ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಸುದ್ದಿ.ಇಂಜಿನಿಯರಿಂಗ್ ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಪಿಎಸ್‌ಯು ಉದ್ಯೋಗಗಳಿಗೆ GATE(ಗೇಟ್ ) ಪ್ರಮುಖ ಅರ್ಹತಾ ಪರೀಕ್ಷೆಯಾಗಿದೆ. ಇಂಡಿಯನ್ ಇನ್ಸ್‌ಟಿ ಟ್ಯೂಟ್ ಆಫ್‌ ಟೆಕ್ನಾಲಜಿ (ಐಐಟಿ) ಗುವಾಹಟಿಯು ಗ್ರ್ಯಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್) ೨೦೨೬ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಗೇಟ್

೨೦೨೫ಕ್ಕಾಗಿ ನೋಂದಣಿ ಪ್ರಕ್ರಿಯೆ ಸಹ ಆರಂಭವಾಗಿದೆ. ಗೇಟ್ (GATE))೨೦೨೬ ಅನ್ನು ಐಐಟಿ ಗುವಾಹಟಿ ಆಯೋಜಿಸುತ್ತಿದೆ. ಹೀಗಾಗಿ ಐಐಟಿ ಗುವಾಹಟಿ ಗೇಟ್-೨೦೨೬ರ ಅಧಿಕೃತ ವೆಬ್ ಸೈಟ್‌ಗೆ ಭೇಟಿ ನೀಡುವ ಮೂಲಕ ನೋಂದಣಿ ಮಾಡಬಹುದು. ಗೇಟ್ ೨೦೨೬ಕ್ಕೆ ನೋಂದಾಯಿಸಲು ಸೆ.೨೮ ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿದ್ದು, ಸೆ.೨೮ರವರೆಗೆ ಆನ್ ಲೈನ್ ನೋಂದಣಿ ತೆರೆದಿರುತ್ತದೆ.

ಪರೀಕ್ಷೆಯು ೨೦೨೬ರ -.೭,೮,೧೪ ಮತ್ತು ೧೫ರಂದು ನಡೆಯಲಿದೆ. ಮಾ.೧೯ರಂದು ಫಲಿತಾಂಶ ಪ್ರಕಟವಾಗಲಿದೆ. ಆದರೂ ಪರೀಕ್ಷಾ ವೇಳಾಪಟ್ಟಿ ಬದಲಾಗುವ ಸಾಧ್ಯತೆ ಇದೆ ಎಂದು ಐಐಟಿ ಗುವಾಹಟಿ ತಿಳಿಸಿದೆ. ಹೀಗಾಗಿ ನಿಯಮಿತವಾಗಿ ಐಐಟಿ ಗುವಾಹಟಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಿರಿ. ಗೇಟ್  (GATE) ಎಂದರೇನು ಮತ್ತು ಪಿಎಸ್‌ಯು (PSU)ಗಳಲ್ಲಿ ಉದ್ಯೋಗ ಪಡೆಯಲು ಇದು ಹೇಗೆ ಅಗತ್ಯ? ಗೇಟ್ ರಾಷ್ಟ್ರಮಟ್ಟದ ಆಪ್ಟಿಟ್ಯೂಡ್ ಪರೀಕ್ಷೆಯಾಗಿದ್ದು, ಇದನ್ನು ಇಂಜಿನಿಯರಿಂಗ್, ವಿಜ್ಞಾನ, ವಾಣಿಜ್ಯ,ವಾಸ್ತುಶಿಲ್ಪ ಸೇರಿದಂತೆ ಮಾನವಿಕ ವಿಷಯಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತದೆ.

ಗೇಟ್ ಅನ್ನು ಐಐಟಿ (IIT) ಮತ್ತು ಐಐಎಸ್‌ಸಿ (IISc)ಗಳು ಜಂಟಿಯಾಗಿ ಆಯೋಜಿಸುತ್ತವೆ. ಐಐಟಿ ಮತ್ತು ಐಐಎಸ್‌ಸಿಗಳಲ್ಲಿ ಸ್ನಾತಕೋತ್ತರ ಅಥವಾ ಪಿಜಿ ಕಾರ್ಯಕ್ರಮಗಳಿಗೆ ಪ್ರವೇಶವು ಗೇಟ್ (GATE) PSU ಗಳಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಗೇಟ್ ಕನಿಷ್ಠ ಅರ್ಹತೆಯಾಗಿದೆ. ನೀವು ಗೇಟ್ ಉತ್ತೀರ್ಣರಾದ ನಂತರ ಮುಂದಿನ ಮೂರು ವರ್ಷಗಳವರೆಗೆ ಅದು ಮಾನ್ಯವಾಗಿರುತ್ತದೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

10 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

10 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

11 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

12 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

12 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

12 hours ago