿಂದೆಂದಿಗಿಂತಲೂ ಹೆಚ್ಚಾಗಿ ಕಣ್ತುಂಬ ಮೊಬೈಲೇ ಕಾಣುತ್ತವೆ! ಇದು ಮನಸ್ಸಿನ ಚಾಂಚಲ್ಯದ ಸ್ಥಿತಿ. ಆಲಸ್ಯ, ಅಂಜಿಕೆ ಇವು ಎಂತಹ ಸಾಮರ್ಥ್ಯವಿದ್ದರೂ ನಮ್ಮನ್ನು ಪ್ರಪಾತಕ್ಕೆ ತಳ್ಳುತ್ತವೆ.

ಬಹುತೇಕರು ಗೆಲುವಿಗಿಂತ ಸೋಲಿನ ಬಗ್ಗೆ ಚಿಂತಿಸುವುದೇ ಹೆಚ್ಚು. ಒಂದು ಉದ್ಯೋಗ ನೇಮಕಾತಿಯ ಸಂದರ್ಭದಲ್ಲಿ ಎಷ್ಟೋ ಬಾರಿ ೧೦೦ ಹುದ್ದೆಗಳಿಗೆ ಲಕ್ಷಗಟ್ಟಲೆ ಅರ್ಜಿಗಳು ಬಂದಿರುತ್ತವೆ. ನಕಾರಾತ್ಮಕ ವ್ಯಕ್ತಿಗಳು ಈ ಸಂಖ್ಯೆಯಿಂದಲೇ ಕುಗ್ಗಿ ಹೋಗುತ್ತಾರೆ. ಸ್ಪರ್ಧೆಯಿಂದ ಹಿಂದೆ ಸರಿಯುತ್ತಾರೆ. ಆದರೆ, ನೆನಪಿರಲಿ ಅರ್ಜಿ ಎಷ್ಟಾದರೂ ಬಂದಿರಲಿ. ನನಗೆ ಬೇಕಾಗಿರುವುದು ಒಂದೇ ಹುದ್ದೆ ಎಂದುಕೊಳ್ಳುವುದು ಸಕಾರಾತ್ಮಕತೆಯ ಸಲ್ಲಕ್ಷಣ.

ಕಡೆಗೆ ಒಂದೇ ಹುದ್ದೆ ಇದ್ದರೂ ಅದು ನನಗೇ ಸಿಗಬೇಕು ಎಂದುಕೊಳ್ಳುವವನದು ಈ ಜಗತ್ತು. ಅವನೇ ನಿಜವಾದ ಮಹತ್ವಾಕಾಂಕ್ಷಿ! ಇಂತಹ ಸಕಾರಾತ್ಮಕ ಮನೋಭಾವನೆಯು ಒಬ್ಬ ಸಾಧಕನಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಬೇರೆಯವರು ನಮ್ಮ ಬಗ್ಗೆ ಆಡುವ ಮಾತುಗಳಲ್ಲಿ, ಒಳ್ಳೆಯ ಅಂಶವನ್ನು ಕಂಡುಕೊಳ್ಳುವುದು ಆ ಸಕಾರಾತ್ಮಕತೆಯ ಮುಖ್ಯಗುಣ. ಆಗಿರುವುದು, ಆಗುತ್ತಿರು ವುದು, ಆಗಲಿರುವುದು ಎಲ್ಲವೂ ಒಳ್ಳೆಯದಕ್ಕೆ ಎಂಬ ನಿರ್ಲಿಪ್ತ ಸ್ಥಿತಿ ಕೆಲವು ವೇಳೆ ಪೊಳ್ಳು ಮಾತಿನಂತೆ ಕಂಡರೂ ಹಲವು ಸಂದರ್ಭಗಳಲ್ಲಿ ನಮ್ಮನ್ನು ಸಂತೈಸುತ್ತದೆ.

