‘Rail One’ App Launched by Indian Railways
ರೈಲು ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಭಾರತೀಯ ರೈಲ್ವೆ ‘ರೈಲ್ ಒನ್’ (Rail One) ಎನ್ನುವ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಸೆಂಟರ್ ಫಾರ್ ರೈಲ್ವೆ ಇನಾರ್ಮೇಶನ್ ಸಿಸ್ಟಂನ ೪೦ನೇ ಸಂಸ್ಥಾಪನಾ ದಿನವಾದ ಜುಲೈ ೧ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ ಒನ್ ಆಪ್ ಬಿಡುಗಡೆ ಮಾಡಿದ್ದಾರೆ. ಈ ರೈಲ್ ಒನ್ ಆಪ್ ಆಂಡ್ರಾಯ್ಡ್ ಮತ್ತು ಆಪಲ್ ಪ್ಲಾಟ್ಫಾರ್ಮ್ ಎರಡರಲ್ಲೂ ಲಭ್ಯವಾಗಲಿದೆ. ರೈಲ್ವೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಪಡೆಯಲು ಹಾಗೂ ಪ್ರಯಾ ಣಿಕರಿಗೆ ಅಗತ್ಯ ವಾಗಿರುವ ಯಾವುದೇ ಸೇವೆಯನ್ನು ಪಡೆಯಲು ಈ ಹೊಸ ಆಪ್ ಉಪಯುಕ್ತ ವಾಗಲಿದೆ. ಐಆರ್ ಸಿಟಿಸಿ, ರೈಲ್ ಕನೆಕ್ಟ್, ಯುಟಿ ಸನ್ ಮೊಬೈಲ್, ರೈಲ್ ಮದದ್ ಇತ್ಯಾದಿ ವಿವಿಧ ಪೋರ್ಟಲ್ಗಳು ನೀಡುವ ಸೇವೆಗಳನ್ನು ರೈಲ್ ಒನ್ ಆಪ್ ಒಂದರಲ್ಲೇ ಪಡೆಯಬಹುದು.
ರೈಲ್ವೆ ಟಿಕೆಟ್ ಮುಂಗಡ ಕಾದಿರಿಸಲು ರೈಲ್ ಕನೆಕ್ಟ್, ರೈಲು ಪ್ರಯಾಣದ ಸಮಯದಲ್ಲಿ ಊಟ-ತಿಂಡಿ ಆರ್ಡರ್ ಮಾಡಲು ಐಆರ್ಸಿಟಿಸಿ, ಫೀಡ್ಬ್ಯಾಕ್ ನೀಡಲು ರೈಲ್ ಮದದ್, ರೈಲು ಟಿಕೆಟ್ ಖರೀದಿಸಲು ಯುಟಿ ಸನ್ ಮೊಬೈಲ್, ರೈಲುಗಳ ಪಿಎನ್ಆರ್ ಸ್ಟೇಟಸ್ ಗಮನಿಸಲು ನ್ಯಾಷನಲ್ ಟ್ರೈನ್ ಎನ್ಕ್ವೈಯರಿಯನ್ನು ಬಳಸಬಹುದು. ಇದೀಗ ಈ ಎಲ್ಲ ಸೇವೆಗಳೂ ರೈಲ್ ಒನ್ ಆಪ್ನಲ್ಲೇ ದೊರೆಯಲಿದೆ.
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…
ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…