ಶೇಷಣ್ಣಸ್ವಾಮಿಯವರ ಗಾಯನ ಜಾಗೃತಿ

ಜಾನಪದ ಸಂಗೀತ, ಕ್ರಾಂತಿಗೀತೆಗಳು, `ಹೋರಾಟದ ಹಾಡುಗಳು ಯುವಜನರಿಂದ ದೂರಾಗುತ್ತಿರುವ ಈ ಕಾಲಘಟ್ಟದಲ್ಲಿ ಇಲ್ಲೊಬ್ಬರು ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಕುವೆಂಪುರವರ ಗೀತೆಗಳಿಗೆ ರಾಗ ಸಂಯೋಜನೆ ಮಾಡಿ ಹಾಡುವ ಜತೆಗೆ ತಾವೇ ಕವಿತೆ ರಚಿಸಿ ರಾಗ ಸಂಯೋಜಿಸಿ ಹಾಡುವ ಕೌಶಲ್ಯವನ್ನು ಮೈಗೂಡಿಸಿಕೊಂಡಿದ್ದಾರೆ.

ಚಾಮರಾಜನಗರದ ಕಂಪನಪುರ ಗ್ರಾಮದ ದಿವಂಗತ ಹಗ್ಗದ ಮಾದಯ್ಯ ಮತ್ತು ಮಹದೇವಮ್ಮ ದಂಪತಿ ಪುತ್ರ ಕೆ.ಎಂ. ಶೇಷಣ್ಣ ಸ್ವಾಮಿ ಪ್ರಸ್ತುತ ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಅದರೊಟ್ಟಿಗೆ ಪ್ರಜ್ಞಾ ಪರಿವರ್ತನಾ ಕಲಾ ತಂಡ’ವೊಂದನ್ನು ಕಟ್ಟಿಕೊಂಡು ಅನೇಕ ವಿದ್ಯಾರ್ಥಿಗಳಿಗೆ ಸಂಗೀತ ಗಾಯನ ಕಲಿಸುವ ಜತೆಗೆ ಅನೇಕ ಸಂಗೀತ ಕಾರ್ಯಕ್ರಮಗಳನ್ನೂ ನಡೆಸಿಕೊಡುತ್ತಾ, ಜಾನಪದ ಸಂಗೀತ, ಕ್ರಾಂತಿ ಗೀತೆಗಳತ್ತ ಯುವಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಕೆ.ಎಂ.ಶೇಷಣ್ಣಸ್ವಾಮಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ ಮುಗಿಸಿ ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಲಲಿತ ಕಲೆಗಳ ಕಾಲೇಜಿನಲ್ಲಿ ‘ಸಂಗೀತ, ನಾಟಕ ಮತ್ತು ಐಚ್ಛಿಕ ಕನ್ನಡ’ ವಿಷಯದಲ್ಲಿ ಪದವಿ ಪಡೆದುಕೊಂಡರು. ಹಾಗೂ ‘ಮೃದಂಗ’ ವಿಷಯದಲ್ಲಿ ಡಿಪ್ಲೊಮಾ ಪದವಿಯನ್ನೂ ಪಡೆದಿದ್ದು, ಕರಾಮುವಿಯ ದೂರ ಶಿಕ್ಷಣ ಕೇಂದ್ರದ ಮೂಲಕ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ಪ್ರಸ್ತುತ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರೊ.ಎನ್.ಕೆ.ಲೋಲಾಕ್ಷಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.

ಕೇವಲ ಕವನಗಳಿಗೆ ರಾಗ ಸಂಯೋಜನೆ ಮಾಡಿ ವಾಚನ ಮಾಡುವುದಷ್ಟೇ ಅಲ್ಲದ ಸ್ವತಃ ಕವಿಯಾಗಿರುವ ಇವರ ಕವಿತೆಗಳು ಪ್ರಬುದ್ಧ ಭಾರತ, ಸಮಾಜ ಪರಿವರ್ತನಾ ಬಹದನಿ, ರಂಗಶೀರ್ಷ, ಆಂದೋಲನ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ.

ಗಾಯನದ ಬಗ್ಗೆ ವಿಶೇಷ ಒಲವು ಹೊಂದಿರುವ ಜೇವಣ್ಣ ಚಂದನ ವಾಹಿನಿ, ಮೈಸೂರು ಆಕಾಶವಾಣಿ ಕೇಂದ್ರಗಳಲ್ಲಿ ಸಹಗಾಯಕರಾಗಿ ಕಾರ್ಯಕ್ರಮ ನೀಡಿದ್ದಾರೆ. ತಮ್ಮ ಗಾಯನದ ಮೂಲಕ ಜಾಗೃತಿ ಮೂಡಿಸುತ್ತಿರುವ ಇವರಿಗೆ ಅನೇಕ ಸಂಘ-ಸಂಸ್ಥೆಗಳು ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿವೆ. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ಕೊಡಮಾಡುವ 2020ರ ‘ಕನ್ನಡ ವಿಕಾಸ ರತ್ನ’ ಪ್ರಶಸ್ತಿ, ಭಾರತೀಯ ವಿದ್ಯಾರ್ಥಿ ಸಂಘ, ಕರ್ನಾಟಕ ಇವರ 2022ರ ‘ಉದಯೋನ್ಮುಖ ಗಾಯಕ’ ಬಿರುದು, ಲಯನ್ಸ್ ಕ್ಲಬ್ ಆಫ್ ಮೈಸೂರು ಅವರ 2023ರ ‘ಸಂವಿಧಾನ ಸೇವಾ ರತ್ನ ಪ್ರಶಸ್ತಿ’, 2024ರಲ್ಲಿ ಮಾನಸಗಂಗೋತ್ರಿಯ ಕುವಂಪು ಕನ್ನಡ ಅಧ್ಯಯನ ಸಂಸ್ಥೆ, ಸಂಶೋಧನಾ ವಿದ್ಯಾರ್ಥಿ ವೇದಿಕೆ ವಶಿಯಿಂದ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ‘ಗಾನ ಕೋಗಿಲೆ’ ಬಿರುದು ಸಂದಿವೆ. ಅಲ್ಲದೆ 2024ರಲ್ಲಿ ಮಾನಸಗಂಗೋತ್ರಿಯ ಇತಿಹಾಸ ಅಧ್ಯಯನ ವಿಭಾಗವು ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನದ ಅಂಗವಾಗಿ ‘ಭೀಮ ಗಾನ ಗಾರುಡಿಗೆ ಎಂಬ ಬಿರುದು ನೀಡಿ ಗೌರವಿಸಿದೆ.

ಇದಿಷ್ಟೇ ಅಲ್ಲದೆ ಮೈಸೂರಿನ ಕನ್ನಡ ಜಾನಪದ ಪರಿಷತ್‌ ಹಾಗೂ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ 8ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಯುವ ವಾನಪದ ಪ್ರದಂಚ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.

ಕೆ.ಎಂ.ಶೇಷಣ್ಣಸ್ವಾಮಿ ಯುವಜನರಿಂದ ಜಾನಪದ ಮರೆಯಾಗುತ್ತಿರುವ ಈ ಕಾಲಘಟ್ಟದಲ್ಲಿ ಆ ಸಾಹಿತ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೂ ದಾಟಿಸುವ ಪಯತ್ನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಆಸಕ್ತರಿಗೆ ಸಂಗೀತ ಗಾಯನ ಕಲಿಸುವ ಗುರಿ ಇಟ್ಟುಕೊಂಡಿದ್ದು, ಬುದ್ಧ ಬಸವ, ಅಂಬೇಡ್ಕರ್, ಕುವೆಂಪು, ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಆಶಯಗಳನ್ನು ಗೀತೆಗಳ ಮೂಲಕ ಯುವ ಜನರ ಮುಂದೆ ಪ್ರಸ್ತುತ ಪಡಿಸುತ್ತಾ ಸಮಾಜವನ್ನು ಸರಿದಾರಿಗೆ ತರಲು ಜಾಗೃತಿ ಮೂಡಿಸಬೇಕು ಎಂಬುದು ಅವರ ಆಶಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

1 hour ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

1 hour ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…

1 hour ago

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…

1 hour ago

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

2 hours ago