ಯುವ ಡಾಟ್ ಕಾಂ

ಭಾರತೀಯ ರೈಲ್ವೆಯಿಂದ  ‘ರೈಲ್ ಒನ್’ ಅಪ್ಲಿಕೇಶನ್

ರೈಲು ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಭಾರತೀಯ ರೈಲ್ವೆ ‘ರೈಲ್ ಒನ್’ (Rail One) ಎನ್ನುವ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಸೆಂಟರ್ ಫಾರ್ ರೈಲ್ವೆ ಇನಾರ್ಮೇಶನ್ ಸಿಸ್ಟಂನ ೪೦ನೇ ಸಂಸ್ಥಾಪನಾ ದಿನವಾದ ಜುಲೈ ೧ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ ಒನ್ ಆಪ್ ಬಿಡುಗಡೆ ಮಾಡಿದ್ದಾರೆ. ಈ ರೈಲ್ ಒನ್ ಆಪ್ ಆಂಡ್ರಾಯ್ಡ್ ಮತ್ತು ಆಪಲ್ ಪ್ಲಾಟ್ಫಾರ್ಮ್ ಎರಡರಲ್ಲೂ ಲಭ್ಯವಾಗಲಿದೆ. ರೈಲ್ವೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಪಡೆಯಲು ಹಾಗೂ ಪ್ರಯಾ ಣಿಕರಿಗೆ ಅಗತ್ಯ ವಾಗಿರುವ ಯಾವುದೇ ಸೇವೆಯನ್ನು ಪಡೆಯಲು ಈ ಹೊಸ ಆಪ್ ಉಪಯುಕ್ತ ವಾಗಲಿದೆ. ಐಆರ್ ಸಿಟಿಸಿ, ರೈಲ್ ಕನೆಕ್ಟ್, ಯುಟಿ ಸನ್ ಮೊಬೈಲ್, ರೈಲ್ ಮದದ್ ಇತ್ಯಾದಿ ವಿವಿಧ ಪೋರ್ಟಲ್‌ಗಳು ನೀಡುವ ಸೇವೆಗಳನ್ನು ರೈಲ್ ಒನ್ ಆಪ್ ಒಂದರಲ್ಲೇ ಪಡೆಯಬಹುದು.

ರೈಲ್ವೆ ಟಿಕೆಟ್ ಮುಂಗಡ ಕಾದಿರಿಸಲು ರೈಲ್ ಕನೆಕ್ಟ್, ರೈಲು ಪ್ರಯಾಣದ ಸಮಯದಲ್ಲಿ ಊಟ-ತಿಂಡಿ ಆರ್ಡರ್ ಮಾಡಲು ಐಆರ್‌ಸಿಟಿಸಿ, ಫೀಡ್‌ಬ್ಯಾಕ್ ನೀಡಲು ರೈಲ್ ಮದದ್, ರೈಲು ಟಿಕೆಟ್ ಖರೀದಿಸಲು ಯುಟಿ ಸನ್ ಮೊಬೈಲ್, ರೈಲುಗಳ ಪಿಎನ್‌ಆರ್ ಸ್ಟೇಟಸ್ ಗಮನಿಸಲು ನ್ಯಾಷನಲ್ ಟ್ರೈನ್ ಎನ್‌ಕ್ವೈಯರಿಯನ್ನು ಬಳಸಬಹುದು. ಇದೀಗ ಈ ಎಲ್ಲ ಸೇವೆಗಳೂ ರೈಲ್ ಒನ್ ಆಪ್‌ನಲ್ಲೇ ದೊರೆಯಲಿದೆ.

ಆಂದೋಲನ ಡೆಸ್ಕ್

Recent Posts

ಸಿಎಂ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ನಿರ್ಮಾಣಕ್ಕೆ ಮುಂದಾದ ಮೈಸೂರು ಜಿಲ್ಲಾಡಳಿತ

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ…

20 mins ago

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

1 hour ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

1 hour ago

ಓದುಗರ ಪತ್ರ: ಯುದ್ಧದ ಉನ್ಮಾದದಿಂದ ಹೊರಬರಲಿ

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…

2 hours ago

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

4 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

4 hours ago