ಮನೆ ಗುಡಿಸಿ ಒರೆಸಲು ರೋಬೊ ವಾಕ್ಯೂಮ್ ಕ್ಲೀನರ್‌ಗಳಿಂದಲೇ ಮನೆಮಾತಾಗಿರುವ ಯುರೇಕಾ ಫೋರ್ಬ್ಸ್ ಕಂಪೆನಿಯು ಇತ್ತೀಚೆಗೆ ‘ಸ್ಮಾರ್ಟ್ ಕ್ಲೀನ್ ವಿತ್ ಆಟೋ ಬಿನ್’ ಎಂಬ ನೂತನ ವಾಕ್ಯೂಮ್ ಕ್ಲೀನರನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ಕ್ಲೀನ್ ವಾಕ್ಯೂಮ್ ಕ್ಲೀನರ್‌ನಲ್ಲಿ ಎರಡು ಸಾಧನಗಳಿವೆ. ಒಂದು ಕಸದಬುಟ್ಟಿಯಂತಿರುವ ದೊಡ್ಡ ಸಾಧನ. ಇದರಲ್ಲಿ ೪ ಲೀ. ಸಾಮರ್ಥ್ಯದ ಚೀಲವಿದ್ದು, ಇದರಲ್ಲಿ ಕಸ, ದೂಳು ಸಂಗ್ರಹಿಸಬಹುದಾಗಿದೆ. ಪ್ರಬಲವಾದ ಹೀರಿಕೊಳ್ಳುವ ವ್ಯವಸ್ಥೆ ಇದರಲ್ಲಿದ್ದು, ಮನೆಯ ತುಂಬಾ ಸುತ್ತಾಡಿ ಗುಡಿಸಿ ಒರೆಸುವ ಚಕ್ರಾಕಾರದ ರೋಬೊ ಎರಡನೇ ಸಾಧನ. ಅತ್ಯಾಧುನಿಕವಾದ ಲಿಡಾರ್ ೩.೦ ನೇವಿಗೇಶನ್ ತಂತ್ರಜ್ಞಾನ ಅಡಕವಾಗಿರುವ ಈ ಚಕ್ರಾಕಾರದ ರೋಬೊ ನೆಲವನ್ನು ಸ್ವಚ್ಛಗೊಳಿಸುವುದಕ್ಕಾಗಿ ಆರಂಭದಲ್ಲಿ ತಾನೇ ಮನೆಯೊಳಗೆ ಸುತ್ತಾಡಿ ನಕ್ಷೆ ರಚಿಸಿಕೊಳ್ಳುತ್ತದೆ. ಅಲ್ಲದೆ ಮರ್, ಟೈಲ್ಸ್, ಮಾರ್ಬಲ್ ಮತ್ತು ಕಾರ್ಪೆಟ್‌ಗಳನ್ನು ಸ್ವಚ್ಛಗೊಳಿಸುವ ಸಾಮರ್ಥ್ಯ ಹೊಂದಿದೆ.

ಇನ್ನು ಇದನ್ನು ಸ್ಮಾರ್ಟ್ ಲೈಫ್ ಆಪ್ ಮೂಲಕ ನಿಯಂತ್ರಿಸಬಹುದಾಗಿದೆ. ಅಮೆಜಾನ್‌ನ ಅಲೆಕ್ಸಾ ಅಥವಾ ಗೂಗಲ್ ಅಸಿಸ್ಟೆಂಟ್ ಮೂಲಕ ಧ್ವನಿಯಿಂದಲೇ ಇದನ್ನು ನಿಯಂತ್ರಿಸಬಹುದು.

ಈ ಯಂತ್ರವು ಮೂರು ಕೆಲಸಗಳನ್ನು ಮಾಡಲಿದ್ದು, ಗುಡಿಸುವುದು, ಗುಡಿಸಿ ಸಂಗ್ರಹಿಸಿದ ಕಸವನ್ನು ಸ್ವಯಂಚಾಲಿತವಾಗಿ ಕಸದ ಬುಟ್ಟಿಗೆ ಸೇರಿಸುವುದು ಮತ್ತು ಒದ್ದೆ ಬಟ್ಟೆಯಲ್ಲಿ ನೆಲವನ್ನು ಒರೆಸುವ ಕೆಲಸ ಮಾಡುತ್ತದೆ. ಈ ಯಂತ್ರವನ್ನು ಚಾಲನೆ ಮಾಡಿದ ತಕ್ಷಣ ಅದು ಎಲ್ಲ ಕೊಠಡಿಗಳಿಗೂ ಚಲಿಸಿ ತಾನಾಗಿಯೇ ಮ್ಯಾಪಿಂಗ್ ಮಾಡಿಕೊಳ್ಳುತ್ತದೆ.

ಮರುದಿನವೂಅದೇ ಪಥದಲ್ಲಿ ತಿರಗಾಡುತ್ತಾ ಸ್ವಚ್ಛತಾ ಕೆಲಸವನ್ನು ಮಾಡುತ್ತದೆ. ಇದರಲ್ಲಿ ೫,೦೦೦ ಎಂಎಎಚ್ ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದ್ದು, ನಿರಂತರವಾಗಿ ಬಳಸಿದರೆ ಸುಮಾರು ೫ ಗಂಟೆಗಳ ಕಾಲ ಕೆಲಸ ಮಾಡಬಹು ದಾಗಿದೆ. ನಂತರ ರೀಚಾರ್ಚ್ ಮಾಡಿಕೊಳ್ಳಲು ಚಕ್ರಾಕಾರದ ರೋಬೊ ತಾನಾಗಿಯೇ ಬಂದು ಚಾರ್ಜರ್‌ಗೆ ಸೇರಿಕೊಳ್ಳುತ್ತದೆ. ಚಾರ್ಜಿಂಗ್ ಆಗುತ್ತದೆ. ಇದರ ಸದ್ಯದ ಮಾರುಕಟ್ಟೆಯ ಬೆಲೆ ೩೪,೯೯೯ ರೂ. ಆಗಿದೆ.

ಇದರ ಮತ್ತೊಂದು ವಿಶೇಷವೆಂದರೆ ಈ ಸ್ಮಾರ್ಟ್ ಕ್ಲೀನ್ ವಾಕ್ಯೂಮ್ ಕ್ಲೀನರ್ ಬೆಕ್ಕು, ನಾಯಿ ಸಾಕುವವರಿಗೆ ಹೆಚ್ಚಿನ ಅನುಕೂಲವಾಗಿದ್ದು, ನೆಲ ಅಥವಾ ಸೋಫಾ ಮೇಲೆ ಉದುರುವ ಅವುಗಳ ರೋಮಗಳನ್ನೂ ಸುಲಭವಾಗಿ ಸ್ವಚ್ಛಗೊಳಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

1 hour ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

1 hour ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

3 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

4 hours ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

4 hours ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

4 hours ago