ಯುವ ಡಾಟ್ ಕಾಂ

ಕೇದಾರಕಂಠ ಶಿಖರ ಏರಿದ ಬಾಲಕಿ ಶನಾಯ

ಮಂಜು ಕೋಟೆ

ಸಾಹಸಕ್ಕೆ ವಯಸ್ಸಿನ ಅಂತರವಿಲ್ಲ. ವಯಸ್ಸಿನ ಅಡ್ಡಿಯೂ ಇಲ್ಲ ಎಂಬುದನ್ನು ಶನಾಯ ಎಂಬ ೮ ವರ್ಷದ ಬಾಲಕಿ ಸಾಬೀತು ಮಾಡಿ ತೋರಿಸಿದ್ದಾಳೆ. ತನ್ನ ಈ ಪುಟ್ಟ ವಯಸ್ಸಿಗೆ ಕಠಿಣವಾದ ಕೇದಾರಕಂಠ ಚಾರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಹೊಸ ಸಾಧನೆ ಮೆರೆದಿದ್ದಾಳೆ.

ಮೈಸೂರಿನ ಎಕ್ಸೆಲ್ ಪಬ್ಲಿಕ್ ಶಾಲೆಯಲ್ಲಿ ೩ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶನಾಯ ಆನಂದ್ ಮತ್ತು ಭಾನುಮತಿ ದಂಪತಿಯ ಒಬ್ಬಳೇ ಮಗಳು. ಕುಮಾರ ಪರ್ವತ ಏರಿ ಅನುಭವ ಹೊಂದಿದ್ದ ಶನಾಯ ನಂತರ ಉತ್ತರಾಖಂಡದ ಗೋವಿಂದ ವನ್ಯಜೀವಿ ಅಭ ಯಾರಣ್ಯದಲ್ಲಿರುವ ಜನಪ್ರಿಯವಾದ ಹಾಗೂ ಕಠಿಣ ವಾದ ಚಾರಣ ತಾಣಗಳಲ್ಲಿ ಒಂದಾದ, ಸುಮಾರು ೩,೮೫೦ ಮೀ. (೧೨,೫೦೦ ಅಡಿಗಳು) ಎತ್ತರವಿರುವ ಕೇದಾರಕಂಠ ಶಿಖರವನ್ನು ಏರುವ ಮೂಲಕ ತನ್ನ ಅಚಲ ನಿರ್ಣಯವನ್ನು ಸಾಧಿಸಿ ತೋರಿಸಿದ್ದಾಳೆ.

ಉತ್ತರಾಖಂಡದ ಈ ಶಿಖರವು ಚಳಿಗಾಲದಲ್ಲಿ ಹಿಮದಿಂದ ಆವೃತವಾಗುವುದರಿಂದ ಇದರ ರಮ ಣೀಯ ಸೌಂದರ್ಯಕ್ಕೆ ಮನಸೋಲದವರಿಲ್ಲ. ಇದರ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಚಳಿಗಾಲ ದಲ್ಲಿಯೇ ಹೆಚ್ಚು ಚಾರಣ ಪ್ರಿಯರು ಇಲ್ಲಿಗೆ ಬರುತ್ತಾರೆ. ಮೇಲೆ ಮೇಲೆ ಏರುತ್ತಾ ಹೋದಂತೆ ಕೊರೆಯುವ ಚಳಿ ಉಸಿರಾಟಕ್ಕೆ ತೊಂದರೆಯನ್ನುಂಟು ಮಾಡಬಹುದು. ಇಂತಹ ಕಠಿಣವಾದ ಕೇದಾರಕಂಠ ಚಾರಣವನ್ನು ಶನಾಯ ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಆಕೆಯ ಶಾಲೆಯ ವರು ಹಾಗೂ ಪೋಷಕರು ಹೆಮ್ಮೆ ಪಡುವಂತೆ ಮಾಡಿದೆ.

ದಟ್ಟವಾದ ಪೈನ್ ಕಾಡುಗಳು, ವಿಶಾಲವಾದ ಹುಲ್ಲು ಗಾವಲು, ಎಲ್ಲದಕ್ಕಿಂತ ಹೆಚ್ಚಾಗಿ ದಟ್ಟವಾದ ಹಿಮ ಮತ್ತು ಕೊರೆಯುವ ಚಳಿಯ ನಡುವೆ ಕೇದಾರ ಕಂಠ ಪರ್ವತವನ್ನೇರುವುದು ಸವಾಲಿನ ಕೆಲಸವೇ ಸರಿ.

