ಮನೆ ಗುಡಿಸಿ ಒರೆಸಲು ರೋಬೊ ವಾಕ್ಯೂಮ್ ಕ್ಲೀನರ್‌ಗಳಿಂದಲೇ ಮನೆಮಾತಾಗಿರುವ ಯುರೇಕಾ ಫೋರ್ಬ್ಸ್ ಕಂಪೆನಿಯು ಇತ್ತೀಚೆಗೆ ‘ಸ್ಮಾರ್ಟ್ ಕ್ಲೀನ್ ವಿತ್ ಆಟೋ ಬಿನ್’ ಎಂಬ ನೂತನ ವಾಕ್ಯೂಮ್ ಕ್ಲೀನರನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ಕ್ಲೀನ್ ವಾಕ್ಯೂಮ್ ಕ್ಲೀನರ್‌ನಲ್ಲಿ ಎರಡು ಸಾಧನಗಳಿವೆ. ಒಂದು ಕಸದಬುಟ್ಟಿಯಂತಿರುವ ದೊಡ್ಡ ಸಾಧನ. ಇದರಲ್ಲಿ ೪ ಲೀ. ಸಾಮರ್ಥ್ಯದ ಚೀಲವಿದ್ದು, ಇದರಲ್ಲಿ ಕಸ, ದೂಳು ಸಂಗ್ರಹಿಸಬಹುದಾಗಿದೆ. ಪ್ರಬಲವಾದ ಹೀರಿಕೊಳ್ಳುವ ವ್ಯವಸ್ಥೆ ಇದರಲ್ಲಿದ್ದು, ಮನೆಯ ತುಂಬಾ ಸುತ್ತಾಡಿ ಗುಡಿಸಿ ಒರೆಸುವ ಚಕ್ರಾಕಾರದ ರೋಬೊ ಎರಡನೇ ಸಾಧನ. ಅತ್ಯಾಧುನಿಕವಾದ ಲಿಡಾರ್ ೩.೦ ನೇವಿಗೇಶನ್ ತಂತ್ರಜ್ಞಾನ ಅಡಕವಾಗಿರುವ ಈ ಚಕ್ರಾಕಾರದ ರೋಬೊ ನೆಲವನ್ನು ಸ್ವಚ್ಛಗೊಳಿಸುವುದಕ್ಕಾಗಿ ಆರಂಭದಲ್ಲಿ ತಾನೇ ಮನೆಯೊಳಗೆ ಸುತ್ತಾಡಿ ನಕ್ಷೆ ರಚಿಸಿಕೊಳ್ಳುತ್ತದೆ. ಅಲ್ಲದೆ ಮರ್, ಟೈಲ್ಸ್, ಮಾರ್ಬಲ್ ಮತ್ತು ಕಾರ್ಪೆಟ್‌ಗಳನ್ನು ಸ್ವಚ್ಛಗೊಳಿಸುವ ಸಾಮರ್ಥ್ಯ ಹೊಂದಿದೆ.

ಇನ್ನು ಇದನ್ನು ಸ್ಮಾರ್ಟ್ ಲೈಫ್ ಆಪ್ ಮೂಲಕ ನಿಯಂತ್ರಿಸಬಹುದಾಗಿದೆ. ಅಮೆಜಾನ್‌ನ ಅಲೆಕ್ಸಾ ಅಥವಾ ಗೂಗಲ್ ಅಸಿಸ್ಟೆಂಟ್ ಮೂಲಕ ಧ್ವನಿಯಿಂದಲೇ ಇದನ್ನು ನಿಯಂತ್ರಿಸಬಹುದು.

ಈ ಯಂತ್ರವು ಮೂರು ಕೆಲಸಗಳನ್ನು ಮಾಡಲಿದ್ದು, ಗುಡಿಸುವುದು, ಗುಡಿಸಿ ಸಂಗ್ರಹಿಸಿದ ಕಸವನ್ನು ಸ್ವಯಂಚಾಲಿತವಾಗಿ ಕಸದ ಬುಟ್ಟಿಗೆ ಸೇರಿಸುವುದು ಮತ್ತು ಒದ್ದೆ ಬಟ್ಟೆಯಲ್ಲಿ ನೆಲವನ್ನು ಒರೆಸುವ ಕೆಲಸ ಮಾಡುತ್ತದೆ. ಈ ಯಂತ್ರವನ್ನು ಚಾಲನೆ ಮಾಡಿದ ತಕ್ಷಣ ಅದು ಎಲ್ಲ ಕೊಠಡಿಗಳಿಗೂ ಚಲಿಸಿ ತಾನಾಗಿಯೇ ಮ್ಯಾಪಿಂಗ್ ಮಾಡಿಕೊಳ್ಳುತ್ತದೆ.

ಮರುದಿನವೂಅದೇ ಪಥದಲ್ಲಿ ತಿರಗಾಡುತ್ತಾ ಸ್ವಚ್ಛತಾ ಕೆಲಸವನ್ನು ಮಾಡುತ್ತದೆ. ಇದರಲ್ಲಿ ೫,೦೦೦ ಎಂಎಎಚ್ ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದ್ದು, ನಿರಂತರವಾಗಿ ಬಳಸಿದರೆ ಸುಮಾರು ೫ ಗಂಟೆಗಳ ಕಾಲ ಕೆಲಸ ಮಾಡಬಹು ದಾಗಿದೆ. ನಂತರ ರೀಚಾರ್ಚ್ ಮಾಡಿಕೊಳ್ಳಲು ಚಕ್ರಾಕಾರದ ರೋಬೊ ತಾನಾಗಿಯೇ ಬಂದು ಚಾರ್ಜರ್‌ಗೆ ಸೇರಿಕೊಳ್ಳುತ್ತದೆ. ಚಾರ್ಜಿಂಗ್ ಆಗುತ್ತದೆ. ಇದರ ಸದ್ಯದ ಮಾರುಕಟ್ಟೆಯ ಬೆಲೆ ೩೪,೯೯೯ ರೂ. ಆಗಿದೆ.

ಇದರ ಮತ್ತೊಂದು ವಿಶೇಷವೆಂದರೆ ಈ ಸ್ಮಾರ್ಟ್ ಕ್ಲೀನ್ ವಾಕ್ಯೂಮ್ ಕ್ಲೀನರ್ ಬೆಕ್ಕು, ನಾಯಿ ಸಾಕುವವರಿಗೆ ಹೆಚ್ಚಿನ ಅನುಕೂಲವಾಗಿದ್ದು, ನೆಲ ಅಥವಾ ಸೋಫಾ ಮೇಲೆ ಉದುರುವ ಅವುಗಳ ರೋಮಗಳನ್ನೂ ಸುಲಭವಾಗಿ ಸ್ವಚ್ಛಗೊಳಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

8 mins ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

28 mins ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

48 mins ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

1 hour ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

1 hour ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

2 hours ago