ಶೇಷಣ್ಣಸ್ವಾಮಿಯವರ ಗಾಯನ ಜಾಗೃತಿ

ಜಾನಪದ ಸಂಗೀತ, ಕ್ರಾಂತಿಗೀತೆಗಳು, `ಹೋರಾಟದ ಹಾಡುಗಳು ಯುವಜನರಿಂದ ದೂರಾಗುತ್ತಿರುವ ಈ ಕಾಲಘಟ್ಟದಲ್ಲಿ ಇಲ್ಲೊಬ್ಬರು ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಕುವೆಂಪುರವರ ಗೀತೆಗಳಿಗೆ ರಾಗ ಸಂಯೋಜನೆ ಮಾಡಿ ಹಾಡುವ ಜತೆಗೆ ತಾವೇ ಕವಿತೆ ರಚಿಸಿ ರಾಗ ಸಂಯೋಜಿಸಿ ಹಾಡುವ ಕೌಶಲ್ಯವನ್ನು ಮೈಗೂಡಿಸಿಕೊಂಡಿದ್ದಾರೆ.

ಚಾಮರಾಜನಗರದ ಕಂಪನಪುರ ಗ್ರಾಮದ ದಿವಂಗತ ಹಗ್ಗದ ಮಾದಯ್ಯ ಮತ್ತು ಮಹದೇವಮ್ಮ ದಂಪತಿ ಪುತ್ರ ಕೆ.ಎಂ. ಶೇಷಣ್ಣ ಸ್ವಾಮಿ ಪ್ರಸ್ತುತ ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಅದರೊಟ್ಟಿಗೆ ಪ್ರಜ್ಞಾ ಪರಿವರ್ತನಾ ಕಲಾ ತಂಡ’ವೊಂದನ್ನು ಕಟ್ಟಿಕೊಂಡು ಅನೇಕ ವಿದ್ಯಾರ್ಥಿಗಳಿಗೆ ಸಂಗೀತ ಗಾಯನ ಕಲಿಸುವ ಜತೆಗೆ ಅನೇಕ ಸಂಗೀತ ಕಾರ್ಯಕ್ರಮಗಳನ್ನೂ ನಡೆಸಿಕೊಡುತ್ತಾ, ಜಾನಪದ ಸಂಗೀತ, ಕ್ರಾಂತಿ ಗೀತೆಗಳತ್ತ ಯುವಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಕೆ.ಎಂ.ಶೇಷಣ್ಣಸ್ವಾಮಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ ಮುಗಿಸಿ ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಲಲಿತ ಕಲೆಗಳ ಕಾಲೇಜಿನಲ್ಲಿ ‘ಸಂಗೀತ, ನಾಟಕ ಮತ್ತು ಐಚ್ಛಿಕ ಕನ್ನಡ’ ವಿಷಯದಲ್ಲಿ ಪದವಿ ಪಡೆದುಕೊಂಡರು. ಹಾಗೂ ‘ಮೃದಂಗ’ ವಿಷಯದಲ್ಲಿ ಡಿಪ್ಲೊಮಾ ಪದವಿಯನ್ನೂ ಪಡೆದಿದ್ದು, ಕರಾಮುವಿಯ ದೂರ ಶಿಕ್ಷಣ ಕೇಂದ್ರದ ಮೂಲಕ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ಪ್ರಸ್ತುತ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರೊ.ಎನ್.ಕೆ.ಲೋಲಾಕ್ಷಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.

ಕೇವಲ ಕವನಗಳಿಗೆ ರಾಗ ಸಂಯೋಜನೆ ಮಾಡಿ ವಾಚನ ಮಾಡುವುದಷ್ಟೇ ಅಲ್ಲದ ಸ್ವತಃ ಕವಿಯಾಗಿರುವ ಇವರ ಕವಿತೆಗಳು ಪ್ರಬುದ್ಧ ಭಾರತ, ಸಮಾಜ ಪರಿವರ್ತನಾ ಬಹದನಿ, ರಂಗಶೀರ್ಷ, ಆಂದೋಲನ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ.

ಗಾಯನದ ಬಗ್ಗೆ ವಿಶೇಷ ಒಲವು ಹೊಂದಿರುವ ಜೇವಣ್ಣ ಚಂದನ ವಾಹಿನಿ, ಮೈಸೂರು ಆಕಾಶವಾಣಿ ಕೇಂದ್ರಗಳಲ್ಲಿ ಸಹಗಾಯಕರಾಗಿ ಕಾರ್ಯಕ್ರಮ ನೀಡಿದ್ದಾರೆ. ತಮ್ಮ ಗಾಯನದ ಮೂಲಕ ಜಾಗೃತಿ ಮೂಡಿಸುತ್ತಿರುವ ಇವರಿಗೆ ಅನೇಕ ಸಂಘ-ಸಂಸ್ಥೆಗಳು ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿವೆ. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ಕೊಡಮಾಡುವ 2020ರ ‘ಕನ್ನಡ ವಿಕಾಸ ರತ್ನ’ ಪ್ರಶಸ್ತಿ, ಭಾರತೀಯ ವಿದ್ಯಾರ್ಥಿ ಸಂಘ, ಕರ್ನಾಟಕ ಇವರ 2022ರ ‘ಉದಯೋನ್ಮುಖ ಗಾಯಕ’ ಬಿರುದು, ಲಯನ್ಸ್ ಕ್ಲಬ್ ಆಫ್ ಮೈಸೂರು ಅವರ 2023ರ ‘ಸಂವಿಧಾನ ಸೇವಾ ರತ್ನ ಪ್ರಶಸ್ತಿ’, 2024ರಲ್ಲಿ ಮಾನಸಗಂಗೋತ್ರಿಯ ಕುವಂಪು ಕನ್ನಡ ಅಧ್ಯಯನ ಸಂಸ್ಥೆ, ಸಂಶೋಧನಾ ವಿದ್ಯಾರ್ಥಿ ವೇದಿಕೆ ವಶಿಯಿಂದ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ‘ಗಾನ ಕೋಗಿಲೆ’ ಬಿರುದು ಸಂದಿವೆ. ಅಲ್ಲದೆ 2024ರಲ್ಲಿ ಮಾನಸಗಂಗೋತ್ರಿಯ ಇತಿಹಾಸ ಅಧ್ಯಯನ ವಿಭಾಗವು ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನದ ಅಂಗವಾಗಿ ‘ಭೀಮ ಗಾನ ಗಾರುಡಿಗೆ ಎಂಬ ಬಿರುದು ನೀಡಿ ಗೌರವಿಸಿದೆ.

ಇದಿಷ್ಟೇ ಅಲ್ಲದೆ ಮೈಸೂರಿನ ಕನ್ನಡ ಜಾನಪದ ಪರಿಷತ್‌ ಹಾಗೂ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ 8ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಯುವ ವಾನಪದ ಪ್ರದಂಚ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.

ಕೆ.ಎಂ.ಶೇಷಣ್ಣಸ್ವಾಮಿ ಯುವಜನರಿಂದ ಜಾನಪದ ಮರೆಯಾಗುತ್ತಿರುವ ಈ ಕಾಲಘಟ್ಟದಲ್ಲಿ ಆ ಸಾಹಿತ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೂ ದಾಟಿಸುವ ಪಯತ್ನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಆಸಕ್ತರಿಗೆ ಸಂಗೀತ ಗಾಯನ ಕಲಿಸುವ ಗುರಿ ಇಟ್ಟುಕೊಂಡಿದ್ದು, ಬುದ್ಧ ಬಸವ, ಅಂಬೇಡ್ಕರ್, ಕುವೆಂಪು, ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಆಶಯಗಳನ್ನು ಗೀತೆಗಳ ಮೂಲಕ ಯುವ ಜನರ ಮುಂದೆ ಪ್ರಸ್ತುತ ಪಡಿಸುತ್ತಾ ಸಮಾಜವನ್ನು ಸರಿದಾರಿಗೆ ತರಲು ಜಾಗೃತಿ ಮೂಡಿಸಬೇಕು ಎಂಬುದು ಅವರ ಆಶಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago