ಯುವ ಡಾಟ್ ಕಾಂ

ಸುವರ್ಷ ಗೌಡ ರ್ಯಾಂಕಿಗೂ ಸೈ; ಸೇನೆಗೂ ಜೈ

ಮಾಮರಶಿ

ಮಳವಳ್ಳಿ ತಾಲ್ಲೂಕಿನ ಕಿರಗಸೂರಿನ ಪರುಷ ಕಲಿಕಾ ಕುಟೀರದ ಸಂಸ್ಥಾಪಕರೂ, ಪಟ್ಟಣದ ರೋಟರಿ ಶಾಲೆಯ ನಿರ್ದೇಶಕರೂ ಆದ ಶಿಕ್ಷಣ ತಜ್ಞೆ ನೇಮಾಂಬ ಅವರ ಮೊಮ್ಮಗಳಾದ ಸುವರ್ಷ ಗೌಡ ಎಂಎಸ್ಸಿ ಮನೋವಿಜ್ಞಾನ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ೫ ಚಿನ್ನದ ಪದಕಗಳು ಹಾಗೂ ನಗದು ಬಹುಮಾನ ಗಳಿಸುವ ಮೂಲಕ ಮಂಡ್ಯ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಸುವರ್ಷ ಗೌಡ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ ಹೆಣ್ಣು ಮಗಳು. ಸುಮಾ ಅವರ ಪುತ್ರಿಯಾಗಿರುವ ಸುವರ್ಷ ಅಜ್ಜಿ ನೇಮಾಂಬ ಹಾಗೂ ಸೋದರ ಮಾವ ಡಾ.ಮಹೇಶ್ ಅವರ ಸಹಕಾರದಿಂದ ವಿದ್ಯಾಭ್ಯಾಸವನ್ನು ಮುಂದುವರಿಸಿದರು. ಪ್ರಾಥಮಿಕ ಶಾಲಾ ಹಂತ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಹಂತದಲ್ಲಿ ಓದುವುದರಲ್ಲಿ ಸದಾ ಮುಂದಿದ್ದ ಸುವರ್ಷ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂಎಸ್ಸಿ ಮನೋವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡು ೫ ಚಿನ್ನದ ಪದಕಗಳು ಹಾಗೂ ನಗದು ಬಹುಮಾನ ಗಳಿಸಿದ್ದಾರೆ.

ಎಸ್‌ಎಸ್‌ಬಿ ಪರೀಕ್ಷೆಯಲ್ಲಿ ಆಯ್ಕೆ: ಕಳೆದ ತಿಂಗಳು ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆದ ಯುಪಿಎಸ್‌ಸಿ ಆಯ್ಕೆ ಪ್ರಕ್ರಿಯೆಯಷ್ಟೇ ಕಠಿಣವಾದ ಎಸ್‌ಎಸ್‌ಬಿ ಪರೀಕ್ಷೆಯಲ್ಲಿ ಚೊಚ್ಚಲ ಪ್ರಯತ್ನಲ್ಲೇ ಸೇನೆಗೆ ಆಯ್ಕೆಯಾಗುವ ಮೂಲಕ ಸುವರ್ಷ ಮತ್ತೊಂದು ಸಾಧನೆ ಮಾಡಿದ್ದು, ಈ ತರಬೇತಿಯನ್ನೂ ಪಡೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಅಭಿನಂದನೆಗಳ ಭರಪೂರ: ಜ.೧೮ರಂದು ಮೈಸೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಸುವರ್ಷ ೫ ಚಿನ್ನದ ಪದಕಗಳು ಹಾಗೂ ನಗದು ಬಹುಮಾನ ಪಡೆದಿರುವುದಕ್ಕೆ ತಾಲ್ಲೂಕು ಬೆಸುಗೆ ಸಮಾನ ಮನಸ್ಕರ ಬಳಗ, ಮಾಮರ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು, ಪರುಷ ಕಲಿಕಾ ಕುಟೀರದ ಸಿಬ್ಬಂದಿ, ಕಿರಗಸೂರು ಗ್ರಾಮದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ನಾನು ಶಿಕ್ಷಕಿಯಾಗಿ, ರೋಟರಿ ಸಂಸ್ಥೆಯ ನಿರ್ದೇಶಕಿಯಾಗಿ ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ನೀಡಿದ್ದೇನೆ. ಸಮಾಜದ ಹಲವು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದೇನೆ. ನನ್ನ ಮೊಮ್ಮಗಳಾದ ಸುವರ್ಷಗೌಡ ಶ್ರಮಜೀವಿಯಾಗಿದ್ದು ಹುಟ್ಟಿನಿಂದಲೂ ಅವಳ ಗುರಿ, ಚಿಂತನೆ, ವಿಶ್ವಾಸ ನೋಡಿ ಇವಳು ರಾಜ್ಯಕ್ಕೆ, ದೇಶಕ್ಕೆ ಉತ್ತಮ ಕೂಡುಗೆ ನೀಡಬಲ್ಲಳು ಎಂದುಕೊಂಡಿದ್ದೆ . ಅದರಂತೆ ಅವಳು ಕಠಿಣ ಸಂದರ್ಭದಲ್ಲೂ ಶಿಕ್ಷಣ ಪಡೆದು ಚಿನ್ನದ ಪದಕ ಪಡೆದಿ ರುವುದು ನನಗೆ ಸಂತಸ ತಂದಿದೆ.

-ನೇಮಾಂಬ, ಶಿಕ್ಷಣ ತಜ್ಞರು, ಕಿರಗಸೂರು, ಮಳವಳ್ಳಿ ತಾಲ್ಲೂಕು.

” ಸಾಧನೆ ಮಾಡುವುದು ಸುಲಭವಲ್ಲ. ಸುವರ್ಷಗೌಡಳ ಸಾಧನೆ ಇಡೀ ಯುವ ಸಮುದಾಯಕ್ಕೆ ದಾರಿ ದೀಪವಾಗಿದೆ, ಪ್ರತಿಯೊಬ್ಬರೂ ಗುರು ಹಿರಿಯರ ಮಾರ್ಗದರ್ಶನದಲ್ಲಿ, ಗುರುಗಳ ನೆರಳಿನಲ್ಲಿ ಸಂಸ್ಕಾರ, ಸಂಸ್ಕ ತಿ, ಶಿಸ್ತು, ಸಮಯ ಪ್ರಜ್ಞೆ ಇಟ್ಟುಕೊಂಡು ಶ್ರಮವಹಿಸಿದರೆ ಗುರಿ ಸಾಧನೆ ಸಾಧ್ಯ ಎಂಬುದನ್ನು ಸವರ್ಷಗೌಡ ಮಾಡಿ ತೋರಿಸಿದ್ದಾರೆ.”

-ಮಲ್ಲಿಕಾ ಮಳವಳ್ಳಿ, ಸಾಹಿತಿಗಳು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago