ಯುವ ಡಾಟ್ ಕಾಂ

ಸಾಗರದಾಚೆಯೂ ಕರಾಟೆ ಕಣದಲ್ಲಿ ಸುಭಾಷ್ ಸಾಧನೆ

ಚಿಗುರು ಮೀಸೆ ಯುವಕ… ಕಂಗಳಲ್ಲಿ ಸಾಧನೆಯ ಸಮುದ್ರ ವನ್ನು ಈಜಿ ಗೆಲ್ಲುವ ಹಂಬಲ… ಅಪ್ಪ ಕಲಿಸಿದ ಕರಾಟೆಯಲ್ಲಿ ಸಾಗರ ದಾಚೆಯ ಊರಿನಲ್ಲಿ ಸಾಧನೆ ಮಾಡುವ ಮೂಲಕ ಯಶಸ್ಸಿನ ಹಾದಿಯಲ್ಲಿ ದೃಢ ಹೆಜ್ಜೆ ಇಟ್ಟಿದ್ದಾರೆ.

ಈ ಯುವ ಸಾಧಕ, ಸಾಂಸ್ಕೃತಿಕ ನಗರಿ ಮೈಸೂರಿನ ಕರಾಟೆಪಟು. ಹೆಸರು ಎಸ್.ಸುಭಾಷ್. ವಯಸ್ಸು ಇನ್ನೂ ೨೩! ಅವರು, ಏಷಿಯನ್ ಕರಾಟೆ ಫೆಡರೇಶನ್ (ಎಕೆಎಫ್) ಇತ್ತೀಚೆಗೆ ಶ್ರೀಲಂಕಾದ ಕೊಲಂಬೋದಲ್ಲಿ ನಡೆಸಿದ ತೀರ್ಪುಗಾರರ ಆಯ್ಕೆ ಪರೀಕ್ಷೆಯಲ್ಲಿ ಇವರು ಮೊದಲನೇ ಪ್ರಯತ್ನದಲ್ಲಿಯೇ ಯಶಸ್ವಿಯಾಗಿದ್ದಾರೆ.

ಆ ಮೂಲಕ ಭಾರತದಲ್ಲಿಯೇ ಅತ್ಯಂತ ಕಿರಿಯ ವಯಸ್ಸಿನ ಏಷಿಯನ್ ಕರಾಟೆ ಫೆಡರೇಶನ್ ತೀರ್ಪುಗಾರರಾಗಿ ಆಯ್ಕೆ ಯಾಗಿದ್ದಾರೆ. ಈ ಮೂಲಕ ಮೊದಲು ೨೪ನೇ ವಯಸ್ಸಿನವರೊ ಬ್ಬರ ಹೆಸರಿಲ್ಲಿ ಇದ್ದ ದಾಖಲೆ ಯನ್ನು ಸುಭಾಷ್ ಸರಿಗಟ್ಟಿದ್ದಾರೆ.

ಸುಭಾಷ್ ಅವರ ತಂದೆ ಎನ್.ಶಂಕರ್ ಅವರು ಅಂತಾರಾಷ್ಟ್ರೀಯ ಕರಾಟೆಪಟು ಮತ್ತು ತೀರ್ಪುಗಾರರಾಗಿ ಸಾಧನೆ ಮಾಡಿದ್ದಾರೆ. ಮೈಸೂರಿನಲ್ಲಿ ನ್ಯಾಷನಲ್ ಕರಾಟೆ ಅಕಾಡೆಮಿ ಸ್ಥಾಪಿಸಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೈಸೂರು ಕರಾಟೆ ಅಸೋ ಸಿಯೇಷನ್, ಕರ್ನಾಟಕ ಸ್ಟೇಟ್ ಕರಾಟೆ ಅಸೋಸಿ ಯೇಷನ್ ಸೇರಿದಂತೆ ಅನೇಕ ಪ್ರತಿಷ್ಠಿತ ಕರಾಟೆ ಸಂಘಟನೆಗಳಲ್ಲಿ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ ಅನುಭವಿ.

ಮೂಲತಃ ನಂಜನಗೂಡು ತಾಲ್ಲೂಕು ಮುಳ್ಳೂರು ಗ್ರಾಮದ ಶಂಕರ್ ಅವರಿಗೆ ಹೇಗೋ ಏನೋ ಬಾಲ್ಯದಲ್ಲಿಯೇ ಕರಾಟೆಯ ನಂಟು ಹತ್ತಿತು. ಶಂಕರ್ ಅದನ್ನು ಕೇವಲ ಕ್ರೀಡೆಯಾಗಿ ನೋಡಲಿಲ್ಲ. ಏಕಾಗ್ರತೆ ಮತ್ತು ಪರಿಶ್ರಮದಿಂದ ಕಲಿಯುವ ಜತೆಗೆ ಕರಾಟೆಯನ್ನು ಆರಾಧಿಸಿದ್ದರಿಂದ ಬಹುಶಃ ಈಗಅವರು ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಕರಾಟೆ ಪಂದ್ಯಾವಳಿಗಳ ತೀರ್ಪುಗಾರರಾಗುವಷ್ಟು ಎತ್ತರಕ್ಕೆ ಏರಿದ್ದಾರೆ.

ಸುಭಾಷ್‌ಗೆ ತಂದೆಯೇ ಗುರು ಮತ್ತು ಮನೆಯಲ್ಲಿಯೇ ಕರಾಟೆ ಅಭ್ಯಾಸಕ್ಕೆ ಸಕಲ ಸೌಕರ್ಯವೂ ದೊರೆಯಿತು. ಅದನ್ನು ಬಹಳ ಕಕ್ಕುಲತೆಯಿಂದ ಬಳಸಿಕೊಂಡ ಸುಭಾಷ್ ಕರಾಟೆಯಲ್ಲಿ ತಂದೆಯಜೊತೆಯಲ್ಲೇ ಹೆಜ್ಜೆ ಹಾಕಿದರು. ಸ್ವತಃ ಇತರರಿಗೆ ಕರಾಟೆ ತರಬೇತಿ ನೀಡುವಷ್ಟು ಎತ್ತರಕ್ಕೆ ಬೆಳೆದರು. ಸುಭಾಷ್ ಅವರು ಶಾಲೆ ಅಥವಾ ಕಾಲೇಜಿಗೆ ಒಂದೊಂದು ದಿನ ತಪ್ಪಿಸಿಕೊಂಡರೂ ಕರಾಟೆ ತರಗತಿಗೆ ಮಾತ್ರ ತಪ್ಪದೇ ಹಾಜರಾಗುತ್ತಿದ್ದರು ಎಂಬುದು ಗಮನಾರ್ಹ.

ಸುಭಾಷ್ ಅವರು ಪ್ರಸಕ್ತ ವರ್ಷವಷ್ಟೇ ಬಿ.ಕಾಂ. ಪದವಿ ಮುಗಿಸಿದ್ದಾರೆ. ಇದರ ಜತೆಗೆ, ಕರಾಟೆ ಬ್ಲಾಕ್ ಬೆಲ್ಟ್ ೩ನೇ ಡಾನ್ ಆಗಿದ್ದಾರೆ. ಸದ್ಯಕ್ಕೆ ಉದ್ಯಮಿಯೂ ಆಗಿರುವ ತಂದೆಯ ವ್ಯವಹಾರದಲ್ಲಿ ಹೆಗಲು ಕೊಟ್ಟಿರುವ ಸುಭಾಷ್‌ಗೆ, ಶ್ರೀಲಂಕಾ ದಲ್ಲಿ ನಡೆದ ಎಕೆಎಫ್ ಪರೀಕ್ಷೆಯ ಫಲಿತಾಂಶ  ಬದುಕಿನ ಗುರಿಯನ್ನು ಖಚಿತಪಡಿಸಿರಬಹುದು.

ಕೊಲಂಬೊದಲ್ಲಿ ನಡೆದ ಪರೀಕ್ಷೆ:  ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿ ಇದೇ ಜುಲೈ ೩ರಂದು ನಡೆದ ಏಷಿಯನ್ ಕರಾಟೆ ಫೆಡರೇಷನ್ (ಎಕೆಎಫ್)ನ ತೀರ್ಪುಗಾರರ ಆಯ್ಕೆ ಪರೀಕ್ಷೆಗೆ ಏಷ್ಯಾ ಖಂಡದ ಸುಮಾರು ೪೫ ದೇಶಗಳ ೧೩೦ಕ್ಕೂ ಹೆಚ್ಚು ಕರಾಟೆ ತರಬೇತುದಾರರು ಹಾಜರಾಗಿದ್ದರು. ಇವರ ಪೈಕಿ ಭಾರತದ ೪೦ಕ್ಕೂ ಹೆಚ್ಚು ಸ್ಪರ್ಧಿಸಿದ್ದರು. ಈ ಪೈಕಿ ೧೮ ಜನರು ಮಾತ್ರ ಲಿಖಿತ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಎಕೆಎಫ್ ತೀರ್ಪುಗಾರರಾಗಿ ಅರ್ಹತೆ ಪಡೆದಿದ್ದಾರೆ. ಇವರಲ್ಲಿ ಒಬ್ಬರಾಗಿರುವ ಎಸ್.ಸುಭಾಷ್, ಎಕೆಎಫ್ ಇತಿಹಾಸದಲ್ಲಿಯೇ ಭಾರತದಿಂದ ತೀರ್ಪುಗಾರರಾಗಿ ಅರ್ಹತೆ ಪಡೆದ ಅತ್ಯಂತ ಕಿರಿಯ ವಯಸ್ಸಿನವರು ಎಂಬುದು ವಿಶೇಷ.

” ಎಕೆಎಫ್ ಪರೀಕ್ಷೆಯಲ್ಲಿ ನನ್ನ ಮಗ ಸುಭಾಷ್ ತೀರ್ಪುಗಾರನಾಗುವ ಅರ್ಹತೆ ಪಡೆದ ಕ್ಷಣ ಅವಿಸ್ಮರಣೀಯ. ಈ ಸಾಧನೆ ಮಾಡಲು ಪ್ರಮುಖವಾಗಿ ಕರ್ನಾಟಕ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಅರುಣ್ ಮಾಚಯ್ಯ, ಪ್ರಧಾನ ಕಾರ್ಯದರ್ಶಿ ಭಾರ್ಗವ್ ರೆಡ್ಡಿ ಮತ್ತು ರಾಜ್ಯ ರೆಫರಿ ಕಮಿಷನ್ ಚೇರ್ಮನ್ ಎನ್.ಜಿ.ಶಿವದಾಸ್ ಅವರ ಸಹಾಯ, ಸಹಕಾರ ಮತ್ತು ಬೆಂಬಲ ಕಾರಣ. ಅದಕ್ಕಾಗಿ ಈ ಮೂವರಿಗೆ ಧನ್ಯವಾದ ಸಲ್ಲಿಸುತ್ತೇನೆ.”

-ಎನ್.ಶಂಕರ್, ಸುಭಾಷ್ ಅವರ ತಂದೆ

” ನಾನು ಈ ಸಾಧನೆ ಮಾಡಿದ್ದೇನೆ ಎಂದರೆ, ಅದರ ಸಂಪೂರ್ಣ ಗೌರವ ಕರಾಟೆಯ ಗುರುವೂ ಆಗಿರುವ ನನ್ನ ತಂದೆ ಅವರಿಗೆ ಸಲ್ಲಬೇಕು. ಅಲ್ಲದೆ, ನನ್ನ ತಾಯಿ, ಸೋದರಿ ಸೇರಿದಂತೆ ಕುಟುಂಬದವರು, ಕರಾಟೆ ಸಹಪಾಠಿಗಳು ಇವರೆಲ್ಲರ ಸಹಕಾರ ಕೂಡ ಇದಕ್ಕೆ ಅಕಾರಣ.”

– ಎಸ್.ಸುಭಾಷ್

ಅಭಿನಂದನೆ-ಪ್ರಮಾಣಪತ್ರ ವಿತರಣೆ: ಕರಾಟೆ ಇಂಡಿಯಾ ಅಸೋಸಿಯೇಶನ್ ಮತ್ತು ಸೌತ್ ಏಷಿಯನ್ ಕರಾಟೆ ಅಸೋಸಿಯೇಶನ್ (ಎಸ್‌ಎಕೆಎಫ್) ಅಧ್ಯಕ್ಷ ಭರತ್ ಶರ್ಮ, ಚೀನಾದ ವಿಚಾಯೆಲ್, ಎಕೆಎಫ್ ರೆಫರಿ ಕಮಿಷನ್ ಸದಸ್ಯ ತೈಪಾಯ್, ಎಸ್‌ಎಕೆಎಫ್ ರೆಫರಿ ಕಮಿಷನ್ ಚೇರ್ಮನ್ ಮತ್ತು ಎಕೆಎಫ್ ರೆಫರಿ  ಕಮಿಷನ್ ಸದಸ್ಯ ಶಾಯಿನ್ ಅಖ್ತರ್ ಅವರು, ಎಕೆಎಫ್ ತೀರ್ಪುಗಾರರ ಪರೀಕ್ಷೆಯಲ್ಲಿ ತೇರ್ಗಡೆಯಾದ ಎಸ್. ಸುಭಾಷ್ ಅವರನ್ನು ಅಭಿನಂದಿಸಿ, ಪ್ರಮಾಣಪತ್ರ ವಿತರಿಸಿದರು.

ಆಂದೋಲನ ಡೆಸ್ಕ್

Recent Posts

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

42 mins ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

54 mins ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

2 hours ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

3 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

4 hours ago