ಯುವ ಡಾಟ್ ಕಾಂ

ಬ್ಯಾಡ್ಮಿಂಟನ್‌ ತಾರೆ ಮಹದೇವಸ್ವಾಮಿ

ಗ್ರಾಮೀಣ ಭಾಗಗಳು ಎಂದರೆ ಅವು ಮೂಲಸೌಕರ್ಯಗಳ ವಂಚಿನ ಪ್ರದೇಶಗಳು, ಪಠ್ಯ ಮತ್ತು ಪಠ್ಯತೇರ ಚಟುವಟಿಕೆಗಳಿಗೆ ಅಷ್ಟೇನೂ ಪ್ರೋತ್ಸಾಹ ಸಿಗುವುದಿಲ್ಲ, ಅವುಗಳಿಗೆ ಬೇಕಾದ ಸರಿಯಾದ ಸೌಲಭ್ಯಗಳೂ ಸಿಗುವುದಿಲ್ಲ ಎಂಬುದೇ ಎಲ್ಲರ ಭಾವನೆಯಾಗಿದೆ.

ಇಂತಹ ಸೌಲಭ್ಯ ವಂಚಿತ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದು ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ ಎಚ್.ಡಿ.ಕೋಟೆ ಅಂತರಸಂತೆ ಗ್ರಾಮದ ಬಾಲ್ ಬ್ಯಾಡ್ಮಿಂಟನ್ ಆಟಗಾರ ಆರ್.ಮಹದೇವಸ್ವಾಮಿ.

ಮಹದೇವಸ್ವಾಮಿ ಸತತ ೧೧ ಬಾರಿ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಬಾಲ್ ಬ್ಯಾಡ್ಮಿಂಟನ್ ಒಂದು ರಾಕೆಟ್ ಗೇಮ್. ಇಂದು ತಂಡದಲ್ಲಿ ೫ ಜನ ಮುಖ್ಯ ಆಟಗಾರರು ೫ ಜನ ಬದಲಿ ಆಟಗಾರರಿರುತಾರೆ. ಈ ಆಟ ಜನರಿಗೆ ಅಷ್ಟಾಗಿ ಪರಿಚಯವಿಲ್ಲದಿದ್ದರೂ ನಗರ ಭಾಗಗಳಲ್ಲಿ ಹೆಚ್ಚಾಗಿ ಆಡುವ ಆಟಗಳಲ್ಲಿ ಒಂದಾಗಿದೆ.

ಗ್ರಾಮೀಣ ಭಾಗಗಳಲ್ಲಿಯೂ ಬೆರಣಿಕೆಯಷ್ಟು ಶಾಲೆಗಳು ಈ ಆಟವನ್ನು ಅಭ್ಯಾಸ ಮಾಡುತ್ತಿವೆ. ಅಂತಹ ಶಾಲೆಗಳಲ್ಲಿ ಒಂದಾದ ಅಂತರಸಂತೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಓದಿದ ಮಹದೇವಸ್ವಾಮಿ ತಮ್ಮ ೮ ರಿಂದ ೧೦ ತರಗತಿಯವರೆಗೆ ದೈಹಿಕ ಶಿಕ್ಷಕ ಎಚ್.ಎಸ್.ರಮೇಶ್‌ರ ಬಳಿ ಬಾಲ್ ಬ್ಯಾಡ್ಮಿಂಟನ್ ಅಭ್ಯಾಸ ಮಾಡಿದರು. ಅಲ್ಲಿಂದ ಪ್ರಾರಂಭವಾದ ಇವರ ಬ್ಯಾಡ್ಮಿಂಟನ್ ಪ್ರಯಾಣ ರಾಷ್ಟ್ರೀಯ ಮಟ್ಟಕ್ಕೆ ಕೊಂಡ್ಯೊಯುವವರಿಗೂ ನಡೆಯಿತು.

ಸದ್ಯ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ೬೯ನೇ ಸಿನಿಯರ್ ವಿಭಾಗದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡದ ನಾಯಕನಾಗಿ ಮಹದೇವಸ್ವಾಮಿ ತಂಡವನ್ನು ನಿಭಾಯಿಸಿದ್ದು, ಗ್ರಾಮೀಣ ಭಾಗದಲ್ಲಿ ಹುಟ್ಟಿಬೆಳೆದು ರಾಷ್ಟ್ರೀಯ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಿರುವುದು ಹೆಮ್ಮೆಯ ವಿಚಾರವಾಗಿದೆ.

ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶಗಳಲ್ಲಿ ಬಾಲ್ ಬ್ಯಾಡ್ಮಿಂಟನ್ ಕ್ರೀಡೆ ಇತ್ತೀಚೆಗೆ ಹೆಚ್ಚು ಹೆಚ್ಚು ಪ್ರಸಿದ್ಧಿಯನ್ನು ಪಡೆಯುತ್ತಿದೆ. ಈ ಆಟದಲ್ಲಿ ಬಳಸಲಾಗುವ ಬ್ಯಾಟ್‌ಗಳು ಮತ್ತು ಬಾಲ್‌ಗಳು ಕೊಂಚ ದುಬಾರಿಯಾಗಿರುವ ಪರಿಣಾಮ ಗ್ರಾಮೀಣ ಭಾಗದ ಮಕ್ಕಳು ಈ ಆಟವನ್ನು ಅಭ್ಯಾಸಿಸಲು ಸೌಲಭ್ಯಗಳ ಕೊರತೆ ಎದುರಾಗುವಂತೆ ಮಾಡಿದೆ.

ಅಂತರಸಂತೆ ಗ್ರಾಮದ ರಾಮು ಮತ್ತು ಜಯಮ್ಮ ಎಂಬವರ ಮಗನಾದ ಮಹದೇವಸ್ವಾಮಿ ಸುಮಾರು ೧೧ ಬಾರಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ೪ ಬಾರಿ ’ಸ್ಟಾರ್ ಆಫ್ ಇಂಡಿಯಾ’ ಪ್ರಶಸ್ತಿ ಪಡೆದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ೨೦೧೪ರಲ್ಲಿ ಮೊದಲ ಬಾರಿಗೆ ಸಬ್ ಜೂನಿಯರ್ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದರು. ಬಳಿಕ ಇವರಿಗೆ ಮಂಗಳೂರಿನ ಪ್ರತಿಷ್ಠಿತ ಆಳ್ವಾಸ ಶಿಕ್ಷಣ ಸಂಸ್ಥೆ ಆಹ್ವಾನ ನೀಡಿ ತಮ್ಮಲ್ಲಿಯೇ ಉಚಿತ ಶಿಕ್ಷಣ ನೀಡಿ ಕ್ರೀಡೆಗೆ ಪ್ರೋತ್ಸಾಹಿಸಿತು.

ಬಳಿಕ ಅಲ್ಲಿಯೇ ಬ್ಯಾಡ್ಮಿಂಟನ್ ಅಭ್ಯಾಸ ಮಾಡಿದ ಅವರು, ೨ ಬಾರಿ ಜೂನಿಯರ್ ವಿಭಾಗ, ೮ ಬಾರಿ ಸಿನಿಯರ್ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದು, ಒಟ್ಟಾರೆ ೧೧ ಬಾರಿ ರಾಷ್ಟ್ರೀಯ ಮಟ್ಟವನ್ನು ಕರ್ನಾಟಕದ ಪರ ಆಡಿದ್ದಾರೆ. ಈ ಪೈಕಿ ೫ ಬಾರಿ ಕಂಚಿನ ಪದಕ ಪಡೆದಿದ್ದಾರೆ. ಅಲ್ಲದೆ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ೫ ಬಾರಿ ಪ್ರತಿನಿಧಿಸಿದ್ದು, ೨ ಬಾರಿ ಬೆಳ್ಳಿ ಮತ್ತು ೧ ಬಾರಿ ಕಂಚಿನ ಪದಕ ಗೆದ್ದಿದ್ದಾರೆ.
ಈ ಆಟ ಮತ್ತಷ್ಟು ಪ್ರಚಾರ ಪಡೆಯಬೇಕು. ಗ್ರಾಮೀಣ ಭಾಗದಲ್ಲಿ ನನಂತೆಯೇ ಸಾಕಷ್ಟು ಕ್ರೀಡಾಪಟುಗಳು ಬ್ಯಾಡ್ಮಿಂಟನ್ ಅಭ್ಯಾಸ ಮಾಡುತ್ತಿದ್ದಾರೆ. ಅದರಲ್ಲಿ ಬಹಳಷ್ಟು ಸರ್ಕಾರಿ ಶಾಲೆಗಳೇ ಇವೆ. ಅವುಗಳಿಗೆ ಸೂಕ್ತ ಸಲಕರಣೆಗಳನ್ನು ವದಗಿಸಿ ಪ್ರೋತ್ಸಾಹಿಸಿದರೆ ಮತ್ತಷ್ಟು ಕ್ರೀಡಾಪಟುಗಳಿಗೆ ವೇದಿಕೆ ಸೃಷ್ಟಿಸಿದಂತಾಗುತ್ತದೆ ಎನ್ನುತ್ತಾರೆ ಮಹದೇವಸ್ವಾಮಿ.

andolana

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

2 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

4 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

5 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

5 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

5 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

6 hours ago