ಆಕಸ್ಮಿಕವಾಗಿ ಏನೋ ಕೆಟ್ಟದ್ದು ಸಂಭವಿಸಿದಾಗ ‘ಸದ್ಯ ಇಷ್ಟಕ್ಕೇ ಮುಗಿಯಿತಲ್ಲ’ ಎಂಬಸಮಾಧಾನ ತುಂಬಾ ದೊಡ್ಡ ಅಪಾಯದಿಂದ ನಮ್ಮ ಮನಸ್ಸನ್ನು ಪಾರು ಮಾಡುತ್ತದೆ. ನಮ್ಮ ಬಳಿ ಎಲ್ಲವೂ ಇದ್ದು, ಸಕಾರಾತ್ಮಕ ಮನೋಭಾವನೆಯೊಂದು ಇಲ್ಲದಿದ್ದರೆ ಯಾವುದೂ ನಮ್ಮನ್ನು ಸಂತೋಷವಾಗಿಡಲಾರದು. ನಮ್ಮೊಳಗಿನ ಸಾವಿರ ಸಾಮರ್ಥ್ಯಗಳನ್ನು ಕ್ಷಣ ಮಾತ್ರದಲ್ಲಿ ಛಿದ್ರವಾಗಿಸುವ ಜಗತ್ತಿನ ಏಕೈಕ ದೌರ್ಬಲ್ಯವೆಂದರೆ ಅದು ನಕಾರಾತ್ಮಕತೆ ಮಾತ್ರ!

ಸಕಾರಾತ್ಮಕ ಮನೋಭಾವವೇ ನಾಯಕನ ಮೊದಲ ಗುಣ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇದು ಬಹಳ ಮುಖ್ಯವಾದ ಪಾತ್ರವಹಿಸುತ್ತದೆ. ನಾಯಕತ್ವ ಗುಣ ಹಣ ವ್ಯಯಿಸಿ ತರಬೇತಿ ಪಡೆಯುವುದರಿಂದ ಬರುವಂಥದ್ದಲ್ಲ. ಬಾಲ್ಯದಿಂದಲೇ ಮಕ್ಕಳಲ್ಲಿ ಉತ್ಸಾಹ ತುಂಬಿ ಹುರಿದುಂಬಿಸುವುದರಿಂದ ಮೈಗೂಡಿಕೊಳ್ಳುವ ಗುಣವಿದು. ಮಕ್ಕಳಿರಲಿ, ದೊಡ್ಡವರಿರಲಿ ಒಂದು ಗುಂಪಿನಲ್ಲಿದ್ದಾಗ ‘ಈ ಕೆಲಸ ಯಾರು ಮಾಡುತ್ತೀರಿ?’ ಎಂದಾಗ ಮೊದಲು ಅವಕಾಶ ತೆಗೆದುಕೊಂಡು ಆ ನಂತರ ಯೋಚಿಸುವವನೇ ನಿಜವಾದ ನಾಯಕ. ಸೀಮಿತ ಅವಕಾಶಗಳಿದ್ದಾಗ ನಾವು ಹಿಂದೆ ಸರಿದು, ಯೋಚಿಸಿ ನಿರ್ಧರಿಸುವ ವೇಳೆಗೆ ಆ ಅವಕಾಶ ಬೇರೆಯವರ ಪಾಲಾಗಬಹುದು.

ದುರಂತವೆಂದರೆ ನಾವು ಯೋಗ್ಯತೆ ಇದ್ದೂ ಅವಕಾಶ ತೆಗೆದುಕೊಳ್ಳದಿದ್ದರೆ ಯಾರೋ ಬೇರೆಯವರು ನಮ್ಮ ಗುಂಪಿನ ನಾಯಕರಾಗಿ, ನಾವು ಅವರ ಅಧೀನರಾಗಿ ಇರಬೇಕಾಗಬಹುದು!

ಆಂದೋಲನ ಡೆಸ್ಕ್

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

7 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

10 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

10 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

10 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

11 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

11 hours ago