ಇಂತಹ ಸವಾಲನ್ನು ಸ್ವೀಕರಿಸಿದ ಶನಾಯ ಮಂಜಿನಿಂದ ಆವೃತವಾದ ಹಾದಿಯಲ್ಲಿ ಸಾಗುವ ದೃಢನಿಶ್ಚಯ ಮಾಡಿ ಕೊನೆಗೂ ಶಿಖರವನ್ನೇರಿ ಸಾಧನೆ ಮಾಡಿದ್ದಾಳೆ. ದಾರಿಯುದ್ದಕ್ಕೂ, ಸ್ವರ್ಗರೋಹಿಣಿ, ಕಪ್ಪು ಶಿಖರ ಮತ್ತು ಬಂದರ್ಪೂಂಚ್‌ನಂತಹ ಹಿಮಾಲಯ ಶಿಖರಗಳ ಮೋಡಿ ಮಾಡುವ ದೃಶ್ಯಗಳನ್ನು ಕಣ್ತುಂಬಿಕೊಂಡು ಮುಂದೆ ಮತ್ತಷ್ಟು ಶಿಖರಗಳನ್ನೇರುವ ಪಣ ತೊಟ್ಟಿದ್ದಾಳೆ ಎಂಬುದು ಅವರ ಪೋಷಕರು ಮಾತು.

ಕೇದಾರಕಂಠ ಚಾರಣವೇನು ಒಂದು ದಿನದಲ್ಲಿ ಪೂರ್ಣಗೊಳ್ಳುವ ಚಾರಣವಲ್ಲ. ಸತತ ಆರು ದಿನಗಳು ನಡೆದು ಬೆಟ್ಟ, ಶಿಖರಗಳನ್ನು ಏರಿ ಗುರಿ ಮುಟ್ಟಬೇಕು. ಈ ಚಾರಣವು ಸಂಕ್ರಿಯ ಸುಂದರವಾದ ಹಳ್ಳಿಯಿಂದ ಪ್ರಾರಂಭವಾಗಿ, ಜುದಾ ಕಾ ತಲಾಬ್ ಮತ್ತು ಕೇದಾರ ಕಾಂತ ಬೇಸ್ ಕ್ಯಾಂಪ್‌ನಂತಹ ಸುಂದರವಾದ ಶಿಬಿರ ತಾಣಗಳ ಮೂಲಕ ಸಾಗಿ ಕೇದಾರಕಂಠ ಶಿಖರದಲ್ಲಿ ಕೊನೆಗೊಳ್ಳುತ್ತದೆ.

ತನ್ನ ಪೋಷಕರ ಅಪಾರ ಬೆಂಬಲ, ಶಿಕ್ಷಕರು, ಸ್ನೇಹಿತರ ಪ್ರೋತ್ಸಾಹ ನಾನು ಈ ಕೊರೆಯುವ ಚಳಿಯನ್ನು ಎದುರಿಸಿ ಸವಾಲಿನ ಈ ಭೂಪ್ರದೇಶವನ್ನು ಏರಿ, ಅಂತಿಮವಾಗಿ ಶಿಖರದ ಮೇಲೆ ನಿಲ್ಲಲು ಕಾರಣವಾಯಿತು ಎಂಬುದು ಶನಾಯಳ ಮಾತು.

ಶನಾಯಳ ಈ ಸಾಧನೆ ಯುವ ಸಾಹಸಿಗರು ಹಾಗೂ ಅನೇಕ ಚಾರಣಿಗರಿಗೆ ಸ್ಛೂರ್ತಿಯಾಗಿದೆ. ಕನಸುಗಳನ್ನು ಬೆನ್ನಟ್ಟುವಾಗ ಯಾವುದೇ ವಯಸ್ಸು, ಸಮಸ್ಯೆಗಳು ನಮಗೆ ಕಾಣುವುದಿಲ್ಲ ಎಂಬುದಕ್ಕೆ ಶನಾಯ ಸಾಕ್ಷಿಯಾಗಿದ್ದಾಳೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡುವ, ಇನ್ನಷ್ಟು ಕಠಿಣವಾದ ಶಿಖರಗಳನ್ನೇರುವ ಕನಸು ಹೊತ್ತಿದ್ದಾಳೆ. ಇವಳ ಧೈರ್ಯ, ಆತ್ಮವಿಶ್ವಾಸ ಹಾಗೂ ಕಠಿಣ ಪರಿಶ್ರಮವನ್ನು ಕಂಡು ಪೋಷಕರೂ ಅವಳಿಗೆ ಬೆಂಬಲವಾಗಿ ನಿಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

5 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

8 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

9 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

9 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

9 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

9 hours ago